ಬೆಳಗಾವಿ | ಅಕ್ರಮ ಲ್ಯಾಟರೈಟ್ ಗಣಿಗಾರಿಕೆ; ಅಧಿಕಾರಿಗಳೂ ಶಾಮೀಲಾಗಿರುವ ಆರೋಪ

Date:

ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಅಕ್ರಮ ಲ್ಯಾಟರೈಟ್ (ಕೆಂಪು ಮಣ್ಣು) ಗಣಿಗಾರಿಕೆ ಕರಿತು ಗಂಭೀರ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಗೊತ್ತಿದ್ದೇ ಈ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಕ್ರಮ ಗಣಿಗಾರಿಕೆಯಿಂದಾಗಿ ಸರ್ಕಾರದ ಆದಾಯಕ್ಕೆ ಭಾರೀ ನಷ್ಟವಾಗಿದೆ ಎಂದು ವರದಿಯಾಗಿದೆ.

ಸಿಮೆಂಟ್ ಉತ್ಪಾದನೆಯಲ್ಲಿ ಬಳಸಲಾಗುವ ಪ್ರಮುಖ ಕಚ್ಚಾ ವಸ್ತುವಾದ ಲ್ಯಾಟರೈಟ್ಅನ್ನು ಗಣಿಗಾರಿಕೆ ಕಾನೂನುಗಳನ್ನು ಉಲ್ಲಂಘಿಸಿ ಹೊರತೆಗೆಯಲಾಗುತ್ತಿದೆ. ಈ ಅಕ್ರಮಗಳ ಕುರಿತು ಮುಚಂಡಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ರಾಹುಲ್ ಸಿದ್ದಪ್ಪ ಅವನಾಚೆ ಅವರು ಉಪ ಆಯುಕ್ತ ಮೊಹಮ್ಮದ್ ರೋಷನ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ದೂರು ನೀಡಿದ್ದಾರೆ.

ಈ ನಡುವೆ, ರಾಹುಲ್‌ ಅವರು ದೂರು ನೀಡಿದ ಬಳಿಕ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಗ್ಯೂ, ಗಣಿಗಾರಿಕೆಯನ್ನು ಕೆಲವೇ ಗಂಟೆಗಳ ಕಾಲ ಮಾತ್ರವೇ ಸ್ಥಗಿತಗೊಳಿಸಲಾಯಿತು. ಆದರೆ, ಅದೇ ರಾತ್ರಿ ಮತ್ತೆ ಗಣಿಗಾರಿಕೆ ಆರಂಭಗೊಂಡಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಗಣಿಗಾರಿಕೆಯ ಕೆಲವು ಗಂಟೆಗಳ ಸ್ಥಗಿತ ಮತ್ತು ಮರು ಕಾರ್ಯಾಚರಣೆಯು ಇಲಾಖೆಯ ಅಧಿಕಾರಿಗಳು ತೆಗೆದುಕೊಂಡ ಕ್ರಮದ ಉದ್ದೇಶ ಮತ್ತು ಪರಿಣಾಮಕಾರಿತ್ವದ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕ್ರಮ ಕೈಗೊಂಡಿದ್ದ ಅಧಿಕಾರಿಗಳು ಗುತ್ತಿಗೆದಾರರಿಗೆ ಕೇವಲ ‘ಎಚ್ಚರಿಕೆ’ ನೀಡಿದ್ದಾರೆ ಎಂದು ವರದಿಯಾಗಿದೆ.

ಇನಾಮ್ ಬಡಾಸ್ ಗ್ರಾಮದಲ್ಲಿ 12 ಎಕರೆ ಭೂಮಿಯಿಂದ 2.58 ಲಕ್ಷ ಮೆಟ್ರಿಕ್ ಟನ್ ಲ್ಯಾಟರೈಟ್ ಹೊರತೆಗೆಯಲು ಗುತ್ತಿಗೆದಾರರಿಗೆ 2025ರ ಮಾರ್ಚ್‌ನಲ್ಲಿ ಅನುಮತಿ ನೀಡಲಾಗಿತ್ತು. ಆದಾಗ್ಯೂ, ಅದೇ ಗ್ರಾಮದಲ್ಲಿ ಮೂರು ಹೆಚ್ಚುವರಿ ಅನಧಿಕೃತ ಸ್ಥಳಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬುದು ತನಿಖೆಗಳು ಬಹಿರಂಗಪಡಿಸಿವೆ ಎಂದು ಮೂಲಗಳು ತಿಳಿಸಿವೆ.

