ಬೆಳಗಾವಿ | ಮಳೆ ಅಬ್ಬರಕ್ಕೆ ಕುಸಿದು ಬಿದ್ದ ಮನೆ; ಕೂದಲೆಳೆಯಲ್ಲಿ 11 ಮಂದಿ ಪಾರು

Date:

ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದು, ಮನೆಯಲ್ಲಿದ್ದವರು ಕೂದಲೆಳೆಯಲ್ಲಿ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹೊಸಟ್ಟಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಗಾಳಿಯೂ ಬೀಸುತ್ತಿದೆ. ಪರಿಣಾಮ, ಹೊಸಟ್ಟಿ ಗ್ರಾಮದಲ್ಲಿ ನಿಂಗಪ್ಪ ಕಮತಗಿ ಎಂಬವರ ಮನೆ ಕುಸಿದು ಬಿದ್ದಿದೆ. ಮೊದಲಿಗೆ ಎರಡು ಇಟ್ಟಿಗೆಗಳು ಬಿದ್ದಿದ್ದು, ಅದನ್ನು ಕಂಡ ಮನೆಯಲ್ಲಿದ್ದವರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಕ್ಷಣಾರ್ಧದಲ್ಲಿ ಇಡೀ ಮನೆ ಕುಸಿದು ಬಿದ್ದಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆ ಕಳೆದುಕೊಂಡಿರುವ 11 ಮಂದಿ ಇರುವ ಕುಟುಂಬ ಈಗ ನಿರ್ಗತಿಕ ಪರಿಸ್ಥಿತಿಯಲ್ಲಿದೆ. ಸೂರಿಲ್ಲದೆ, ಬೀದಿ ಪಾಲಾಗಿದೆ. ಗುಡಿಸಲು ಕಟ್ಟಿಕೊಂಡು ಮಳೆಯ ನಡುವೆ ವಾಸಿಸುವ ಪರಿಸ್ಥಿತಿ ಎದುರಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿದ್ದು, ಸರ್ಕಾರದಿಂದ ಪರಿಹಾರ ಸಿಕ್ಕರೆ, ಮತ್ತೊಂದು ಸೂರು ಕಟ್ಟಿಕೊಳ್ಳುತ್ತೇವೆಂದು ಕುಟುಂಬ ನಿರೀಕ್ಷಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...