ಬೆಳಗಾವಿ | ಗಡಿ ಭಾಗದ ಕನ್ನಡಿಗರ ಉಪಯೋಗಕ್ಕೆ ಬಾರದ ‘ಗಡಿ ಕನ್ನಡ ಭವನ’

Date:

ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯು ಮಹಾರಾಷ್ಟ್ರ ಬೆಂಬಲಿತ ಸಂಘಟನೆಗಳ ಉಪಟಳದಿಂದಾಗಿ ಭಾಷಾ ಸಮಸ್ಯೆ, ಗಡಿ ತಕರಾರುಗಳನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿಯೂ ಕನ್ನಡ ಪರ ಹೋರಾಟಗಾರರ ಹೋರಾಟದ ಫಲವಾಗಿ ಬೆಳಗಾವಿಯ ವಡಗಾಂವಿದಲ್ಲಿ ‘ಗಡಿ ಕನ್ನಡ ಭವನ’ ನಿರ್ಮಾಣ ಮಾಡಲಾಗಿತ್ತು. ಆದರೆ, ಆ ಭವನ ಕನ್ನಡಿಗರ ಬಳಕೆಗೆ ದೊರೆಯದೆ, ಅನುಪಯುಕ್ತವಾಗಿದೆ. ಮಾತ್ರವಲ್ಲದೆ, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

ಗಡಿ ತಕರಾರುಳಿಂದ ದೇಶದಲ್ಲಿ ಹೆಚ್ಚು ಸುದ್ಧಿಯಾದ ಜಿಲ್ಲೆ ಬೆಳಗಾವಿ. ಈ ಜಿಲ್ಲೆ ಮಹಾರಾಷ್ಟ್ರಕ್ಕೆ ಸೇರಿದ್ದು, ಮಹಾರಾಷ್ಟ್ರಕ್ಕೇ ಸೇರಬೇಕು ಎಂದು ಎಂಇಎಸ್‌ ಉದ್ದಟತನ ತೋರುತ್ತಿದೆ. ಅದೆಲ್ಲವನ್ನೂ ಮೆಟ್ಟಿ ಕನ್ನಡಿಗರು ಕನ್ನಡದ ಅಸ್ಮಿತೆಯನ್ನು ಜಿಲ್ಲೆಯಲ್ಲಿ ಉಳಿಸಿ, ಬೆಳೆಸುತ್ತಿದ್ದಾರೆ. ಅದರ ಭಾಗವಾಗಿ, 2005ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಬೆಳಗಾವಿಯಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಿದ್ದರು.

ಆ ಬಳಿಕ, ಬರೊಬ್ಬರಿ 8 ವರ್ಷಗಳ ಬಳಿಕ ಭವನ ನಿರ್ಮಾಣವಾಯಿತು. ಅದಾದ ಮೇಲೂ 2 ವರ್ಷಗಳ ನಂತರ 2015ರಲ್ಲಿ ಭವನವನ್ನು ಉದ್ಘಾಟಿಸಲಾಗಿತ್ತು. ಉದ್ಘಾಟನೆಯ ಸಮಯದಲ್ಲಿಯೂ ಮಹರಾಷ್ಟ್ರ ಬೆಂಬಲಿತ ಕೆಲವು ಸಂಘಟನೆಗಳು ದಾಂಧಲೆ ನಡೆಸಿದ್ದವು. ಅಷ್ಟೆಲ್ಲ ಸಮಸ್ಯೆಗಳ ನಡುವೆಯೂ ತಲೆ ಎತ್ತಿದ ಭವನ, ಉದ್ಘಾಟನೆಗೊಂಡು ಒಂದು ದಶಕ ಕಳೆಯುವುದಕ್ಕೂ ಮುನ್ನವೇ ಅನುಪಯುಕ್ತವಾಗಿರುವುದು ವಿಪರ್ಯಾಸ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಡಗಾಂವಿಯಲ್ಲಿ ನಿರ್ಮಾಣವಾಗಿರುವ ಗಡಿ ಕನ್ನಡ ಭವನದಲ್ಲಿ ಕೆಲವು ಸಮುದಾಯಗಳು ತಮ್ಮ ಸಭೆ ಸಮಾರಂಭಗಳನ್ನು ನಡೆಸಲು ಇಚ್ಚಿಸಿದರೂ, ಸರಿಯಾದ ನಿರ್ವಹಣೆ ಇಲ್ಲದೆ, ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ. ಕನ್ನಡ ಸಂಬಂಧಿತ ಸಭೆ-ಸಮಾರಂಭಗಳಿಗೂ ಈ ಭವನ ಬಳಕೆಯಾಗುತ್ತಿಲ್ಲ. ಹೀಗಾಗಿ, ನಾಲ್ಕೈದು ಕಿ.ಮೀ ದೂರದಲ್ಲಿರುವ ಕನ್ನಡ ಸಾಹಿತ್ಯ ಭವನವನ್ನೇ ಎಲ್ಲರೂ ಆಶ್ರಯಿಸುವ ಅನಿವಾರ್ಯತೆ ಉಂಟಾಗಿದೆ. ಗಡಿ ಕನ್ನಡ ಭವನ ಧೂಳು, ಕಸ, ಗಿಡ-ಗಂಟಿಗಳಿಂದ ತುಂಬಿ ಹೋಗಿದೆ. ರಾತ್ರಿ ವೇಳೆ ಕುಟುಕರ ತಾಣವಾಗಿದೆ.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ ಜಿಲ್ಲಾ ವಿಭಜನೆ ಯಾಕ್ ಮಾಡವಲ್ರಿ?’; ಜಿಲ್ಲೆಯ ಜನರು ಹೇಳ್ತಿರೋದೇನು ಗೊತ್ತೇ?

