ಬೆಳಗಾವಿ | ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಕುಸಿತ

Date:

ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ನೀರೊದಗಿಸುವ ಪ್ರಮುಖ ನೀರಿನ ಮೂಲವಾದ ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಲ್ಲಿ ಅಪಾರ ಪ್ರಮಾಣದ ಹೂಳು ತುಂಬಿದ್ದು, ಅಣೆಕಟ್ಟೆಯ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದೆ. ಹೂಳು ತೆಗೆಯುವಂತೆ ಈ ಜಿಲ್ಲೆಗಳ ಜನರು ಒತ್ತಾಯಿಸುತ್ತಿದ್ದರೂ, ಇದೂವರೆಗೂ ಹೂಳು ತೆಗೆಯಲಾಗಿಲ್ಲ. ಹೀಗಾಗಿ, ಹೆಚ್ಚಿ ಪ್ರಮಾಣದ ನೀರು ಸಂಗ್ರಹವಾಗದೇ, ಮೂರು ಜಿಲ್ಲೆಗಳ ನರಲ್ಲಿ ಆತಂಕ ಮೂಡಿಸಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮ ಹಿಡಕಲ್ ಅಣೆಕಟ್ಟನ್ನು 1977ರಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಅಣೆಕಟ್ಟು 62.5 ಮೀಟರ್ ಎತ್ತರವಿದ್ದು, 10 ಲಂಬ ಕ್ರೆಸ್ಟ್ ಗೇಟ್‌ಗಳನ್ನು ಹೊಂದಿದೆ. ಜಲಾಶಯವು 51.1 ಟಿಎಂಸಿ ಅಡಿಗಳಷ್ಟು ಸಂಗ್ರಹ ಸಾಮರ್ಥ್ಯ ಹೊಂದಿದ್ದು, 8,20,000 ಎಕರೆಗೂ ಹೆಚ್ಚು ಕೃಷಿ ಭೂಮಿಗೆ ನೀರನ್ನು ಒದಗಿಸುತ್ತದೆ. ಅಲ್ಲದೆ, ಎರಡು ವಿದ್ಯುತ್ ಘಟಕಗಳನ್ನೂ ಹೊಂದಿದ್ದು, ಸುಮಾರು 32 ಮೆಗಾ ವ್ಯಾಟ್‌ ಜಲವಿದ್ಯುತ್ ಉತ್ಪಾದಿಸುತ್ತವೆ. ಹಿಡಕಲ್ ಅಣೆಕಟ್ಟು ಯೋಜನೆಯಿಂದ ಬೆಳಗಾವಿ, ಹುಕ್ಕೇರಿ, ಸಂಕೇಶ್ವರ, ಬಾಗಲಕೋಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.

ಅಂದಿನಿಂದ ಇಂದಿನವರೆಗೂ (45 ವರ್ಷ) ಈ ಜಲಾಶಯದಲ್ಲಿ ಒಮ್ಮೆಯೂ ಹೂಳು ತೆಗೆಯಲಾಗಿಲ್ಲ. ಪರಿಣಾಮ, ನೀರಿನ ಸಂಗ್ರಹಣಾ ಮಟ್ಟ ಕುಸಿದಿದೆ. ಇದು ಮೂರು ಜಿಲ್ಲೆಗಳ ಜನರನ್ನು ಆತಂಕಕ್ಕೆ ದೂಡಿದೆ. ಇತ್ತೀಚೆಗೆ ಹುಕ್ಕೇರಿಯಲ್ಲಿ ಶಾಸಕ ನಿಖಿಲ್ ಕತ್ತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಹಿಡಕಲ್ ಜಲಾಶಯದ ಹೂಳು ಕುರಿತು ಚರ್ಚೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಜಲವಿಜ್ಞಾನದ ಸಮೀಕ್ಷೆಯ ಪ್ರಕಾರ, ರಾಜ್ಯದ ಹಲವಾರು ಅಣೆಕಟ್ಟುಗಳ ಸಂಗ್ರಹಣಾ ಸಾಮರ್ಥ್ಯವು ಹೂಳಿನಿಂದ ಕಡಿಮೆಯಾಗಿದೆ. ತುಂಗಭದ್ರಾ, ನಾರಾಯಣಪುರ, ಆಲಮಟ್ಟಿ, ಹಿಡಕಲ್ ಜಲಾಶಯವೂ ಸೇರಿದಂತೆ ಹೆಚ್ಚಿನ ಜಲಾಶಯಗಳಲ್ಲಿ ಹೂಳು ಸಂಗ್ರಹವಾಗಿದ್ದು, ಸಂಗ್ರಹ ಸಾಮರ್ಥ್ಯ ಕಳೆದುಕೊಂಡಿದೆ.

