ಬೆಳಗಾವಿ | ಗ್ಯಾರಂಟಿ ಯೋಜನೆ ಸಂಬಂಧಿ ದೂರುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು: ಸತೀಶ್ ಜಾರಕಿಹೊಳಿ

Date:

ಗ್ಯಾರಂಟಿ ಯೋಜನೆ ಲಾಭವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕ್ರಮ ವಹಿಸಬೇಕು. ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಬೆಳಗಾವಿಯ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಒಂದು ವರ್ಷವಾಗಿದೆ. ಇವುಗಳಿಗೆ ಸಂಬಂಧಿಸಿ ಯಾವುದೇ ದೂರುಗಳಿದ್ದರೆ, ಜಿಲ್ಲಾ ಮತ್ತು ತಾಲೂಕು ಹಂತದ ಅಧಿಕಾರಿಗಳು ಸ್ಪಂದಿಸಬೇಕು. ಸಮಿತಿಯವರು ತಾಲೂಕು ಹಂತದಲ್ಲಿ ಜನರೊಂದಿಗೆ ಸಂವಾದ ನಡೆಸಿ, ಗ್ಯಾರಂಟಿ ಯೋಜನೆ ಲಾಭವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರಿಗೆ ನೆರವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮತ್ತು ಸಮಿತಿ ಪದಾಧಿಕಾರಿಗಳು ಶ್ರಮಿಸಬೇಕು. ಒಬ್ಬ ಫಲಾನುಭವಿಯೂ ಯೋಜನೆಯಿಂದ ವಂಚಿತವಾಗಬಾರದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ. ರೇವಣ್ಣ ಹೇಳಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಪ್ರತಿಯೊಂದು ಮಗುವಿಗೂ ಗುಣಾತ್ಮಕ, ಸಮಾನ ಶಿಕ್ಷಣದ ಅವಶ್ಯವಿದೆ: ನಿವೃತ್ತ ನ್ಯಾ. ನಾಗಮೋಹನ ದಾಸ್

ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ‘ಸಮಾಜದಲ್ಲಿ ಪ್ರತಿಯೊಬ್ಬರಿಗೂ ನೆರವಾಗುವ ದಿಸೆಯಿಂದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯವಿದೆ’ ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...