ಬೆಳಗಾವಿ | ಬಾಬಾಸಾಹೇಬರು ಮನುವಾದಿ ವ್ಯವಸ್ಥೆಗೆ ಸವಾಲಾಗಿದ್ದರು: ಸಿದ್ಧಾರ್ಥ ಸಿಂಗೆ

Date:

ಬಹುಜನ ಸಮಾಜದಲ್ಲಿ ಬಾಬಾಸಾಹೇಬರು ಏಕಾಂಗಿಯಾಗಿ ತಮ್ಮ ವಿದ್ವತ್ ಜ್ಞಾನದಿಂದ ಮನುವಾದಿ ವ್ಯವಸ್ಥೆಗೆ ಸವಾಲಾಗಿದ್ಧರು ಮತ್ತು ಸಂವಿಧಾನವನ್ನು ದೇಶಕ್ಕೆ ಸಮರ್ಪಿಸುವ ಮೂಲಕ ಕಾನೂನಿನ ಮೂಲಕ ಸರ್ವರೂ ಸಮಾನರು ಎಂದು ಸಾರಿದರು ಎಂದು ಬೆಳಗಾವಿ‌ ಜಿಲ್ಲೆ ಭೀಮವಾದ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸಿದ್ಧಾರ್ಥ ಸಿಂಗೆ ಹೇಳಿದರು.

ಜಿಲ್ಲೆಯ ಕಾಗವಾಡ ತಾಲೂಕು ಭೀಮವಾದ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಬಾಬಾಸಾಹೇಬರು ಭಾರತವನ್ನು ಪ್ರಬುದ್ಧ ಭಾರತವನ್ನಾಗಿಸುವ ಸಂಕಲ್ಪ ಮಾಡಿದ್ದರು. ಅವರು ಬುದ್ಧನಿಗೆ ಶರಣಾದ ಅಲ್ಪಾವಧಿಯಲ್ಲೇ ಮಹಾರಾಷ್ಟ್ರದ ನಾಗಪುರ ಹಾಗೂ ಚಂದ್ರಪೂರದಲ್ಲಿ ಲಕ್ಷಾಂತರ ಜನರಿಗೆ ಬೌದ್ಧ ಧಮ್ಮದ ದಿಕ್ಷೆ ನೀಡುವ ಮೂಲಕ ಭಾರತದಲ್ಲಿ ಅವಸಾನವಾಗಿದ್ದ ಬೌದ್ಧ ಧರ್ಮಕ್ಕೆ ಮರುಹುಟ್ಟು ನೀಡಿದರು. ಬುದ್ಧನ ಸಂದೇಶಗಳನ್ನು ಸಂವಿಧಾನದಲ್ಲಿ ಅಳವಡಿಸುವ ಮೂಲಕ ಇದು ಬುದ್ಧ ಭಾರತ’ವೇ ಹೊರತು ಮನುವಾದಿಗಳ ಭಾರತವಲ್ಲ ಎಂಬುದನ್ನು ಸಾಬೀತುಪಡಿಸಿದರು. ಇತ್ತೀಚಿಗೆ ಬಾಬಾಸಾಹೇಬರ ಅನುಯಾಯಿಗಳು ಎನಿಸಿಕೊಂಡವರು ಪುರೋಹಿತಶಾಹಿ ಸಂಸ್ಕೃತಿಗೆ ಗುಲಾಮರಾಗುತ್ತಿರುವುದು ವಿಷಾದನೀಯ. ಇಂದಿನ ಯುವ ಪೀಳಿಗೆ ಬಾಬಾಸಾಹೇಬರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಪ್ರಬುದ್ಧ ಭಾರತವನ್ನು ನಿರ್ಮಾಣ ಮಾಡಲು ಸಂಕಲ್ಪ ಮಾಡಬೇಕಾಗಿದೆ ಎಂದು ಹೇಳಿದರು.

