ಬೆಳಗಾವಿ | ಎಟಿಎಂಗೆ ತಾನೇ ತುಂಬಿಸಿದ ಹಣವನ್ನು ತಾನೇ ಕದ್ದ ಬ್ಯಾಂಕ್‌ ಸಿಬ್ಬಂದಿ

Date:

ಬ್ಯಾಂಕ್‌ ಸಿಬ್ಬಂದಿಯೊಬ್ಬ ಎಟಿಎಂಗೆ ಹಣ ತುಂಬಿಸಿ, ಬಳಿಕ ಆ ಹಣವನ್ನು ತಾನೇ ಕದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಹೆಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಸ್ಟೋಡಿಯನ್‌ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣಾ ಸುರೇಶ್ ದೇಸಾಯಿ ಬಂಧಿತ ಆರೋಪಿ. ಈತ ಎಟಿಎಂನಲ್ಲಿ ಹಣ ಕದ್ದಿದ್ದು, ಕದ್ದ ಹಣದಲ್ಲಿ ತನ್ನ ತಾಯಿಗೆ ಚಿನ್ನದ ಸರ ಮಾಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಕೃಷ್ಣ ನಿತ್ಯ ಬ್ಯಾಂಕ್‌ನಿಂದ ಹಣ ತಂದು ನಗರದ ಎಲ್ಲ ಹೆಚ್‌ಡಿಎಫ್‌ಸಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದರು. ನವೆಂಬರ್ 26ರಂದು ಬೆಳಗಾವಿಯ ಕೋರ್ಟ್ ಎದುರಿನ ಹೆಚ್‌ಡಿಎ‌ಫ್‌ಸಿ ಎಟಿಎಂಗೆ ಎಂದಿನಂತೆ ಹಣ ಹಾಕಿ ಹೋಗಿದ್ದಾರೆ. ಅದಾದ, 2 ಗಂಟೆಗೆ ಬಳಿಕ ಮತ್ತೆ ಎಟಿಎಂಗೆ ಬಂದ ಕೃಷ್ಣಾ, ಎಟಿಎಂನ ಲಾಕ್ ಓಪನ್ ಮಾಡಿ 8.65 ಲಕ್ಷ ರೂ. ಹಣ ಕದ್ದು ಪರಾರಿಯಾಗಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಟಿಎಂನಲ್ಲಿ ಹಣ ಕಳ್ಳತನವಾಗಿರುವ ಬಗ್ಗೆ ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಅಧಿಕಾರಿಗಳು ಬೆಳಗಾವಿಯ ಮಾರ್ಕೆಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾದ ವಿಡಿಯೋಗಳನ್ನು ಪರಿಶೀಲಿಸಿದ್ದು, ಆರೋಪಿ ಕೃಷ್ಣಾನನ್ನು ಬಂಧಿಸಿದ್ದಾರೆ.

“ಆರೋಪಿ ಕೃಷ್ಣಾ ಬಳಿ ಎಟಿಎಂ ಕೀಲಿ ಇತ್ತು. ಆ ಕೀಲಿ ಬಳಸಿ ಎಟಿಎಂನಿಂದ 8.65 ಲಕ್ಷ ರೂ. ಹಣ ಕದ್ದಿದ್ದಾನೆ. ಕದ್ದ ಹಣದಲ್ಲಿ ತನ್ನ ತಾಯಿಗಾಗಿ ‌1.54 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಖರೀದಿಸಿದ್ದಾನೆ. ಮೋಜು-ಮಸ್ತಿಗೂ ಹಣ ಬಳಸಿಕೊಂಡಿದ್ದಾನೆ. ಚಿನ್ನದ ಸರ ಮತ್ತು 5.74 ಲಕ್ಷ ರೂ. ಹಣವನ್ನು ಕೃಷ್ಣಾನಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...