ಬೆಳಗಾವಿ | ಪೊಲೀಸ್‌ ಠಾಣೆ ಎದುರು ತಂದೆಯ ಮೃತದೇಹವಿಟ್ಟು ಇನ್ಸ್‌ಪೆಕ್ಟರ್ ಪ್ರತಿಭಟನೆ

Date:

ಪೊಲೀಸ್​ ಠಾಣೆ ಎದರು ತಮ್ಮ ತಂದೆಯ ಮೃತದೇಹ ಇಟ್ಟು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹಾರೂಗೇರಿಯಲ್ಲಿ ನಡೆದಿದೆ. ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ಅವರು ತಮ್ಮ ತಂದೆಯ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಅಶೋಕ್ ಸದಲಗಿ ಅವರು ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯಲ್ಲಿ ಇನ್​ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ತಮ್ಮ ತಂದೆ ಅಣ್ಣಪ್ಪ ಅವರ ಸಾವಿಗೆ ಹಾರೂಗೇರಿ ಪೊಲೀಸ್​ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿಯೇ ಕಾರಣ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ, ಜಮೀನು ವಿಚಾರವಾಗಿ ಅಣ್ಣಪ್ಪ ಮತ್ತು ಕೆಲವರು ನಡುವೆ ಗಲಾಟೆ ನಡೆದಿತ್ತು. ಬಾಬು ನಡೋಣಿ, ಪ್ರತಾಪ್ ಹರೋಲಿ, ವಸಂತ ಚೌಗಲಾ ಎಂಬವರು ತಮ್ಮ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿದ್ದನ್ನು ಅಣ್ಣಪ್ಪ ಪ್ರಶ್ನಿಸಿದ್ದರು. ಇದು ಜಗಳಕ್ಕೆ ಕಾರಣವಾಗಿತ್ತು. ಮಾತ್ರವಲ್ಲದೆ, ಬಾಬು ನಡೋಣಿ, ಪ್ರತಾಪ್ ಹರೋಲಿ ಅವರು ತಮ್ಮ ಸಂಗಡಿಗರೊಂದಿಗೆ ಸೇರಿ ಅಣ್ಣಪ್ಪ ಮೇಲೆ ಹಲ್ಲೆ ನಡಸಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಮೇಲಿನ ಹಲ್ಲೆ ಕುರಿತು ಅಣ್ಣಪ್ಪ ಪೊಲೀಸರಿಗೆ ದೂರು ನೀಡಿದ್ದರು. ಆದಾಗ್ಯೂ, ಎಲ್ಲರನ್ನೂ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಗಿತ್ತು. ಆದರೆ, ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಳ್ಳದ ಪೊಲೀಸರು, ದೂರುದಾರ ಅಣ್ಣಪ್ಪ ಅವರನ್ನೇ ಇಡೀ ದಿನ ಪೊಲೀಸ್‌ ಠಾಣೆಯಲ್ಲಿ ಇರಿಸಿಕೊಂಡು, ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಪರಿಣಾಮ, ಅಣ್ಣಪ್ಪ ಅವರ ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾಗಿದೆ. ಜೊತೆಗೆ, ಬಿಪಿ ಕೂಡ ಹೆಚ್ಚಾಗಿದೆ. ಹೀಗಾಗಿ, ಅಣ್ಣಪ್ಪ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೆ ಅಣ್ಣಪ್ಪ ಸಾವನ್ನಪ್ಪಿದ್ದಾರೆ.

ಹಾರೂಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಮಾಳಪ್ಪ ಪೂಜಾರಿ ಅವರು ನೀಡಿರುವ ಕಿರುಕುಳ ಮತ್ತು ನಿರ್ಲಕ್ಷ್ಯ ಧೋರಣೆಯಿಂದಲೇ ತಮ್ಮ ತಂದೆ ಅಣ್ಣಪ್ಪ ಸಾವನ್ನಪ್ಪಿದ್ದಾರೆ. ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ತಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ ಇನ್​ಸ್ಪೆಕ್ಟರ್ ಅಶೋಕ್ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಚಿಕ್ಕೋಡಿ ಡಿವೈಎಸ್‌ಪಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...