ಈ ಸುದ್ದಿ ಓದಿದ್ದೀರಾ?: ದಕ್ಷಿಣ ಕನ್ನಡ | ನೀರಿಗೆ ಹಾಹಾಕಾರ; ಮುಚ್ಚಿದ ಕಾಲೇಜುಗಳು, ಶುರುವಾದ ಆನ್‌ಲೈನ್ ತರಗತಿಗಳು

ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ಅಣೆಕಟ್ಟುಗಳಲ್ಲಿ ಹೆಚ್ಚಿನ ಪ್ರಮಾಣದ ಹೂಳು ತುಂಬಿರುವುದು ಆತಂಕಕಾರಿಯಾಗಿದೆ.
2019ರಲ್ಲಿ ಕರ್ನಾಟಕ ನೀರಾವರಿ ನಿಗಮದ ಕೇಂದ್ರ ಕಚೇರಿಗೆ ಸಮೀಕ್ಷೆಯ ವರದಿಯನ್ನು ಸಲ್ಲಿಸಲಾಗಿದೆ ಎಂದು ಕರ್ನಾಟಕ ನೀರವಾರಿ ನಿಗಮ ಲಿಮಿಟೆಡ್ (ಕೆಎನ್‌ಎನ್‌ಎಲ್) ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ವರದಿಯ ಬಗ್ಗೆ ಸರ್ಕಾರದಿಂದ ಇದುವರೆಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

“ನೀರು ತುಂಬಿದ ಅಣೆಕಟ್ಟಿನ ಹೂಳು ತೆಗೆಯುವುದು ಕಷ್ಟಕರ.’1 ಟಿಎಂಸಿ ಅಡಿ ಹೂಳು ತೆಗೆಯಲು ಅಂದಾಜು 5,000 ಕೋಟಿ ರೂ. ವೆಚ್ಚವಾಗುತ್ತದೆ. ಆ ವೆಚ್ಚದಲ್ಲಿ ಹೊಸ ಅಣೆಕಟ್ಟು ನಿರ್ಮಿಸಬಹುದು,” ಎಂದು ನೀರಾವರಿ ಇಲಾಖೆಯ ನಿವೃತ್ತ ಅಧಿಕಾರಿ ಜಿ.ಎಂ ಶರಭಯ್ಯ ಹೇಳಿದ್ದಾರೆ.

“ಹಿಡಕಲ್ ಜಲಾಶಯದ ಹೂಳು ಶೇಖರಣೆಯಿಂದ ಸುಮಾರು 4-5 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಕುಸಿದಿರುವುದು ನಿಜ. ಹೂಳು ಮಾತ್ರ ಈ ಜಲಾಶಯದ ಸಮಸ್ಯೆಯಲ್ಲ. ಅಣೆಕಟ್ಟು 45 ವರ್ಷಗಳಷ್ಟು ಹಳೆಯದು. ಇಲಾಖೆಯ ಹಿರಿಯ ಅಧಿಕಾರಿಗಳು ಹೂಳಿನ ಸಮಸ್ಯೆಗೆ ಲಾಭದಾಯಕ ಪರಿಹಾರ ಹುಡುಕುತ್ತಿದ್ದಾರೆ” ಎಂದು ಹಿಡಕಲ್ ಅಣೆಕಟ್ಟೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಎಸ್.ಎಂ ಮಡಿವಾಳೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...