ಬೆಳಗಾವಿ | ಬಸವಣ್ಣ; ಸಮಾಜೋಧಾರ್ಮಿಕ, ರಾಜಕೀಯ, ಆರ್ಥಿಕ ತತ್ವಗಳ ಆಧ್ಯಾತ್ಮಿಕ ವಿಜ್ಞಾನಿ: ಡಾ. ಅವಿನಾಶ ಕವಿ

Date:

ಶರಣ ಸಂಸ್ಕೃತಿ ಶಿಬಿರ ಮಕ್ಕಳಿಗಾಗಿ ಆಯೋಜಿಸಿರುವುದು ಮುಂದಿನ ಜನಾಂಗಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಇದರಿಂದ ವೈಜ್ಞಾನಿಕ, ವೈಚಾರಿಕತೆಯ ಮನೋಭಾವಗಳ ಜೊತೆಗೆ ಏಕದೇವೋಪಾಸನೆಯ ಕುರಿತು ಅರಿವು ಮೂಡಿ ಲಿಂಗಾಯತ ಧರ್ಮ ಉಳಿಸಿಕೊಂಡು ಬರಲು ಸಾಧ್ಯವಿದೆ. ಬಸವಣ್ಣನವರು ಧಾರ್ಮಿಕ, ಸಾಮಾಜಿಕ, ರಾಜಕೀಯ, ಆರ್ಥಿಕ ತತ್ವಗಳ ಆಧ್ಯಾತ್ಮಿಕ ವಿಜ್ಞಾನಿ ಎಂದು ಕೆ.ಎಲ್.ಇ ಸಂಸ್ಥೆಯ ಜೆ.ಎನ್.ಎಮ್.ಸಿ ವೈದ್ಯಕೀಯ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಅವಿನಾಶ ಕವಿ ಹೇಳಿದರು.

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಬೈಲೂರ ಗ್ರಾಮದ ನಿಷ್ಕಲ ಮಂಟಪ ಚೆನ್ನಬಸವಣ್ಣನವರ ಸಭಾಭವನದಲ್ಲಿ ನಿಜಗುಣಾನಂದ ಸ್ವಾಮಿಗಳ ನೇತೃತ್ವದಲ್ಲಿ ಆಯೋಜಿಸಿದ ಶರಣ ಸಂಸ್ಕ್ರತಿ ಶಿಬಿರ ಕಾರ್ಯಕ್ರಮದಲ್ಲಿ ಶಿವಯೋಗದಲ್ಲಿ ವೈಜ್ಞಾನಿಕತೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡಿ, ಲಿಂಗಾಯತ ಧರ್ಮದಲ್ಲಿ ಮುಖ್ಯವಾಗಿ ಮೂರು ಸಿದ್ಧಾಂತ, ತತ್ವಗಳು (ಅಷ್ಟಾವರಣ, ಪಂಚಾಚಾರ, ಷಟಸ್ಥಲ) ಇವೆ. ಅವು ಬಸವಣ್ಣನವರು, ಹಾಗೂ ಸಮಕಾಲೀನ ಶರಣರು ತಮ್ಮ ದೈನಂದಿನ ಜೀವನದ ಕುರಿತು ದಾಖಲಿಸುವ ಮೂಲಕ ಜಗತ್ತಿನ ಯಾವ ಸಾಹಿತ್ಯಕ್ಕೂ ಸರಿಸಾಟಿಯಾಗದೆ ಅತ್ಯಂತ ಉನ್ನತ ಸ್ಥಾನದಲ್ಲಿ ಬಸವಾದಿ ಶರಣರ ವಚನ ಸಾಹಿತ್ಯ ನಿಲ್ಲುತ್ತದೆ ಎಂದರು.

