ಬೆಳಗಾವಿ | ಬಿಸಿಸಿ ಸಭೆಯಲ್ಲಿ ಮತ್ತೆ ಭುಗಿಲೆದ್ದ ಕನ್ನಡ-ಮರಾಠಿ ವಿವಾದ

Date:

ಬುಧವಾರ ನಡೆದ ಬೆಳಗಾವಿ ಮಹಾನಗರ ಪಾಲಿಕೆಯ (ಬಿಸಿಸಿ) ಸಾಮಾನ್ಯ ಸಭೆಯಲ್ಲಿ ಮತ್ತೆ ಕನ್ನಡ-ಮರಾಠಿ ವಿವಾದ ಎದ್ದಿದೆ. ಸಭೆಯ ಆರಂಭದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮೂವರು ಸದಸ್ಯರು ಬಿಸಿಸಿಯ ಅಜೆಂಡಾ ಪ್ರತಿ ಮತ್ತು ಇತರ ದಾಖಲೆಗಳನ್ನು ಮರಾಠಿಯಲ್ಲಿ ನೀಡಬೇಕು ಎಂದು ಒತ್ತಾಯಿಸಿ ಸಭೆಯಲ್ಲಿಯೇ ಧರಣಿ ನಡೆಸಿದ್ದಾರೆ.

ಕಳೆದ ಸಭೆಯಲ್ಲಿ ಮೇಯರ್ ಅವರು ಮರಾಠಿಯಲ್ಲಿ ದಾಖಲೆಗಳನ್ನು ನೀಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಈಗ ಮರಾಠಿ ಭಾಷೆಯಲ್ಲಿ ಅಜೆಂಡಾ ಪ್ರತಿ ನೀಡಿಲ್ಲವೆಂದು ಎಂಇಎಸ್‌ ಸದಸ್ಯರು ಆರೋಪಿಸಿದ್ದಾರೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ ಪಾಟೀಲ ಸೇರಿದಂತೆ ಆಡಳಿತಾರೂಢ ಬಿಜೆಪಿ ಸದಸ್ಯರು ಎಂಇಎಸ್ ಸದಸ್ಯರ ವರ್ತನೆಯನ್ನು ಖಂಡಿಸಿದ್ದಾರೆ. ”ಸಭೆಯಲ್ಲಿ ಧರಣಿ ನಡೆಸುವ ಮೂಲಕ ಎಂಇಎಸ್‌ ಸದಸ್ಯರು ಮೇಯರ್‌ಗೆ ಅವಮಾನ ಮಾಡಿದ್ದಾರೆ. ಸಭೆಯು ತರಕಾರಿ ಮಾರುಕಟ್ಟೆ ಅಲ್ಲ. ಧರಣಿ ಕುಳಿತಿರುವ ಸದಸ್ಯರು ಕೇವಲ ರಾಜಕೀಯ ಮಾಡಲು ಬಯಸುತ್ತಿದ್ದಾರೆ. ಅವರಿಗೂ ನಗರದ ಅಭಿವೃದ್ಧಿ ವಿಷಯಗಳಿಗೂ ಸಂಬಂಧವಿಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಡಳಿತ ಭಾಷೆ ಹೊರತುಪಡಿಸಿ ಇತರ ಭಾಷೆಗಳಲ್ಲಿ ದಾಖಲೆಗಳನ್ನು ನೀಡಲು ಸಾಧ್ಯವೇ ಎಂಬುದನ್ನು ಸ್ಪಷ್ಟಪಡಿಸಬೇಕು. ಕರ್ನಾಟಕ ಮುನ್ಸಿಪಲ್ ಕಾಯ್ದೆಯಲ್ಲಿ ಅವಕಾಶವಿದ್ದರೆ ಮರಾಠಿಯಲ್ಲಿ ದಾಖಲೆಗಳನ್ನು ನೀಡಬೆಕು” ಎಂದು ಅಧಿಕಾರಿಗಳಿಗೆ ಶಾಸಕ ಪಾಟೀಲ್ ಸೂಚಿಸಿದ್ದಾರೆ.

ಕಾನೂನು ಅಧಿಕಾರಿ ಯು.ಡಿ.ಮಾಧುಸ್ವಾಮಿ ಮಾತನಾಡಿ, “ಕರ್ನಾಟಕ ಮುನ್ಸಿಪಲ್ ಕಾಯ್ದೆಯಲ್ಲಿ ಅಂತಹ ಯಾವುದೇ ನಿಯಮಗಳಿಲ್ಲ. ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಮಾತ್ರ ದಾಖಲೆಗಳನ್ನು ಒದಗಿಸಲು ಕಾಯ್ದೆಯಲ್ಲಿ ಅವಕಾಶವಿದೆ” ಎಂದು ಹೇಳಿದ್ದಾರೆ.

“ಬಿಸಿಸಿಯಲ್ಲಿ ಭಾಷಾಂತರಕಾರರೊಬ್ಬರು ನಿವೃತ್ತಿಯಾಗಿರುವುದರಿಂದ ಕನ್ನಡದಲ್ಲಿಯೇ ಸಭೆಯ ನೋಟಿಸ್ ನೀಡಿದ್ದೇವೆ” ಎಂದು ಮೇಯರ್ ಶೋಭಾ ಸೋಮನಾಚೆ ಅವರು ಮನವರಿಕೆ ಮಾಡಿದ ನಂತರ ಎಂಇಎಸ್ ಸದಸ್ಯರು ಧರಣಿ ಹಿಂಪಡೆದರು. ಮುಂದಿನ ಸಭೆಯಿಂದ ಅವರು ಮರಾಠಿಯಲ್ಲಿ ನೋಟಿಸ್ ಮತ್ತು ಅಜೆಂಡಾ ಪ್ರತಿಯನ್ನು ನೀಡುವಂತೆ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...