ಬೆಳಗಾವಿ | ಡಿಸಿಸಿ ಬ್ಯಾಂಕ್ ಚುನಾವಣೆ; ಲಾಂಗು, ಮಚ್ಚು ಹಿಡಿದು ಪುಂಡರ ಓಡಾಟ!

Date:

ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಕಣದಲ್ಲಿ ಉಮೇಶ್ ಕತ್ತಿ ಮತ್ತು ಸತೀಶ್ ಜಾರಕಿಹೊಳಿ‌ ಬೆಂಬಲಿತ ಸದಸ್ಯರ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಚುನಾವಣೆ ವೇಳೆ ಮತದಾನ ಮಾಡಬೇಕಿರುವ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರ ಕಾವಲಿಗಾಗಿ ಕೆಲವು ಪುಂಡರು ಹುಕ್ಕೇರಿಯಲ್ಲಿ ರಾಜಾರೋಷವಾಗಿಯೇ ಲಾಂಗು, ಮಚ್ಚು ಹಿಡಿದು ಓಡಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿರುವವರು ಕತ್ತಿ ಬೆಂಬಲಿಗರು ಎಂದು ಹೇಳಲಾಗುತ್ತಿದೆ.

ವಿಡಿಯೋದಲ್ಲಿ; ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ವಿಶ್ವರಾಜ್ ಸುಗರ್ಸ್‌ ಕಟ್ಟಡದ ಸುತ್ತಮುತ್ತ ಪುಂಡರು ಲಾಂಗು, ಮಚ್ಚು ಹಿಡಿದು ಓಡಾಡುವ ದೃಶ್ಯಗಳು ಕಂಡುಬಂದಿವೆ. ಸಾರ್ವಜನಿಕವಾಗಿ ಪುಂಡರು ಮಾರಕಾಸ್ತ್ರ ಹಿಡಿದು ಓಡಾಡುತ್ತಿರುವುದು ಜನರಲ್ಲಿ ಭೀತಿ ಹುಟ್ಟುಹಾಕಿದೆ. ಮಾತ್ರವಲ್ಲದೆ, ಜನಾಕ್ರೋಶಕ್ಕೂ ಕಾರಣವಾಗಿದೆ.

ಕತ್ತಿ ಬೆಂಬಲಿತ ಸದಸ್ಯರನ್ನು ವಿರೋಧಿ ಬಣವು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಾರದು ಅಥವಾ ಅಪಹರಿಸಬಾರದೆಂದು ಸದಸ್ಯರನ್ನು ಕಾವಲು ಕಾಯಲಾಗುತ್ತಿದೆ ಎಂದು ಹೇಳಲಾಗಿದೆ. ಸದಸ್ಯರನ್ನು ಕಾವಲು ಕಾಯಲು ಪುಂಡರು ಮಾರಕಾಸ್ತ್ರಗಳನ್ನು ಹಿಡಿದು, ಅಡ್ಡಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...