ಬೆಳಗಾವಿ | ಲಾಡ್ಜ್‌ನಲ್ಲಿ ಕುಕ್ಕರ್ ಸ್ಫೋಟ; ದೇವಿ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಗಾಯ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಸ್ಥಾನದಿಂದ ಅನತಿ ದೂರದಲ್ಲಿರುವ ಲಾಡ್ಜ್‌ನಲ್ಲಿ ಕುಕ್ಕರ್ ಹಾಗೂ ಅಡುಗೆ ಅನಿಲದ ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು ಗಾಯಗೊಂಡ ಘಟನೆ ನಡೆದಿದೆ.

ಬೆಂಗಳೂರು ಮತ್ತು ಯಾದಗಿರಿ ಮೂಲದ ಭಕ್ತರು ಲಾಡ್ಜ್‌ನಲ್ಲಿ ಕೋಣೆ ಪಡೆದು ಅಡುಗೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕುಕ್ಕರಿನಲ್ಲಿ ನೀರು ಹಾಕದೆ ಇದ್ದುದರಿಂದ ಈ ಘಟನೆ ನಡೆದಿದೆ.

ಕುಕ್ಕ‌ರ್ ಸಿಡಿದು ಸಿಲಿಂಡರ್‌ ಹಾಗೂ ಒಲೆ ಮೇಲೆ ಬಿದ್ದು ನಂತರ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಂಡಿತು. ಕೋಣೆಯಲ್ಲಿದ್ದ ಪ್ಲಾಸ್ಟಿಕ್ ವಸ್ತುಗಳು, ಬಟ್ಟೆ, ಆಹಾರ ಸಾಮಗ್ರಿಗಳಿಂದಾಗಿ ಬೆಂಕಿ ಜ್ವಾಲೆ ಹೆಚ್ಚಾದಾಗ ಅಗ್ನಿಶಾಮಕದಳ ಸಿಬ್ಬಂದಿ ಸರಿಯಾದ ಸಮಯಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಾಡ್ಜ್‌ನಲ್ಲಿದ್ದ 8 ಭಕ್ತರು ಹಾಗೂ ಲಾಡ್ಜ್ ಕೆಲಸಗಾರರು ಸೇರಿ 15 ಮಂದಿ ಗಾಯಗೊಂಡಿರವುದಾಗಿ ವರದಿಯಾಗಿದೆ.

ಬೆಂಗಳೂರಿನ ವೆಂಕಟೇಶ ಕೃಷ್ಣಪ್ಪ (53), ರಾಮಸ್ವಾಮಿ ಚಿಕ್ಕಪುಳ್ಳಪ್ಪ (42), ರತ್ನಮ್ಮ ಗೋವಿಂದಪ್ಪ (48), ಗಣೇಶ ರಮೇಶಪ್ಪ ಕರೂರ (30), ಗದಗ ಜಿಲ್ಲೆಯ ಪ್ರಸಾದ ಜಾಧವ (34) ಮತ್ತು ಯಾದಗಿರಿ ಜಿಲ್ಲೆಯ ಬಸಮ್ಮ ಬಿರಾದಾರ (56), ಸುಮಿತ್ರಾ ಯಕ್ಕಹಳ್ಳಿ (42) ಹಾಗೂ ಸಿದ್ದಮ್ಮ ಶೆಟಗೇರಿ ಅವರು ಗಾಯಗೊಂಡಿದ್ದು, ಎಲ್ಲರನ್ನೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾಡ್ಜ್‌ನ 7 ಕೆಲಸಗಾರರು ಸವದತ್ತಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

WhatsApp Image 2024 08 13 at 7.24.31 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...