ಬೆಳಗಾವಿ | ಗಣೇಶ ವಿಸರ್ಜನೆ: ಈದ್ ಮಿಲಾದ್ ಮೆರವಣಿಗೆ ಮುಂದೂಡಿ ಭಾವೈಕ್ಯತೆ ಮೆರೆದ ಮುಸ್ಲಿಂ ಮುಖಂಡರು

Date:

ಬೆಳಗಾವಿಯಲ್ಲಿ ಸೆ.28ರಂದು ಗಣೇಶ ವಿಸರ್ಜನಾ ಮೆರವಣಿಗೆಯು ಯಾವುದೇ ರೀತಿಯ ತೊಡಕಾಗದಂತೆ ನಡೆಯಬೇಕೆಂಬ ಉದ್ದೇಶದಿಂದ ಮುಸ್ಲಿಂ ಮುಖಂಡರು ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಮುಂದೂಡಿದ್ದಾರೆ. ಆ ಮೂಲಕ ಹಿಂದು-ಮುಸ್ಲಿಂ ಭಾವೈಕ್ಯತೆಗೆ ಮತ್ತೊಂದು ಮೈಲುಗಲ್ಲು ಇಟ್ಟಿದ್ದಾರೆ.

ಬುಧವಾರ ಬೆಳಗಾವಿಯ ಮುಸ್ಲಿಂ ಮತ್ತು ಜಮಾತ್‌ ಸಂಘಟನೆಯ ಮುಖಂಡರು ಹಾಗೂ ಬೆಳಗಾವಿ ಉತ್ತರ ಶಾಸಕ ರಾಜು ಸೇಠ್ ಸಭೆ ನಡೆಸಿದ್ದು, ನಗರದಲ್ಲಿ ಹಿಂದು-ಮುಸ್ಲಿಂ ಭಾವೈಕ್ಯತೆಗೆ ಯಾವುದೇ ಧಕ್ಕೆಯಾಗಬಾರದೆಂದು ಈದ್ ಮಿಲಾದ್‌ ಹಬ್ಬದ ಆಚರಣೆಯನ್ನು ಎರಡು ದಿನಗಳ ಮಟ್ಟಿಗೆ ಮುಂದೂಡಿದ್ದಾರೆ. ಅಕ್ಟೋಬರ್ 1 ರಂದು ಹಬ್ಬ ಆಚರಿಸಲು ನಿರ್ಧರಿಸಿದ್ದಾರೆ. ಮುಸ್ಲಿಂ ಸಮುದಾಯದ ನಿರ್ಧಾರವನ್ನು ಬೆಳಗಾವಿ ಗಣೇಶ ಮಂಡಳಿಯ ಮುಖಂಡರು ಮತ್ತು ಸಾರ್ವಜನಿಕರು ಸ್ವಾಗತಿಸಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ.

ಬೆಳಗಾವಿ ನಗರ ಸೂಕ್ಷ್ಮ ಪ್ರದೇಶವಾಗಿದ್ಧು, ಈ ಹಿಂದೆ ಅನೇಕ ಬಾರಿ ಹಿಂದು-ಮುಸ್ಲಿಂ ಸಮುದಾಯದ ನಡುವೆ ಗಲಾಟೆಗಳು ನಡೆದಿದ್ದವು. ಈ ಬಾರಿ, ಅಂತಹ ಆವುದೇ ಘಟನೆಗಳು ನಡೆಯಬಾರದೆಂದು ಮುಸ್ಲಿಂ ಮುಖಂಡರು ಎಚ್ಚರಿಕೆ ವಹಿಸಿದ್ದಾರೆ. ತಮ್ಮ ಹಬ್ಬದ ಆಚರಣೆಯನ್ನೇ ಮುಂದೂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಧ್ಯಮಗಳ ಜೊತೆಗೆ ಮಾತನಾಡಿರುವ ಅಂಜುಮನ್-ಏ-ಇಸ್ಲಾಂ ಸಂಸ್ಥೆಯ ಅಧ್ಯಕ್ಷ, ಶಾಸಕ ರಾಜು ಸೇಠ್, “ಸಿರತ್ ಕಮಿಟಿ, ಅಂಜುಮನ್ ಸಂಸ್ಥೆ, ಎಲ್ಲ ಜಮಾತ್ ಧರ್ಮಗುರುಗಳು ಸೇರಿಕೊಂಡು ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ನೀಡುವ ಕಾರಣಕ್ಕೆ ಈದ್ ಮಿಲಾದ್ ಮೆರವಣಿಗೆ ಮುಂದೂಡಲಾಗಿದೆ. ‌ಹಿಂದೂದಗಳ ಗಣೇಶೋತ್ಸವ ಮೆರವಣಿಗೆಗೆ ನಾವೂ ಹೋಗುತ್ತೇವೆ. ನಮ್ಮ ಹಬ್ಬಕ್ಕೆ ಹಿಂದೂ ಸಮಾಜ ಬಾಂಧವರನ್ನೂ ಆಹ್ವಾನಿಸುತ್ತೇವೆ. ಇದರಿಂದ ಸೌಹಾರ್ದಯುತ ವಾತಾವರಣ ಬೆಳಗಾವಿಯಲ್ಲಿ ನಿರ್ಮಾಣವಾಗುತ್ತದೆ” ಎಂದು ತಿಳಿಸಿದ್ಧಾರೆ

ಜಮಾತ್ ಸಂಘಟನೆಯ ಮುಖಂಡರಾದ ಯಾಸಿನ್ ಮಖಾನಂದಾರ್ ಅವರು ಈದಿನ.ಕಾಮ್ ಜೊತೆ ಮಾತನಾಡಿದ್ದು, “ಈದ್ ಮಿಲಾದ್ ಹಬ್ಬದ ಮೆರವಣಿಗೆ 2 ದಿನಗಳ ಕಾಲ ಮುಂದೂಡಿದ್ದೇವೆ. ಅಕ್ಟೋಬರ್ 1 ರಂದು ಈದ್ ಮೆರವಣಿಗೆ ನಡೆಯುತ್ತದೆ” ಎಂದು ತಿಳಿಸಿದ್ಧಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...