ಗೋಕಾಕ್ | ಕೋ-ಆಪರೇಟಿವ್‌ ಬ್ಯಾಂಕ್‌ನಿಂದ ₹74 ಕೋಟಿ ವಂಚನೆ ಆರೋಪ: 14 ಜನರ ವಿರುದ್ಧ ದೂರು ದಾಖಲು

Date:

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕಿನಲ್ಲಿ 74.87 ಕೋಟಿ ವಂಚನೆಯ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್‌ 14 ಸಿಬ್ಬಂದಿಗಳ ವಿರುದ್ಧ ಬ್ಯಾಂಕ್ ಠೇವಣಿದಾರರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಫಿಕ್ಸ್ ಡೆಪಾಸಿಟ್ ಮಾಡಿದ ಹಣದ ಮೇಲೆ ಸಿಸಿ ಮತ್ತು ಡೆಪಾಸಿಟ್ ಸಾಲ, ಪಿಗ್ನಿ ಸಾಲ ಎಂದು ಹೇಳಿ ಪಡೆದು ವಂಚನೆ ಮಾಡಿದ್ದಾರೆ. ಸಾಲ ಪಡೆಯುವ ಮುನ್ನ 6 ಕೋಟಿ 90 ಲಕ್ಷ ಡೆಪಾಸಿಟ್ ಮಾಡಿದ್ದ ಖದೀಮರು, ಇದೇ ಹಣದ ಮೇಲೆ ಬರೋಬ್ಬರಿ 74 ಕೋಟಿ ಸಾಲದ ರೂಪದಲ್ಲಿ ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

2021ರಿಂದ 2024ರ ವರೆಗೆ ಬ್ಯಾಂಕಿನ ಓರ್ವ ಸಿಬ್ಬಂದಿ ಸೇರಿದಂತೆ 14 ಜನರು ಹಣವನ್ನು ಲೂಟಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಸಾಗರ ಸಬಕಾಳೆ, ವಿಶ್ವನಾಥ ಬಾಗಡೆ, ಸಂಭಾಜೀ ಗುರುಪಾದೆ, ಸಿದ್ದಪ್ಪ ಪವಾರ, ದಯಾನಂದ ಉಪ್ಪಿನ ಸೇರಿ ತಮ್ಮ‌ ಸಂಬಂಧಿಕರ ಜೊತೆಗೂಡಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಂಜನಾ ಸಬಕಾಳೆ, ಮಲ್ಲವ್ವ ಸಬಕಾಳೆ, ಗೌರವ್ವ ಹವಾಲ್ದಾರ, ಚಂದ್ರವ್ವ ಹವಾಲ್ದಾರ, ಪರಸಪ್ಪ ಮಾಳೋಜಿ, ರಾಧಾ ಮಾಳೋಜಿ, ಸಂದೀಪ ಮರಾಠೆ ಹಾಗು ಕಿರಣ ಸುಪಾಲಿ ಎಂಬವರ ವಿರುದ್ಧ ವಂಚನೆ ಆರೋಪ ಹೊರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜುಲೈ 2021ರಿಂದ ಏಪ್ರಿಲ್ 2023ರವರೆಗಿನ ಅವಧಿಯಲ್ಲಿ ಬ್ಯಾಂಕ್‌ಗೆ ವಂಚಿಸಲಾಗಿದೆ. ಈ‌ ಮೊದಲು ಹಂತ ಹಂತವಾಗಿ 6.97 ಕೋಟಿ‌ ಹಣವನ್ನು ಆರೋಪಿಗಳು ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದರು. ಆದರೆ ಮೂರು ವರ್ಷಗಳ ಅವಧಿಯಲ್ಲಿ ‌ಒಟ್ಟು 81.83 ಕೋಟಿ ಹಣವನ್ನು ಆರೋಪಿಗಳು ಸಾಲ ಪಡೆದಿದ್ದರು. ವಾಪಸ್ ಕಟ್ಟಬೇಕಿರುವ 74.86 ಕೋಟಿ‌ ಸಾಲ ಪಾವತಿಸದೇ ವಂಚಿಸಲಾಗಿದೆ. ಬ್ಯಾಂಕ್‌ನಲ್ಲಿ ಇದ್ದುಕೊಂಡೇ ಸಂಬಂಧಿಕರು,‌ ಸ್ನೇಹಿತರಿಗೆ ಸಿಬ್ಬಂದಿಗಳು ಲೋನ್ ಮಂಜೂರು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಅಲ್ಲದೇ, ಈ ಕುರಿತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಅವರಿಗೂ ಮಾಹಿತಿ ನೀಡಿದ್ದಾರೆ.

