ಬೆಳಗಾವಿ | ಸಣ್ಣ ನೀರಾವರಿ ಅಧಿಕಾರಿಗಳಿಗೆ ತಲೆನೋವಾದ ಬ್ಯಾರೇಜ್ ಗೇಟ್ ಕಳ್ಳರು

Date:

ಬೆಳಗಾವಿ ಜಿಲ್ಲೆಯೊಂದರಲ್ಲೇ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ದೂದ್ ಗಂಗಾ, ವೇದಗಂಗಾ ಹೀಗೆ ಏಳು ನದಿಗಳು ಹರಿಯುತ್ತವೆ. ಮಳೆಗಾಲದ ತುಂಬಿಹರಿಯುವ ಈ ನದಿಗಳಿಗೆ ಅಡ್ಡಲಾಗಿ ಅಲ್ಲಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ಹಾಗೂ ಬ್ಯಾರೇಜ್‌ಗಳನ್ನು ನಿರ್ಮಿಸಲಾಗಿದೆ.

ಹೀಗೆ ನಿರ್ಮಿಸಿದ ಬ್ಯಾರೇಜ್‌ಗಳಿಗೆ 170 ಕೆಜಿಗೂ ಅಧಿಕ ತೂಕದ ಬೃಹದಾಕಾರದ ಕಬ್ಬಿಣದ ಗೇಟ್‌ಗಳನ್ನು ಅಳವಡಿಸಲಾಗಿದೆ. ಆದರೆ, ಬ್ಯಾರೇಜ್ ಗೇಟ್ ಕಳ್ಳರ ಹಾವಳಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳನ್ನು ಹೈರಾಣಾಗಿಸಿದೆ. ಈವರೆಗೂ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗವೊಂದರಲ್ಲೇ ಸುಮಾರು 14 ಲಕ್ಷ ಮೌಲ್ಯದ 130ಕ್ಕೂ ಹೆಚ್ಚು ಬ್ಯಾರೇಜ್ ಗೇಟ್‌ಗಳು ಕಳ್ಳತನವಾಗಿವೆ.

ಮಳೆಗಾಲದಲ್ಲಿ ಗೇಟ್‌ಗಳನ್ನು ತೆಗೆದು ಹತ್ತಿರದಲ್ಲಿಯೇ ಇಡಲು ವ್ಯವಸ್ಥೆ ಮಾಡಲಾಗಿರುತ್ತೆ. ಬಹುತೇಕ ಕಡೆ ಈ ಬ್ಯಾರೇಜ್ ಗೇಟ್‌ಗಳನ್ನು ಇಡಲು ಸೂಕ್ತ ವ್ಯವಸ್ಥೆ ಇಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು 170 ಕೆಜಿಗೂ ಅಧಿಕ ತೂಕದ ಬೃಹದಾಕಾರದ ಕಬ್ಬಿಣದ ಗೇಟ್‌ಗಳನ್ನು ಕಳ್ಳತನ ಮಾಡುತ್ತಿದ್ದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಲೆನೋವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಕ್ಕೇರಿ ತಾಲೂಕಿನ ದಡ್ಡಿ, ಸಲಾಮವಾಡಿ, ಶೆಟ್ಟಿಹಳ್ಳಿ ಭಾಗದಲ್ಲಿ 62 ಬ್ಯಾರೇಜ್ ಗೇಟ್‌ಗಳು ಹಾಗೂ ಬಸಾಪುರ, ಮಲ್ಲಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ನ 65 ಗೇಟ್‌ಗಳ ಕಳ್ಳತನವಾಗಿದ್ದು, ಈ ಕುರಿತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಮೀಪದ ಪೊಲೀಸ್ ಠಾಣೆಗಳಿಗೆ ದೂರು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಇಡೀ ಬೆಳಗಾವಿ ಜಿಲ್ಲೆಯಲ್ಲಿ ಬ್ಯಾರೇಜ್ ಗೇಟ್‌ಗಳ ಕಳ್ಳತನ ಮಾಡುತ್ತಿದ್ದಾರೆ. ಕಳ್ಳರ ಪತ್ತೆಗೆ ಹಾಗೂ ಕಳ್ಳತನ ತಡೆಯಲು ಪೊಲೀಸರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಕೇವಲ ಬೆಳಗಾವಿ ಅಷ್ಟೇ ಅಲ್ಲ ಪಕ್ಕದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟದಲ್ಲೂ ಬ್ಯಾರೇಜ್ ಗೇಟ್ ಕಳ್ಳರ ಹಾವಳಿ ಹೆಚ್ಚಾಗಿದೆ. ಬರಗಾಲದ ಮಧ್ಯೆ ಬ್ಯಾರೇಜ್‌ಗಳ ಬಳಿ ನೀರು ತಡೆಯಲು ಸಹ ತೊಂದರೆ ಆಗುತ್ತಿದೆ. ಹೀಗಾಗಿ ಬ್ರಿಡ್ಜ್ ಕಮ್ ಬ್ಯಾರೇಜ್‌ಗಳ ಬಳಿ ಮಿನಿ ಗೋದಾಮು ನಿರ್ಮಿಸಿ ಗೇಟ್‌ಗಳನ್ನು ಸುರಕ್ಷಿತವಾಗಿಡಲಿ ಎಂಬುದು ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...