ಬೆಳಗಾವಿ | ಸ್ಪಂದನಾ ಸಂಸ್ಥೆಯಿಂದ ʼಬಾಲ್ಯ ವಿವಾಹ ಮುಕ್ತ ದೇಶʼ ಅಭಿಯಾನ

Date:

ಸ್ಪಂದನಾ ಸಂಸ್ಥೆಯು ಬೆಳಗಾವಿ ಜಿಲ್ಲೆಯಲ್ಲಿ ʼಬಾಲ್ಯ ವಿವಾಹ ಮುಕ್ತ ದೇಶʼ ಅಭಿಯಾನವನ್ನು ಪ್ರಾರಂಭಿಸಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣ ಮಾಡುವ ಉದ್ದೇಶವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಲಾಸ್ ಸತ್ಯಾರ್ಥಿ ಚಿಲ್ಡ್ರನ್ ಫೌಂಡೇಶನ್ ಸಂಸ್ಥೆ ಅಭಿಯಾನವನ್ನು ಕೈಗೊಂಡಿದೆ.

ದೇಶದ 42ಜಿಲ್ಲೆಗಳಲ್ಲಿ, ಬಾಲ್ಯ ವಿವಾಹ ಮುಕ್ತ ದೇಶ ಅಭಿಯಾನವನ್ನು ಸಂಸ್ಥೆ ಪ್ರಾರಂಭಿಸಿದೆ. ಕೈಲಾಸ್ ಸತ್ಯಾರ್ಥಿ ಚಿಲ್ಡ್ರನ್ ಫೌಂಡೇಶನ್ ಸಂಸ್ಥೆಯು ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ರಾಜ್ಯದಲ್ಲಿ ಸ್ಪಂದನಾ ಸಂಸ್ಥೆ ಈ ಕಾರ್ಯ ಮಾಡಲಿದೆ. ಸಂಸ್ಥೆಯು ಬೆಳಗಾವಿ ಜಿಲ್ಲೆಯ 50ಗ್ರಾಮೀಣ ಪ್ರದೇಶಗಳಲ್ಲಿ ಈ ಅಭಿಯಾನವನ್ನು ಹಮ್ಮಿಕೊಂಡಿದ್ದು, ಅಭಿಯಾನದಲ್ಲಿ ಗ್ರಾಮೀಣ ಭಾಗದ ಮಹಿಳೆಯರಿಗೆ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ನೀಡಲಾಗುತ್ತದೆ.

ಅಭಿಯಾನದ ಭಾಗವಾಗಿ, ಮೋದಗಾ ಗ್ರಾಮದಲ್ಲಿ, ಬಾಲ್ಯ ವಿವಾಹ ಮುಕ್ತ ದೇಶ ಅಭಿಯಾನವನ್ನು ಉದ್ಘಾಟನೆ ಮಾಡಿದ್ದಾರೆ. ಜಿಲ್ಲೆಯ ಬಾಳೆಕುಂದ್ರಿ, ಮಾರಿಹಾಳ ಹಾಗೂ ಬೆಳಗಾವಿಯ ಬಾಲಕರ ಬಾಲ ಮಂದಿರ ಸೇರಿದಂತೆ ಕೆಲವು ಕಡೆಗಳಲ್ಲಿ, ಸಂಸ್ಥೆ ಕಾರ್ಯಕ್ರಮಗಳನ್ನು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರಿಹಾಳದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಧೇಶಿಸಿ, ಗ್ರಾಮ ಪಂಚಾಯತ್ ಪಿಡಿಒ ಪ್ರಕಾಶ ಮುನ್ನೊಳಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯವಿವಾಹ ನಡೆಯದಂತೆ ತಡೆಯುವದು ನಮ್ಮೆಲ್ಲರ ಕರ್ತವ್ಯ. ನಮ್ಮ ಗ್ರಾಮ ಪಂಚಾಯತಿಯ ಸದಸ್ಯರು ಮತ್ತು ಅಧ್ಯಕ್ಷರ ನೇತೃತ್ವದಲ್ಲಿ ಬಾಲ್ಯ ವಿವಾಹ ತಡೆಯುವ ಕೆಲಸ ಮಾಡುತ್ತೇವೆ, ಎಂದರು.

ಶಾಲಾ ಬಾಲಕಿ ಕಾವೇರಿ ಬಾಲ್ಯ ವಿವಾಹದ ಕುರಿತು ಮಾತನಾಡಿ, ಬಾಲ್ಯ ವಿವಾಹ ಕೆಟ್ಟ ಪದ್ಧತಿ, ಇದರಿಂದ ಮಕ್ಕಳ ಶಿಕ್ಷಣ ಅರ್ಧಕ್ಕೆ ನಿಲ್ಲುವುದು. ಸಣ್ಣ ವಯಸ್ಸಿನಲ್ಲಿ ಮದುವೆ ಮಾಡುವದರಿಂದ, ಹೆಣ್ಣು ಮಕ್ಕಳ ಆರೋಗ್ಯ ಹಾಳಾಗುತ್ತದೆ. ಗರ್ಭ ಪಾತಗಳು ಹೆಚ್ಚುತ್ತವೆ. ಇವಾಗಲೂ ಬಾಲ್ಯವಿವಾಹಗಳು ಆಗುತ್ತಿದ್ದು, ತಾವೂಗಳು ನಿಮ್ಮ ಸಮುದಾಯಗಳಲ್ಲಿ ಆಗುವ ಬಾಲ್ಯವಿವಾಹಗಳನ್ನು ತಡೆಗಟ್ಟಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಬಾಲ್ಯವಿವಾಹ ನಿಲ್ಲಿಸಬೇಕು ಎಂದು ಹೇಳಿದಳು.

ಕಾರ್ಯಕ್ರಮದಲ್ಲಿ, ಬಾಲ್ಯ ವಿವಾಹದ ಕುರಿತು ಮಹಿಳೆಯರಿಗೆ, ಪಾಲಕರಿಗೆ, ತಾಯಂದಿರಿಗೆ, ಮಕ್ಕಳಿಗೆ ಬಾಲ್ಯ ವಿವಾಹ ತಡೆಗಟ್ಟುವ ಪ್ರತಿಜ್ಞಾ ವಿಧಿ ಬೋಧಿಸಿದ, ಸ್ಪಂದನಾ ಸಂಸ್ದೆಯ ನಿರ್ದೇಶಕಿ ವಿ. ಶುಶೀಲಾ ಅವರು, ಸ್ಪಂಧನಾ ಸಂಸ್ಥೆ ರಾಜ್ಯದಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ, ʼಬಾಲ್ಯ ವಿವಾಹ ಮುಕ್ತ ದೇಶ ಅಭಿಯಾನʼವನ್ನು ಪ್ರಾರಂಭಿಸಿದ್ದು ಬಾಲ್ಯ ವಿವಾಹವನ್ನು ತಡೆಗಟ್ಟಲು ಎಲ್ಲರೂ ಕೈ ಜೋಡಿಸಬೇಕೆಂದರು.

ಕಾರ್ಯಕ್ರಮದಲ್ಲಿ ಉಮಾ ಚೆನ್ನಿ, ನಮೀತಾ, ಬಾಲಕರ ಬಾಲ ಮಂದಿರದ ಸುಜಾತಾ, ಸಂಜೀವಿನಿ ಸಂಸ್ಥೆಯ ಸದಸ್ಯರು, ಸ್ಪಂದನಾ ಸಂಸ್ಥೆಯ ಸದಸ್ಯರು, ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...