ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

Date:

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ ದಾಳಿಯಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಿ, 50 ಕೆಜಿ 452 ಗ್ರಾಂ ಗಾಂಜಾ ಹಾಗೂ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಅಂದಾಜು ಮೌಲ್ಯ ₹30 ಲಕ್ಷ ಎಂದು ಅಂದಾಜಿಸಲಾಗಿದೆ.

ಜೂನ್‌ನಲ್ಲಿ ಆರಂಭವಾದ ತನಿಖೆ

ಜೂನ್ ತಿಂಗಳಲ್ಲಿ ತಾಜೀಬ ಅಬ್ದುಲ್ ರಜಾಕ ಮುಲ್ಲಾ ಮತ್ತು ಅನುರಾಗ ಉದಯಕುಮಾರ ಯರಳಾನಕರರನ್ನು ಪೊಲೀಸರು ಬಂಧಿಸಿ, ಅವರಿಂದ 5.562 ಕೆಜಿ ಗಾಂಜಾ, ಮೊಬೈಲ್ ಹಾಗೂ ಬೈಕ್ ವಶಪಡಿಸಿಕೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ಮುಂಬೈಗೆ ತೆರಳಿ, ಮುಖ್ಯ ಆರೋಪಿ ಇಸ್ಮಾಯಿಲ್ ಸಯ್ಯದನ ಮಾವ ಅಬ್ದುಲಮಜೀದ ಅಬ್ದುಲಸತ್ಕಾರ ಮುಖಾದಮನ ಮನೆಯಿಂದ 2 ಕೆಜಿ 16 ಗ್ರಾಂ ಗಾಂಜಾ ಪತ್ತೆಹಚ್ಚಿ ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 21ರಂದು ದೊಡ್ಡ ದಾಳಿ

ಆಗಸ್ಟ್ 21ರಂದು ಸದ್ದಾಂ (ಇಸ್ಮಾಯಿಲ್ ಸಯ್ಯದ) ಮತ್ತು ತಾಜೀರ್ ಗುಡುಸಾಬ ಬಸ್ತವಾಡೆ ತಮ್ಮ ಮಾವನನ್ನು ಹಿಂಡಲಗಾ ಜೈಲಿನಲ್ಲಿ ಭೇಟಿ ಮಾಡಲು ಬರಲಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ, ಇನ್ಸಪೆಕ್ಟರ್ ಆರ್. ಗಡ್ಡೆಕರ ನೇತೃತ್ವದ ತಂಡ ಸುಳಗಾ ಗ್ರಾಮದ ಬಳಿಯ ಚಂದಗಡ–ಬೆಳಗಾವಿ ರಸ್ತೆಯಲ್ಲಿ ದಾಳಿ ನಡೆಸಿತು.

ಈ ವೇಳೆ ಇಬ್ಬರ ಜೊತೆಗೆ ಗಾಂಜಾ, ಪಡ್ಲರ್‌ಗಳಾದ ಪ್ರಥಮೇಶ ದಿಲೀಪ ಲಾಡ್, ತೇಜಸ್ ಭೀಮರಾವ್ ವಾಜರ, ಶಿವಕುಮಾರ ಬಾಳಕೃಷ್ಣ ಆಸಬೆ ಮತ್ತು ರಮಜಾನ್ ದಸ್ತಗೀರ ಜಮಾದಾರರನ್ನು ಸಹ ಬಂಧಿಸಲಾಯಿತು.

ವಶಪಡಿಸಿಕೊಂಡ ವಸ್ತುಗಳು

ಗಾಂಜಾ : 50 ಕೆಜಿ 452 ಗ್ರಾಂ, (ಒಟ್ಟು) ಕಾರುಗಳು 2, ಮೋಟಾರ್ಸೈಕಲ್ 1, ಮೊಬೈಲ್‌ಗಳು 13, ಡಿಜಿಟಲ್ ತಕ್ಕಡಿ : 1

ಮಾರಕಾಸ್ತ್ರಗಳು ಹಾಗೂ ₹4,500 ನಗದು ಇತರ 11 ವಸ್ತುಗಳು

ರಾಜ್ಯಗಳ ನಡುವೆ ವಿಸ್ತರಿಸಿದ ಜಾಲ

ತನಿಖೆಯಿಂದ ಸದ್ದಾಂ (ಇಸ್ಮಾಯಿಲ್ ಸಯ್ಯದ) ತನ್ನ ಸಹಚರರೊಂದಿಗೆ ಮಧ್ಯಪ್ರದೇಶದಿಂದ ಗಾಂಜಾ ಖರೀದಿಸಿ ಬೆಳಗಾವಿ, ಹುಬ್ಬಳ್ಳಿ–ಧಾರವಾಡ, ಬೆಂಗಳೂರು, ಗೋವಾ ಹಾಗೂ ಪಕ್ಕದ ರಾಜ್ಯಗಳಿಗೆ ಸರಬರಾಜು ಮಾಡುತ್ತಿದ್ದನೆಂಬುದು ಬೆಳಕಿಗೆ ಬಂದಿದೆ. ಇವನ ವಿರುದ್ಧ ಬೆಳಗಾವಿ, ಹುಬ್ಬಳ್ಳಿ–ಧಾರವಾಡ ಹಾಗೂ ಮಹಾರಾಷ್ಟ್ರದ ಪೂಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...