ಸಂಚಾಲಕ ಸಂಜೀವ ಕಾಂಬಳೆ ಮಾತನಾಡಿ, ಅಂಬೇಡ್ಕರರು ಸಂವಿಧಾನ ಸಭೆಗೆ ಆಯ್ಕೆಯಾಗದಂತೆ ಮನುವಾದಿಗಳು ಬಗಿರಥ ಪ್ರಯತ್ನ ಮಾಡಿದ ಹೋರತಾಗಿಯೂ ಬಂಗಾಲದ ನಮೋಶೂದ್ರರು ಬಾಬಾಸಾಹೇಬರನ್ನು ಸಂವಿಧಾನ ಸಭೆಗೆ ಆಯ್ಕೆ ಮಾಡಲು ಸಫಲರಾಗುತ್ತಾರೆ. ಭಾರತದ ವಿಭಜನೆಯ ನಂತರ ಮತ್ತೆ ಅನೇಕ ರಾಜಕೀಯ ಬೆಳವಣಿಗೆಗಳ ನಡುವೆ ಸಂವಿಧಾನ ಸಭೆಗೆ ಆಯ್ಕೆಯಾದ ಬಾಬಾಸಾಹೇಬರು ತಮಗೊಪ್ಪಿಸಿದ ಜವಾಬ್ದಾರಿಯನ್ನು ತಮ್ಮ ಹದಗೆಡುತ್ತಿದ್ದ ಆರೋಗ್ಯವನ್ನು ಲೆಕ್ಕಿಸದೆ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯನ್ನು ಸಾರುವ ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ್ದಾರೆ. ಮೆಣದ ಬತ್ತಿಯಂತೆ ಬಹುಜನ ಭಾರತೀಯರ ಬದುಕಿನಲ್ಲಿ ಬೆಳಕು ಮೂಡಿಸಿದ್ದಾರೆ ಇದರ ಅರಿವು ನಮಗೆಲ್ಲ ಇರಬೇಕು. ಬಾಬಾಸಾಹೇಬರು ನೀಡಿದ ಸಂವಿಧಾನದಿಂದ ಬದುಕು ಕಟ್ಟಿಕೊಂಡಿರುವ ನಾವು ಸಂವಿಧಾನ ರಕ್ಷಣೆಗೆ ಎಲ್ಲ ರೀತಿಯಲ್ಲೂ ಸಜ್ಜಾಗಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯವಾದಿ ಅಮಿತ್ ದೀಕ್ಷಾಂತ್ ಮಾತನಾಡಿ, ಶಿಕ್ಷಣ ಸಂಘಟನೆ ಮತ್ತು ಹೋರಾಟ ಈ ಮೂರು ಸೂತ್ರಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಭೂನ್ಯಾಯ ಮಂಡಳಿ ಸದಸ್ಯ ವಿದ್ಯಾಧರ ದೊಂಡಾರೆ ಸಮಾಜದ ಅಧ್ಯಕ್ಷ ಪ್ರಕಾಶ್ ದೊಂಡಾರೆ ಮಾತನಾಡಿದರು.

ಈ ವರದಿ ಓದಿದ್ದೀರಾ? ಹಾವೇರಿ | ಅಂಬೇಡ್ಕರ್ ದೇಶದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿದ್ದಾರೆ: ಉಡಚಪ್ಪ ಮಾಳಗಿ

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಪರಶುರಾಮ ಟೊಣಪೆ, ಮಹಿಳಾ ಒಕ್ಕೂಟದ ಸಂಗೀತಾ ಕಾಂಬಳೆ, ರೇಖಾ ಬಂಗಾರಿ, ಆರತಿ ಕಾಂಬಳೆ, ನಿಕೀತಾ ಗಡಾದೆ, ಗೀತಾ ಕಾಂಬಳೆ, ಸವಿತಾ ಸರಿಕರ, ವಿಶಾಲ್ ದೊಂಡಾರೆ ರಾಹುಲ್ ಕಾಂಬಳೆ, ಅನಿಲ್ ಕಾಳೆ, ಪ್ರಮೋದ್ ಕಾಂಬಳೆ, ಸಚಿನ್ ಕಾಂಬಳೆ, ಪ್ರಭಾಕರ್ ಕಾಂಬಳೆ ಉಪಸ್ಥಿತರಿದ್ದರು. ಜಿಲ್ಲಾ ಸಂಘಟನಾ ಸಂಚಾಲಕ ವೆಂಕಟೇಶ ಕಾಂಬಳೆ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ರೊಹಿತ ಬಸನಾಯಿಕ ವಂದನಾರ್ಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...