ಈ ಲೇಖನ ಓದಿದ್ದೀರಾ?: ಬಂಗಾಳ ಚುನಾವಣೆ | ಅಧಿಕಾರಕ್ಕಾಗಿ ಬಿಜೆಪಿ ತಂತ್ರ – ಮಮತಾ ಪ್ರತಿತಂತ್ರ

ಅಧಿಕಾರಿಗಳು ಕೇವಲ ಎಚ್ಚರಿಕೆ ಮಾತ್ರವೇ ನೀಡಿರುವುದನ್ನು ಆಕ್ರೋಶಿತ ಗ್ರಾಮಸ್ಥರು, ‘ಕಣ್ಣೊರೆಸುವಿಕೆ’ ಎಂದಿದ್ದಾರೆ. ಅಧಿಕಾರಿಗಳು ಒಂದೇ ಒಂದು ಟ್ರಕ್ಅನ್ನು ವಶಪಡಿಸಿಕೊಂಡಿಲ್ಲ. ಯಾವುದೇ ಜೆಸಿಬಿ ಯಂತ್ರಗಳನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ. ಅಕ್ರಮ ಗಣಿಗಾರಿಕೆ ಮಾಡಿದ ಲ್ಯಾಟರೈಟ್ಅನ್ನು ವಶಪಡಿಸಿಕೊಳ್ಳಲಾಗಿಲ್ಲ. ಗಮನಾರ್ಹವಾಗಿ, ಗುತ್ತಿಗೆದಾರರಿಗೆ ಯಾವುದೇ ನೋಟಿಸ್‌ಅನ್ನೂ ನೀಡಲಾಗಿಲ್ಲ ಆರೋಪಿಸಿದ್ದಾರೆ.

ದಾಳಿಯ ನೇತೃತ್ವ ವಹಿಸಿದ್ದ ಹಿರಿಯ ಭೂವಿಜ್ಞಾನಿ ಬಿಂದನ್ ಪಾಟೀಲ್, “ಗುತ್ತಿಗೆದಾರರಿಗೆ ಕೇವಲ ಎಚ್ಚರಿಕೆ ನೀಡಲಾಗಿದೆ. ಅಕ್ರಮ ಗಣಿಗಾರಕೆ ತಡೆ ಕಾನೂನುಗಳ ಪ್ರಕಾರ; ವಾಹನಗಳು, ಯಂತ್ರೋಪಕರಣಗಳು ಹಾಗೂ ಖನಿಜಗಳನ್ನು ವಶಪಡಿಸಿಕೊಳ್ಳುವುದು ಕಡ್ಡಾಯ. ಆದರೆ, ಕೇವಲ ಎಚ್ಚರಿಕೆ ನೀಡಿರುವುದು ನಿರ್ಣಾಯಕ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಕೇವಲ ಎಚ್ಚರಿಕೆ ಕಾರ್ಯಾಚರಣೆಗೆ ಸಮವೇ” ಎಂದು ಪ್ರಶ್ನಿಸಿದ್ದಾರೆ.

ಅಕ್ರಮವಾಗಿ ಗಣಿಗಾರಿಕೆ ಮಾಡಿದ ಲ್ಯಾಟರೈಟ್ಅನ್ನು 15 ರಿಂದ 20 ಪೊಲೀಸ್ ಠಾಣೆಗಳ ವ್ಯಾಪ್ತಿ ದಾಟಿ ಕಲಬುರಗಿ ಮತ್ತು ಆಂಧ್ರಪ್ರದೇಶದ ಸಿಮೆಂಟ್ ಕಾರ್ಖಾನೆಗಳಿಗೆ ತಪಾಸಣೆ ಇಲ್ಲದೆ ಸಾಗಿಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕಾರ್ಯಾಚರಣೆಗಳು ಅಧಿಕಾರಿಗಳು ಮತ್ತು ಪೊಲೀಸರ ಸಹಕಾರವಿಲ್ಲದೆ ಮುಂದುವರೆಯಲು ಸಾಧ್ಯವೇ ಎಂದು ಗ್ರಾಮದ ಜನರು ಪ್ರಶ್ನಿಸಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಈ ಅಕ್ರಮ ಗಣಿಗಾರಿಕೆಯನ್ನು ಕೇವಲ ಗುತ್ತಿಗೆದಾರರ ಅಪರಾಧವೆಂದು ನೋಡಲಾಗುವುದಿಲ್ಲ. ಇದು ವ್ಯವಸ್ಥಿತ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ. ಇದು ಇಲಾಖೆಯ ಮೌನ ಮತ್ತು ರಾಜಕೀಯ ಪ್ರೋತ್ಸಾಹವಿದೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...