ಬೆಳಗಾವಿ | ಬಿಮ್ಸ್‌ನಲ್ಲಿ 3 ತಿಂಗಳಲ್ಲೇ 41 ಶಿಶುಗಳು ಸಾವು

Date:

ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನಿರಂತರವಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದರೂ, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಸ್ಪತ್ರೆಯಾಗಿರುವ ಬಿಮ್ಸ್‌ನಲ್ಲಿ ಪ್ರತಿದಿನ 25ಕ್ಕೂ ಹೆಚ್ಚು ಹೆರಿಗೆಗಳು ಆಗುತ್ತವೆ. ಹೀಗಾಗಿ, ಬಿಮ್ಸ್‌ಗೆ ಶಿಶುಗಳು ಮತ್ತು ತಾಯಂದಿರ ಆರೋಗ್ಯಕ್ಕಾಗಿ ಉತ್ತಮ ಆರೋಗ್ಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯವೂ ಹಲವು ವರ್ಷಗಳಿಮದ ಇದೆ. ಆದರೆ, ಹೆಚ್ಚಿನ ಸೌಲಭ್ಯಗಳು ಆಸ್ಪತ್ರೆಗೆ ದೊರೆತಿಲ್ಲ ಎಂಬ ಆರೋಪಗಳಿವೆ. ಈ ನಡುವೆ, ಮೂರೇ ತಿಂಗಳಲ್ಲಿ 41 ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಬಿಮ್ಸ್‌ ಆಸ್ಪತ್ರೆಯಲ್ಲಿ ಆಗಸ್ಟ್‌ನಲ್ಲಿ 12, ಸೆಪ್ಟಂಬರ್​ನಲ್ಲಿ 18 ಹಾಗೂ ಅಕ್ಟೋಬರ್​ನಲ್ಲಿ 11 ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯಲ್ಲಿರುವ ಏರ್‌ ಕಂಪ್ರೆಸರ್ ಕೆಟ್ಟಿರುವುದೇ ಶಿಶುಗಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯಲ್ಲಿ ಎರಡು ಏರ್ ಕಂಪ್ರೆಸರ್‌ಗಳಿವೆ. ಅವುಗಳಲ್ಲಿ ಒಂದು ಏರ್‌ ಕಂಪ್ರೆಸರ್‌ ಮೂರು ತಿಂಗಳ ಹಿಂದೆಯೇ ಕೆಟ್ಟಿದೆ. ಇನ್ನೂ ಅದನ್ನು ರಿಪೇರಿ ಮಾಡಿಲ್ಲ. ಪರಿಣಾಮ, ಶಿಶುಗಳಿಗೆ ಸರಿಯಾಗಿ ಆಮ್ಲಜನಕ ಪೂರೈಕೆಯಾಗದೆ, ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

“ಶಿಶುಗಳು ಸಾವನ್ನಪ್ಪಿರುವುದ ಸತ್ಯ. ಸಾವಿಗೆ ಕಾರಣಗಳೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಒಂದು ಏರ್‌ ಕಂಪ್ರೆಸರ್ ಕೆಟ್ಟಿದೆ. ಹೊಸ ಏರ್ ಕಂಪ್ರೆಸರ್ ಖರೀದಿಗೆ ಟೆಂಡರ್ ಕರೆಯಲಾಘಿದೆ. ಅವಧಿಪೂರ್ವ ಪ್ರಸವ, ಶಿಶುಗಳ ತೂಕ ಕಡಿಮೆ ಸೆರಿದಂತೆ ನಾನಾ ಕಾರಣಗಳಿಂದ ಮಕ್ಕಳು ಸಾವನ್ನಪ್ಪಿದ್ದಾರೆ” ಎಂದು ಬಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಅಶೋಕ ಶೆಟ್ಟಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...