ಗೋಕಾಕ್ 1

ಬ್ಯಾಂಕ್ ಸಿಬ್ಬಂದಿ ಹಣ ಲಪಟಾಯಿಸಿರುವ ಘಟನೆ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಗ್ರಾಹಕರು ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸಿಬ್ಬಂದಿ ಮತ್ತು ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಾವು ಕಷ್ಟಪಟ್ಟು ದುಡಿದ ಹಣ ಠೇವಣಿ ಇಟ್ಟಿದ್ದೇವೆ. ನಮ್ಮ ಹಣ ನಮಗೆ ಮರಳಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷ ಜಿತೇಂದ್ರ ಮಾಂಗಳೇಕರ ಠೇವಣಿದಾರರ ಹಣ ಸುರಕ್ಷಿತವಾಗಿದೆ ಎಂದು ಠೇವಣಿದಾರರಿಗೆ ಲಿಖಿತವಾಗಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲ ಸೇವೆಗೂ ನಂದಿನಿ ತುಪ್ಪ ಬಳಸಿ; ಸರ್ಕಾರದಿಂದ ಹೊಸ ಆದೇಶ

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್, “ಎರಡು ದಿನಗಳ ಹಿಂದೆ ಮಹಾಲಕ್ಷ್ಮಿ ಬ್ಯಾಂಕ್ ‌ಚೇರ್ಮನ್ ಜೀತೇಂದ್ರ ದೂರು ನೀಡಿದ್ದಾರೆ. ಬ್ಯಾಂಕ್ ಸಿಬ್ಬಂದಿ ಸೇರಿ 14 ಆರೋಪಿಗಳು ಸಾಲ ಪಡೆದು ಹಣ ವಾಪಸ್ ಮರಳಿಸದೇ ಮೋಸ ಮಾಡಿದ್ದಾರೆ. ಮೊದಲು ಆರು ಕೋಟಿ ರೂ. ಠೇವಣಿ ಇಟ್ಟು ಬಳಿಕ 74.86 ಕೋಟಿ ಸಾಲ ಪಡೆದಿದ್ದಾರೆ. ಸಾಲ ಮರುವಾಪತಿಸದೇ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ” ಎಂದು ತಿಳಿಸಿದ್ದಾರೆ.

“ಈ ಬ್ಯಾಂಕ್‌ ಗೋಕಾಕನಲ್ಲಿ ಎರಡು, ಚಿಕ್ಕೋಡಿ, ನಿಪ್ಪಾಣಿ, ಘಟಪ್ರಭಾ, ಬೆಳಗಾವಿಯಲ್ಲಿ ತಲಾ ಒಂದು ಬ್ರ್ಯಾಂಚ್ ಹೊಂದಿದೆ. 3 ಸಾವಿರ ಠೇವಣಿದಾರರು ಇದ್ದು, ಏಪ್ರಿಲ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ಶೋಧ ಕಾರ್ಯಕ್ಕೆ ಮೂರು ತಂಡ‌ ರಚನೆ ಮಾಡಲಾಗಿದೆ. ಈ ಕುರಿತು ಮೇಲಾಧಿಕಾರಿಗಳ ಜೊತೆಗೆ ಚರ್ಚಿಸಿ, ಪ್ರಕರಣ ಸಿಐಡಿಗೆ ವರ್ಗಾಯಿಸುವ ಬಗ್ಗೆ ನಿರ್ಧರಿಸಲಾಗುವುದು” ಎಂದು ಎಸ್​ಪಿ ಡಾ.ಭೀಮಾಶಂಕರ ಗುಳೇದ್ ಪ್ರತಿಕ್ರಿಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...