ಬೆಳಗಾವಿ | ಹಿಂದೂ ಕುಟುಂಬಕ್ಕೆ ಮನೆ ನಿರ್ಮಿಸಲು ನೆರವು ನೀಡಿದ ಜಮಾಅತೆ ಇಸ್ಲಾಮೀ ಹಿಂದ್, ಹೆಚ್‌ಆರ್‌ಎಸ್‌

Date:

ರಾಜ್ಯದಲ್ಲಿ ಧರ್ಮದ ಹೆಸರಿನಲ್ಲಿ ಕೋಮು ಗಲಭೆಗಳನ್ನು ಮಾಡಿ, ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ಮಧ್ಯೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯ ಅಂಗ ಸಂಸ್ಥೆಯಾದ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ (ಹೆಚ್‌ಆರ್‌ಎಸ್) ಬಡ ಹಿಂದೂ ಕುಟುಂಬಕ್ಕೆ ಹಿಂದೂ ಕುಟುಂಬದ ಮನೆ ನಿರ್ಮಾಣಕ್ಕೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿಯ ಸಾಯಿ ನಗರದ ನಿವಾಸಿ ಗೀತಾ ಅವರಿಗೆ ಮನೆ ನಿರ್ಮಿಸಿಕೊಳ್ಳಲು ಒಂದು ಲಕ್ಷ ರೂಪಾಯಿಗಳ ಧನ ಸಹಾಯ ಮಾಡುವುದರ ಮೂಲಕ ಮಾನವೀಯತೆ ಮೆರೆದಿದೆ.

ಬೆಳಗಾವಿಯ ಸಾಯಿ ನಗರದಲ್ಲಿ ಅತಿವೃಷ್ಟಿಯಿಂದ ಮನೆಗಳಿಗೆ ನೀರು ನುಗ್ಗಿ ಇಲ್ಲಿನ ಜನತೆ ಪರದಾಡುವಂತಾಗಿತ್ತು ಈ ಸಂದರ್ಭದಲ್ಲಿ ಇವರ ಸಹಾಯಕ್ಕೆ ಬಂದ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯು ಆಹಾರದ ದಿನಸಿ ಕಿಟ್ ಮತ್ತು ಟಾರ್ಪಲ್ ನೀಡಿ ಸಹಾಯ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿನ ನಿತ್ಯ ನಾಲ್ಕೈದು ಮನೆಗಳಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಗೀತಾ ಅವರು ಒಂದು ಸಣ್ಣ ಕೊಠಡಿಯಲ್ಲಿ ಕುಟುಂಬದ ಐದು ಜನರು ವಾಸ ಮಾಡುತ್ತಿದ್ದರು. ಈ ಮನೆಯ ತುಂಬೆಲ್ಲಾ ನೀರು ನುಗ್ಗಿ ಪರದಾಡುವುದನ್ನು ಕಂಡ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯು ಮನೆ ನಿರ್ಮಾಣಕ್ಕೆ ಸಹಾಯ ಮಾಡುವ ಭರವಸೆ ನೀಡಿತ್ತು.

ನಂತರದಲ್ಲಿ ಕೊಳಗೇರಿ ನಿವಾಸಿಗಳಿಗೆ ಸರ್ಕಾರದಿಂದ ಮನೆ ನಿರ್ಮಿಸಿಕೊಳ್ಳುವ ಯೋಜನೆಗೆ ಒಂದು ಲಕ್ಷ ರೂಪಾಯಿಗಳ ಡಿ‌.ಡಿ ಹಣವನ್ನು ನೀಡಿದರೆ ಮನೆ ನಿರ್ಮಾಣ ಮಾಡಿಕೊಡುವ ಯೋಜನೆಯ ಕುರಿತು ಸ್ಲಂ ಬೋರ್ಡ್ ಅಧಿಕಾರಿಗಳ ಜೊತೆ ಚರ್ಚಿಸಿ ಆ ಒಂದು ಲಕ್ಷ ರೂಪಾಯಿಗಳ ಡಿ.ಡಿ ಹಣವನ್ನು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಸಂಘಟನೆಯ ಅಂಗ ಸಂಸ್ಥೆಯಾದ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯು ಈ ಬಡ ಕುಟುಂಬಕ್ಕೆ ನೀಡಿ ಮಾನವೀಯತೆ ಮೆರೆದಿದೆ. ಗೀತಾ ಅವರ ಮನೆಯ ಪಕ್ಕದಲ್ಲಿ ಸಣ್ಣ ಶೆಡ್ ಒಂದರಲ್ಲಿ ವಾಸವಿದ್ದ ಜೈನು ಸನದಿ ಎಂಬುವವರ ಕುಟುಂಬಕ್ಕೂ ಸಹ ಒಂದು ಲಕ್ಷ ರೂಪಾಯಿಗಳ ಡಿ.ಡಿ ಹಣವನ್ನು ನೀಡಿದೆ‌.

