ಬೆಳಗಾವಿ | ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಇಬ್ಬರ ಸಜೀವ ದಹನ

Date:

ಕುಂದಾನಗರಿ ಬೆಳಗಾವಿಯಲ್ಲಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ವರ್ಷದ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳಗಾಂವಕರ್ (24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಒಂದೇ ಕುಟುಂಬದ ನಾಲ್ವರು ರಾತ್ರಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ವಾಪಸಾಗುತ್ತಿದ್ದರು. ರಾತ್ರಿ 10:30ಕ್ಕೆ ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್​ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸಜೀವ ದಹನವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಿನಲ್ಲಿದ್ದ ಇನ್ನಿಬ್ಬರು ಮಹೇಶ್ ಬೆಳಗಾಂವಕರ್ ಮತ್ತು ಸ್ನೇಹಾ ಬೆಳಗಾಂವಕರ್ ಎನ್ನುವರನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತಕ್ಕೆ ಎರಡೂ ವಾಹನಗಳು ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟು ಕರಕಲಾಗಿವೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೈಟ್​ ಕೊಡಿಸುವುದಾಗಿ ಎನ್​ಆರ್​ಐಗೆ ₹30 ಲಕ್ಷ ವಂಚನೆ: ಟ್ವೀಟ್ ಮೂಲಕ ನಗರ ಪೊಲೀಸ್ ಕಮೀಷನರ್​ಗೆ ದೂರು

ಸ್ಥಳಕ್ಕೆ ಡಿಸಿಪಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಇಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಅಪಘಾತವಾಗುತ್ತಿದ್ದಂತೆಯೇ ಟಿಪ್ಪರ್​ ಚಾಲಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...