ಬೆಳಗಾವಿಯಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ಗೆದ್ದ ತಂಡದ ಮೇಲೆ ಸೋತ ತಂಡದವರು ಹಲ್ಲೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಘರ್ಷಣೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಹಿಂದು-ಮುಸ್ಲಿಂ ಯುವಕರ ಮೇಲೆ 2 ಪ್ರಕರಣಗಳು ದಾಖಲಾಗಿವೆ.
ಬೆಳಗಾವಿ ನಗರದಅಳ್ವಾನ್ನ ಆದರ್ಶ ಮರಾಠ ವಿದ್ಯಾಮಂದಿರ ಶಾಲೆಯ ಗ್ರೌಂಡ್ನಲ್ಲಿ ಅಪ್ರಾಪ್ತರ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆದಿತ್ತು. ಪಂದ್ಯದಲ್ಲಿ ಗೆದ್ದ ತಂಡದ ಮೇಲೆ ಮತ್ತೊಂದು ತಂಡಹಲ್ಲೆ ನಡೆಸಿದ್ದು, ಕಲ್ಲು ತೂರಟ ನಡೆದಿತ್ತು. ಕೆಲವರು ತಲ್ವಾರ್ ಹಿಡಿದು ದಾಂಧಲೆ ನಡೆಸಿದ್ದರು.
ಯುವಕರನ್ನು ತಡೆದಿದ್ದ ಸ್ಥಳೀಯಕರು ಕಲ್ಲು ತೂರಾಟ ನಡೆಸದಂತೆ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆಯೇ ಯುವಕರು ಸ್ಥಳದಿಂದ ಪರಾರಿಯಾಗಿದ್ದರು.
ಘಟನೆ ಸಂಬಂಧ ಪೊಲೀಸರು 2 ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಕೋಮಿನ ಯುವಕರ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A, 149ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯಲ್ಲಿ 8 ಮಂದಿಗೆ ಗಾಯಗಳಾಗಿದ್ದು, ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.