ಈ ಕುರಿತು ಈ ದಿನ.ಕಾಮ್ ಜೊತೆಗೆ ಮಾತನಾಡಿದ ಜಮಾಅತೆ ಇಸ್ಲಾಮೀ ಸಂಘಟನೆಯ ಮುಖಂಡರಾದ ಯಾಸೀನ್ ಮಖಾನದಾರ್, “ನೆರೆ ಪ್ರವಾಹ ಬಂದಾಗ ನಾವು ಸಮೀಕ್ಷೆ ಮಾಡಿದ್ದೆವು. ಆ ಸಂದರ್ಭದಲ್ಲಿ ಗೀತಾ ಅವರ ಮನೆ ಸಂಪೂರ್ಣವಾಗಿ ಮನೆ ನೀರಿನಲ್ಲಿ ಮುಳುಗಿತ್ತು. ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯು ರಾಜ್ಯಾದ್ಯಂತ ಬಡವರ ಪರವಾಗಿ ಸಹಾಯ ಮಾಡುವ ಸಂಸ್ಥೆ. ಸದ್ಯ ಗೀತಾ ಅವರ ಕುಟುಂಬಕ್ಕೆ ಸ್ಲಂ ಬೋರ್ಡ್ ಮನೆ ನಿರ್ಮಾಣಕ್ಕೆ ಬೇಕಾಗಿರುವ ಡಿಡಿ ಹಣವನ್ನು ಚೆಕ್ ಮೂಲಕ ನೀಡುತ್ತಿದ್ದೇವೆ. ಕಷ್ಟ ಎಲ್ಲರಿಗೂ ಒಂದೇ. ಹಾಗಾಗಿ, ಯಾವುದೇ ಜಾತಿ-ಧರ್ಮಗಳ ಭೇದವಿಲ್ಲದೆ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೊಪ್ಪಳ | ಏಕಾಏಕಿ ಪ್ರವೇಶಾತಿ ಶುಲ್ಕ ಹೆಚ್ಚಳ : ಕಾನೂನು ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ನೆರವು ಪಡೆದುಕೊಂಡ ಫಲಾನುಭವಿ ಗೀತಾ ಅವರು ಧನ್ಯವಾದ ಸಲ್ಲಿಸಿದರು. ಸ್ಥಳೀಯ ನಿವಾಸಿಗಳಾದ ಜನಶಕ್ತಿ ಸಂಘಟನೆಯ ರವಿ ಪಾಟೀಲ್ ಮಾತನಾಡಿ, ಪ್ರತಿ ವರ್ಷವೂ ಮಳೆಗಾಲದಿಂದ ಜನರು ಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಬಗ್ಗೆ ಯಾಸೀನ್ ಮಖಾನದಾರ್ ಅವರಲ್ಲಿ ತಿಳಿಸಿದ್ದೆವು. ಕಷ್ಟಕ್ಕೆ ಸ್ಪಂದಿಸಿ ಅವರ ಸಂಸ್ಥೆಯಿಂದ ಇಲ್ಲಿಯ ಎರಡು ಕುಟುಂಬಗಳಿಗೆ ಸಹಾಯ ಮಾಡಿದ್ದಾರೆ. ನಿವಾಸಿಗಳ ಪರವಾಗಿ ಧನ್ಯವಾದ ಸಲ್ಲಿಸುತ್ತೇವೆ” ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...