ಬೆಳಗಾವಿ | ಪವಿತ್ರ ಕುರ್‌ಆನ್ ಪ್ರತಿಗಳನ್ನು ಸುಟ್ಟು ಹಾಕಿದ ಘಟನೆ: ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ ಖಂಡನೆ

Date:

ಕಿಡಿಗೇಡಿಗಳು ಕುರ್‌ಆನ್‌ ಗ್ರಂಥವನ್ನು ಸುಟ್ಟು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂತಿಬಸ್ತವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಘಟನೆಯನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ ತೀವ್ರವಾಗಿ ಖಂಡಿಸಿದ್ದು, ಶಾಂತಿ ಮತ್ತು ಏಕತೆ ಕಾಪಾಡುವಂತೆ ಕರೆ ನೀಡಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ ಬೆಳಗಾವಿ ಶಾಖೆಯ ಮುಖಂಡರು, “ಪವಿತ್ರ ಕುರ್‌ಆನ್ ಅನ್ನು ಉದ್ದೇಶಪೂರ್ವಕವಾಗಿ ಸುಟ್ಟು ಅವಮಾನಿಸಿರುವುದು ಹೀನ ಕೃತ್ಯ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ವಿಶ್ವದಾದ್ಯಂತ ಶಾಂತಿ, ಮಾನವೀಯತೆ ಮತ್ತು ಸಮಾನತೆಯಂತಹ ಅಮೂಲ್ಯ ಸಂದೇಶಗಳನ್ನು ನೀಡುವ ಪವಿತ್ರ ಗ್ರಂಥದ ಅವಮಾನ ನಿಜಕ್ಕೂ ವಿಷಾದಕರ ಸಂಗತಿ.
ಈ ಘಟನೆ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ದುಃಖವನ್ನುಂಟು ಮಾಡಿದ್ದು, ನಮ್ಮ ಸಮಾಜದ ಶಾಂತಿ, ಸೌಹರ‍್ದತೆ ಹಾಗೂ ಸಂವಿಧಾನಾತ್ಮಕ ಮೌಲ್ಯಗಳಿಗೆ ದೊಡ್ಡ ಆತಂಕವನ್ನುಂಟು ಮಾಡುತ್ತದೆ. ಇಂತಹ ದುಷ್ಕೃತ್ಯಗಳು ಸಮಾಜದಲ್ಲಿ ದ್ವೇಷ ಮತ್ತು ಭೀತಿಯ ವಾತಾವರಣ ಹುಟ್ಟಿಸುವ ಹಿನ್ನೆಲೆಯಲ್ಲಿ, ನಾವು ಎಲ್ಲರೂ ಎಚ್ಚರಿಕೆಯಿಂದ, ಬುದ್ಧಿವಂತಿಕೆಯಿಂದ ಪ್ರತಿಕ್ರಿಯಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ, ಕುರ್‌ಆನ್‌, ಧಾರ್ಮಿಕ ಭಾವನೆಗೆ ಧಕ್ಕೆ, ಇನ್ಸ್‌ಪೆಕ್ಟರ್, ಅಮಾನತು, Belgaum, Quran, hurting religious sentiments, inspector, suspension,

ಇಂತಹ ಕೃತ್ಯಗಳು ಭಾವನಾತ್ಮಕವಾಗಿ ಎಲ್ಲರನ್ನೂ ಕದಡುತ್ತವೆ. ಆದರೆ ನಾವು ಶಾಂತಿಯುತ ಮತ್ತು ಕಾನೂನುಬದ್ಧ ಹಾದಿಯಲ್ಲಿಯೇ ನ್ಯಾಯಕ್ಕಾಗಿ ಹೋರಾಡಬೇಕು. ದ್ವೇಷಕ್ಕೆ ಯಾವುದೇ ಸ್ಥಾನವಿಲ್ಲ. ನಾವು ಈ ಕುರಿತಾಗಿ ಈಗಾಗಲೇ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಮಾಹಿತಿ ನೀಡಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ನೀಡಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಳಗಾವಿ | ಕುರ್‌ಆನ್‌ ಸುಟ್ಟು ಧಾರ್ಮಿಕ ಭಾವನೆಗೆ ಧಕ್ಕೆ; ಮುಸ್ಲಿಮರ ಪ್ರತಿಭಟನೆ – ಇನ್ಸ್‌ಪೆಕ್ಟರ್ ಅಮಾನತು

ಧೈರ್ಯ, ಸಹನೆ ಮತ್ತು ಏಕತೆ ಎಂಬ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ, ಶಾಂತಿಯುತವಾಗಿ ಪ್ರತಿಕ್ರಿಯಿಸುವಂತೆ ಕರೆ ನೀಡಿರುವ ಸೋಲಿಡಾರಿಟಿ ಬೆಳಗಾವಿ ಘಟಕವು, ಈಗಿನ ಪರಿಸ್ಥಿತಿಯಲ್ಲಿ ಶಿಸ್ತು, ಸಹಿಷ್ಣುತೆ ಮತ್ತು ಸಮಾನತೆಯ ನಡವಳಿಕೆಗಳೇ ಸಮಾಜದ ನಿಜವಾದ ಶಕ್ತಿ ಹಾಗೂ ಬದಲಾವಣೆಯ ಶ್ರೇಷ್ಠ ಮಾರ್ಗವಾಗಿದೆ. ಸಹಿಷ್ಣುತೆ ಮತ್ತು ಸಮಾನತೆಯ ನಡವಳಿಕೆಗಳೇ ಸಮಾಜದ ನಿಜವಾದ ಶಕ್ತಿ ಹಾಗೂ ಬದಲಾವಣೆಯ ಶ್ರೇಷ್ಠ ಮಾರ್ಗವಾಗಿದೆ ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...