ಭವನದ ಸಮಸ್ಯೆ ಕುರಿತು ಈ ದಿನ.ಕಾಮ್ ಜೊತೆ ಮಾತನಾಡಿದ ಜಲಧಾರೆ ಕಾವೇರಿ ಕನ್ನಡ ಸಂಘಟನೆಯ ಮುಖಂಡ ಬಲರಾಮ ಸಂಗೋಳ್ಳಿ, “2015ರಲ್ಲಿ ಉದ್ಘಾಟನೆ ಮಾಡಿದ ಗಡಿ ಕನ್ನಡ ಭವನ ಕನ್ನಡಿಗರ ಉಪಯೋಗಕ್ಕೆ ಬರುತ್ತಿಲ್ಲ. ಹೆಸರಿಗೆ ಮಾತ್ರ ಗಡಿ ಕನ್ನಡ ಭವನ ಆಗಿದ್ಧು, ಕನ್ನಡಿಗರಿಂದಲೇ ದೂರ ಉಳಿದಿದೆ. ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ, ಕನ್ನಡಿಗರ ಉಪಯೋಗಕ್ಕೆ ದೊರೆಯುವಂತೆ ಮಾಡಬೇಕು” ಎಂದು ಆಗ್ರಹಿಸಿದರು.

ನೇಕಾರ ಸಮುದಾಯದ ಮುಖಂಡ ಶಂಕರ ಢವಳಿ ಮಾತನಾಡಿ, “ನಾವು ಕಾರ್ಯಕ್ರಮ, ಸಮಾರಂಭಗಳನ್ನು ಮಾಡಲು ದೂರದ ಕನ್ನಡ ಸಾಹಿತ್ಯ ಭವನಕ್ಕೆ ಹೋಗಬೇಕಾಗುತ್ತದೆ. ಹೋರಾಟ ಮಾಡಿ ನಿರ್ಮಾಣ ಮಾಡಿದ ಕನ್ನಡ ಭವನದಲ್ಲಿ ಸಭೆ ಸಮಾರಂಭಗಳನ್ನು ಮಾಡಲು ಅವಕಾಶ ಮಾಡಿಕೊಡಬೇಕು. ಇಲ್ಲಿ ಸಂಜೆಯಾಗುತ್ತಲೇ ಅನೈತಿಕ ಚಟುವಟಿಕೆ, ಕುಡುಕರು ಹಾಗೂ ಜೂಜು ಕೋರರ ಅಡ್ಡೆಯಾಗುತ್ತದೆ. ಆದ್ದರಿಂದ ಭವನವನ್ನು ಸ್ವಚ್ಛಗೊಳಿಸಿ, ಜನ ಬಳಕೆಗೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...