ಬೆಳಗಾವಿ | ಹೆಚ್ಚುತ್ತಿರುವ ಸೈಬರ್‌ ವಂಚನೆ; ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕಳವಳ

Date:

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧಗಳ ಕುರಿತು ಸೋಲಿಡಾರಿಟಿ ಯೂತ್‌ ಮೂವ್ಮೆಂಟ್‌ ಕಳವಳ ವ್ಯಕ್ತಪಡಿಸಿದೆ.

ಈ ಕುರಿತು ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ನಸೀಮ್‌ ಅಹ್ಮದ್‌, “ಸರ್ಕಾರದ ಅಧಿಕೃತ ಅಂಕಿಅಂಶಗಳನ್ನು ಉಲ್ಲೇಖಿಸಿ, ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ನಾಗರಿಕರು ಐದು ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ಸೈಬರ್ ವಂಚನೆಗಳ ಮೂಲಕ ಕಳೆದುಕೊಂಡಿದ್ದಾರೆ. ಈ ಪೈಕಿ ರಿಕವರಿ ಆಗಿರುವುದು ಕೇವಲ 10% ಮಾತ್ರ. ಇದು ಅತ್ಯಂತ ಆತಂಕಕಾರಿ” ಎಂದರು.

WhatsApp Image 2025 12 11 at 11.45.51 AM
  1. ಬೆಳಗಾವಿ ಅಧಿವೇಶನದಲ್ಲಿ ಸೈಬರ್ ವಂಚನೆ ವಿಷಯವನ್ನು ಪ್ರಮುಖ ಚರ್ಚಾ ಅಂಶವನ್ನಾಗಿ ಮಾಡಿ, ಕಠಿಣ, ಸ್ಪಷ್ಟ ಹಾಗೂ ಪರಿಣಾಮಕಾರಿ ನೀತಿಗಳನ್ನು ರೂಪಿಸಬೇಕು.
  2. ವಂಚನೆಗೆ ಒಳಗಾದ ನಾಗರಿಕರ ನಷ್ಟವನ್ನು ಮರಳಿ ಪಡೆಯುವಂತೆ ರಾಜ್ಯ ಸರ್ಕಾರವು State Guarantee Mechanism ಅನ್ನು ರಚಿಸಬೇಕು.
  3. ರಾಜ್ಯ ಮಟ್ಟದಲ್ಲಿ ಸ್ವತಂತ್ರವಾಗಿ ಹಾಗೂ 24×7 ಕಾರ್ಯನಿರ್ವಹಿಸುವ ‘ಸೈಬರ್ ಸಹಾಯವಾಣಿ’ ಸ್ಥಾಪಿಸಬೇಕು.
  4. ಯುವಕರು ಹಾಗೂ ಸಾರ್ವಜನಿಕರಿಗಾಗಿ ಸೈಬರ್ ಸುರಕ್ಷತೆ, ಹ್ಯಾಕಿಂಗ್ ತಡೆ ಮತ್ತು ಡಿಜಿಟಲ್ ಜಾಗೃತಿ ಕುರಿತು ವ್ಯಾಪಕ ಅಭಿಯಾನಗಳನ್ನು ಜಾರಿಗೆ ತರಬೇಕು. ಎಂಬ ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ತೀರ್ಥಹಳ್ಳಿ ಮಾತನಾಡಿ, “ಅಧಿವೇಶನಗಳು ಜನರ ಹಣದಿಂದ ನಡೆಯುತ್ತವೆ. ಆದ್ದರಿಂದ ಜನಪ್ರತಿನಿಧಿಗಳು ರಾಜಕೀಯ ಕಚ್ಚಾಟಗಳನ್ನು ಬಿಟ್ಟು ಜನರ ನಿಜವಾದ ಸಮಸ್ಯೆಗಳ ಕಡೆ ಗಮನ ಹರಿಸಬೇಕು. ಜನರು ಬೆವರಿಳಿಸಿ ಸಂಪಾದಿಸಿದ ಹಣವನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಧ್ವನಿ ಸುವರ್ಣಸೌಧದವರೆಗೆ ತಲುಪಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಳಗಾವಿ | ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಮೋಸ; ಆದೇಶ ಗಾಳಿಗೆ ತೂರಿದವೇ ಕಾರ್ಖಾನೆಗಳು?

ನಗರಾಧ್ಯಕ್ಷ ಮಸೂದ್ ಅಹ್ಮದ್ ಮಾತನಾಡಿ, “ಸೈಬರ್ ವಂಚನೆ ವಿರುದ್ಧ ರಾಜ್ಯಾದ್ಯಂತ ಸಾರ್ವಜನಿಕ ಸಭೆಗಳು, ಸ್ತಬ್ಧಚಿತ್ರ ಪ್ರದರ್ಶನಗಳು, ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳು, ಯುವ ಸಮಾವೇಶಗಳು, ಸೈಬರ್ ಅಪರಾಧ ವಿಭಾಗದ ಸಹಭಾಗಿತ್ವದಲ್ಲಿ ಕಾರ್ಯಾಗಾರ ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಜನಪ್ರತಿನಿಧಿಗಳಿಗೆ ಮನವಿ ಪತ್ರಗಳ ಮೂಲಕ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ತಿಳಿಸಲಾಯಿತು” ಎಂದರು.

ಈ ಸಂದರ್ಭದಲ್ಲಿ ಬೆಳಗಾವಿ ನಗರ ಘಟಕದ ಕಾರ್ಯದರ್ಶಿ ಏಜಾಝ್ ಸಯೀದ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...