ಬೆಳಗಾವಿ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮೀಕ್ಷೆ: ಶಾಲೆಯಿಂದ ಹೊರಗುಳಿದ 217 ಮಕ್ಕಳು

Date:

ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ 217 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ನಡೆಸಿದ ಸಮೀಕ್ಷೆ ಈ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ.

ಈ ಬಾರಿ 6ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಸಮೀಕ್ಷೆ ನಡೆಸಲಾಗಿದೆ. ಎರಡು ಜಿಲ್ಲೆಗಳ ಒಟ್ಟು 217 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಪಟ್ಟಣಕ್ಕಿಂತ ಹಳ್ಳಿಗಳಲ್ಲಿ ಹೆಚ್ಚಿರುವುದು ಗಮನಾರ್ಹ.

ಶಿಕ್ಷಕರು ನಡೆಸುತ್ತಿರುವ ವಾರ್ಷಿಕ ಮನೆ-ಮನೆಗೆ ದಾಖಲಾತಿ ಅಭಿಯಾನಗಳು ಈ ವಿಷಯದ ಬಗ್ಗೆ ಗಮನ ಹರಿಸಬೇಕು. ಕಳೆದ ಬಾರಿಯೂ ಶಾಲಾ ಶಿಕ್ಷಣ ಇಲಾಖೆಯು 6ರಿಂದ 14 ವರ್ಷದೊಳಗಿನ ಮಕ್ಕಳ ಸಮೀಕ್ಷೆ ನಡೆಸಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 29 ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 79 ಸೇರಿದಂತೆ 108 ಮಕ್ಕಳು ಶಾಲೆಯಿಂದ ದೂರ ಉಳಿದಿರುವುದು ಕಂಡುಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿ ಬೆಳಗಾವಿ ಶಿಕ್ಷಣ ಜಿಲ್ಲೆಯ 114 ಹಾಗೂ ಚಿಕ್ಕೋಡಿ ಶಿಕ್ಷಣ ಜಿಲ್ಲೆಯ 103 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಈ ಮಕ್ಕಳನ್ನು ಶಾಲೆಗಳಿಗೆ ದಾಖಲಿಸಲಾಗಿದೆಯಾದರೂ, ಗೈರುಹಾಜರಾಗಿದ್ದಾರೆ. 14ರಿಂದ 15 ವರ್ಷ ವಯಸ್ಸಿನವರು ಶಾಲೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಬಾಲಕಿಯರಿಗಿಂತ ಬಾಲಕರೇ ಹೆಚ್ಚು ಶಾಲೆಯಿಂದ ಹೊರಗುಳಿದಿದ್ದಾರೆ.

ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 15 ವಲಯಗಳಿವೆ, ಚಿಕ್ಕೋಡಿಯಲ್ಲಿ 8 ಮತ್ತು ಬೆಳಗಾವಿಯಲ್ಲಿ 7 ವಲಯಗಳಿವೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನಿಪ್ಪಾಣಿ ವಲಯದಲ್ಲಿ ಅತಿ ಹೆಚ್ಚು ಅಂದರೆ, 34 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಚಿಕ್ಕೋಡಿಯ 32, ಹುಕ್ಕೇರಿಯ 14, ಮೂಡಲಗಿ ಮತ್ತು ರಾಯಭಾಗ ತಲಾ 6, ಗೋಕಾಕ 5, ಅಥಣಿ ಮತ್ತು ಕಾಗವಾಡ ತಲಾ 3 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಮದುರ್ಗ ಮತ್ತು ಖಾನಾಪುರ ವಲಯದಲ್ಲಿ ತಲಾ 25 ಮಕ್ಕಳು ಶಾಲೆ ಬಿಟ್ಟಿದ್ದು ಅತಿ ಹೆಚ್ಚು. ಇದಲ್ಲದೆ, ಬೆಳಗಾವಿ ಗ್ರಾಮೀಣ 23, ಕಿತ್ತೂರು ಮತ್ತು ಬೈಲಹೊಂಗಲ ತಲಾ 11, ಬೆಳಗಾವಿ ನಗರ 13 ಮತ್ತು ಸವದತ್ತಿಯಲ್ಲಿ 6 ಜನ ಮಕ್ಕಳು ಶಾಲೆ ಬಿಟ್ಟಿದ್ದಾರೆ.

ಈ ಮಕ್ಕಳು ಶಾಲೆಯಿಂದ ಹೊರಗುಳಿಯಲು ಪ್ರಮುಖ ಕಾರಣವಾಗಿದೆ ವಲಸೆ. ಈ ಭಾಗದ ಪೋಷಕರು ಉದ್ಯೋಗಕ್ಕಾಗಿ ಬೇರೆ ಬೇರೆ ರಾಜ್ಯಗಳಿಗೆ ಹೋಗುತ್ತಾರೆ. ಬರ ಪರಿಸ್ಥಿತಿಯಿಂದಾಗಿ ಜೀವನೋಪಾಯಕ್ಕಾಗಿ ಪೋಷಕರು ತಮ್ಮ ಮಕ್ಕಳೊಂದಿಗೆ ಗೋವಾ ಮತ್ತು ಮಹಾರಾಷ್ಟ್ರಕ್ಕೆ ತೆರಳಿದ್ದಾರೆ. ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಶಿಕ್ಷಣದ ಬಗ್ಗೆ ಪೋಷಕರ ಅಸಡ್ಡೆ, ಮನೆ ಕೆಲಸದಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು, ಚಿಕ್ಕ ವಯಸ್ಸಿನಲ್ಲೇ ಕುಟುಂಬ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸುವುದು ಕೂಡ ಮಕ್ಕಳು ಶಾಲೆ ಬಿಡಲು ಪ್ರಮುಖ ಕಾರಣವಾಗಿದೆ. ಇದಲ್ಲದೇ ಬಾಲ್ಯವಿವಾಹಗಳು ಹೆಚ್ಚುತ್ತಿದ್ದು, ಇದರಿಂದ ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಿದ್ದಾರೆ.

ಚಿಕ್ಕೋಡಿ ಡಿಡಿಪಿಐ ಮತ್ತು ಬೆಳಗಾವಿ ಪ್ರಭಾರಿ ಡಿಡಿಪಿಐ ಮೋಹನಕುಮಾರ ಹಂಚಾಟೆ ಮಾಧ್ಯಮಗಳಿಗೆ ಮಾತನಾಡಿ, ವಲಸೆ ಕಾರ್ಮಿಕರ ಮಕ್ಕಳ ಶಿಕ್ಷಣ ಆಯಾ ರಾಜ್ಯದ ಶಿಕ್ಷಣ ಇಲಾಖೆಯ ಜವಾಬ್ದಾರಿಯಾಗಬೇಕು. ಪ್ರಸ್ತುತ ಚಿಕ್ಕೋಡಿ ವಲಯದಲ್ಲಿ ಪೋಷಕರೊಂದಿಗೆ ಮಹಾರಾಷ್ಟ್ರದಿಂದ ಬಂದಿರುವ ಕಬ್ಬು ಕಡಿಯುವವರ ಮಕ್ಕಳಿಗಾಗಿ ಆರು ಟೆಂಟ್ ಶಾಲೆಗಳನ್ನು ತೆರೆಯಲಾಗಿದೆ. ಬೇರೆ ರಾಜ್ಯಗಳು ವಲಸೆ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡಬೇಕು. ಯಾವುದೇ ಮಗುವು ಶಾಲೆಯಿಂದ ಹೊರಗುಳಿಯಲು ನಾವು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...