ವಿಶ್ವ ಅರೋಗ್ಯ ಸಂಸ್ಥೆಯು ಆರೋಗ್ಯ ಎಂದರೆ ಒಬ್ಬ ವ್ಯಕ್ತಿಯ ಸಂಪೂರ್ಣ ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಸಮತೋಲನ ಸ್ಥಿತಿ ಎಂದು ತಿಳಿಸಿದ್ದಾರೆ. ಅದು ನಮ್ಮ ಚೆನ್ನಬಸವಣ್ಣನವರ ಕರಣಹಸಿಗೆ ಎಂಬ ವಚನ ಗ್ರಂಥದಲ್ಲಿದೆ. ಜೊತೆಗೆ ಮನುಷ್ಯ ತನ್ನ ಆಹಾರ, ನಿದ್ರೆ, ಮಾತು, ಮಿತವಾಗಿರಬೇಕು ಎಂದು ವಚನಗಳಲ್ಲಿ ಉಲ್ಲೇಖಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಷ್ಟಲಿಂಗ ಕೇವಲ ಲಿಂಗಾಯತ ಧರ್ಮದ ಲಾಂಛನವಾಗಿ, ಪೂಜೆ ಮಾಡುವುದಷ್ಟೇ ಅಲ್ಲದೇ ಇದು ಸಾಮಾಜಿಕ, ಆರ್ಥಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ, ಮಾನಸಿಕ ಆರೋಗ್ಯ, ದೈಹಿಕ ಆರೋಗ್ಯ, ಆಧ್ಯಾತ್ಮಿಕ, ತತ್ವಜ್ಞಾನಗಳ ಕುರಿತು ಸಮಗ್ರವಾಗಿ ಮಾರ್ಗದರ್ಶಿಯಾಗಿ ಇಷ್ಟಲಿಂಗವೂ ವೈಜ್ಞಾನಿಕ ಪರಭಾಷೆಯ ಅಂಶಗಳನ್ನು ಹೊಂದಿದ್ದು, ಮಕ್ಕಳಿಗೆ ಇಷ್ಟಲಿಂಗ ಸಂಸ್ಕಾರ ಅತ್ಯಾವಶ್ಯಕವಾಗಿದೆ ಎಂದರು.

ಇಷ್ಟಲಿಂಗದ ಕುರಿತು ಶಿಬಿರಗಳು ನಡೆದಾಗ ಮನಸ್ಸು, ಭಾವನೆಗಳನ್ನು ನಿತ್ಯ ಚೈತನ್ಯವಾಗಿರಿಸಲು ಸಹಕಾರಿಯಾಗುತ್ತದೆ. ಬಸವಣ್ಣನವರು ಧಾರ್ಮಿಕ, ಸಾಮಾಜಿಕ, ರಾಜಕೀಯ, ಆರ್ಥಿಕ ತತ್ವಗಳ ಆಧ್ಯಾತ್ಮಿಕ ವಿಜ್ಞಾನಿ ಎಂದರು.

ಈ ಸಂದರ್ಭದಲ್ಲಿ ಬಸವಧರ್ಮ ಪೀಠದ ಬಸವ ದೇವರು, ಶಿಕ್ಷಕ ಮಹಾಂತೇಶ ತೋರಣಗಟ್ಟಿ, ಬಸವರಾಜ ಲದ್ದಿಮಠ, ರುದ್ರಪ್ಪ ಇಟಗಿ, ರವಿ ಪಾಟೀಲ, ಶಕ್ರಣ್ಣಾ ಪತ್ತಾರ,  ಸಂಗಮೇಶ ಹಿರೇಮಠ, ನಾಗೇಶ ಬೆಣ್ಣಿ, ಶಿವಾನಂದ ಮೆಟ್ಯಾಲ, ಫಕ್ಕೀರಗೌಡ ಹಾದಿಮನಿ, ರವಿ ಮಡಿವಾಳರ, ಚನ್ನಪಗೌಡ ಪಾಟೀಲ, ಸಂಜು ಕೋಟಗಿ, ಗದಿಗೇಪ್ಪ ರುಮೋಜಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಬೆಳಗಾವಿ | ಪೋಷಣ್ ಆ್ಯಪ್ ಹ್ಯಾಕ್; ಲಿಂಕ್ ಕಳುಹಿಸಿ ನಿಮ್ಮ ಹಣ ವಂಚಿಸುತ್ತಾರೆ: ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ನಾಗರಾಜ ಹಿರೇಮಠ ಸ್ವಾಗತಿಸಿದರು, ನಾಗೇಶ ಅಜ್ಜವಾಡಿಮಠ ನಿರೂಪಿಸಿದರು, ಶರಣು ಇಳಿಗೇರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...