ಬೆಳಗಾವಿ | ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿಗೆ ಸ್ಥಳಾಂತರಿಸಿ: ರೈತರಿಂದ ಜಿಲ್ಲಾಡಳಿತಕ್ಕೆ ಒತ್ತಾಯ

Date:

ಭಾರತೀಯ ಕೃಷಿಕ ಸಮಾಜದ ರೈತ ಮುಖಂಡರು ಹಾಗೂ ಬೆಳಗಾವಿ ಜಿಲ್ಲಾ ಸಗಟು ತರಕಾರಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘಟನೆಗಳು ಬೆಳಗಾವಿ ನಗರದಲ್ಲಿರುವ ಹೂ, ಹಣ್ಣು,ಹುಣಸೆ ಹಣ್ಣು, ಬಾಳೆಹಣ್ಣು, ಮಾರಾಟ ಮಾಡುತ್ತಿರುವ ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ಖಾಸಗಿ ಮಾರುಕಟ್ಟೆಯಲ್ಲಿ ಹೂವು ಹಣ್ಣು ಮಾರಾಟ ಮಾಡುತ್ತಿದ್ದು ಎಪಿಎಂಸಿಗೆ ಸ್ಥಳಾಂತರ ಮಾಡಬೇಕು. ಖಾಸಗಿ ಮಾರುಕಟ್ಟೆಯಲ್ಲಿ ರೈತರಿಗೆ ಮೋಸ ಆಗುತ್ತಿದೆ. ದಬ್ಬಾಳಿಕೆ ಆಗುತ್ತಿದೆ. ಕಳೆದ 40 ವರ್ಷಗಳಿಂದ ಈ ಸಮಸ್ಯೆ ಎದುರಿಸುತ್ತಿದ್ದೇವೆ. ಕೇವಲ ತರಕಾರಿ ಮಾತ್ರವಲ್ಲ, ಎಲ್ಲವನ್ನೂ ಸರಕಾರಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬೇಕು. ಎಪಿಎಂಸಿ ನಿರ್ವಹಣೆ ಮಾಡಲು ಸರ್ಕಾರದಿಂದ ಕೃಷಿ ಮಾರುಕಟ್ಟೆ ಇರುವಾಗ ಇದನ್ನು ಖಾಸಗೀಕರಣ ಮಾಡಬಾರದು ಎಂದು ಜಿಲ್ಲಾಡಳಿತಕ್ಕೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.

ತೂಕದಲ್ಲಿ ಪಾರದರ್ಶಕತೆ ಇರಬೇಕು. ಉಸ್ತುವಾರಿ ಮಾಡುವ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಸಂಕೇಶ್ವರದಲ್ಲಿ ತಕ್ಷಣ ಜಿಲ್ಲಾಧಿಕಾರಿಗಳು ಆದೇಶ ಮಾಡಿದ ಹಾಗೆ ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಇದೇ ರೀತಿಯ ಹೊರಡಿಸಬೇಕು. ಒಂದು ವೇಳೆ ಕ್ರಮ ಕೈಗೊಳ್ಳದಿದ್ದಲ್ಲಿ ಅನಿರ್ದಿಷ್ಟಾವಧಿ ಧರಣಿ ಮಾಡಲಾಗುವುದು ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷರಾದ ಸಿದಗೌಡ ಮೋದಗಿ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಮುಖಂಡರಾದ ಶಿವಲಿಲಾ ಮಿಸಾಳೆಯವರು ಮಾತನಾಡಿ, “ರಾಜ್ಯದಲ್ಲಿ ಕೇಂದ್ರದಲ್ಲಿರುವ ಸರಕಾರಗಳಿಗೆ ಸರಕಾರಿ ಸಂಸ್ಥೆಗಳು ಏಕೆ ಬೇಡ? ಖಾಸಗೀಕರಣದಿಂದ ಜನರಿಗೆ ಮೋಸ ಮಾಡುತ್ತಿದ್ದೀರಿ. ಸಣ್ಣ ಪುಟ್ಟ ವ್ಯಾಪಾರಸ್ಥರನ್ನು ಎಪಿಎಂಸಿಗೆ ಸ್ಥಳಾಂತರ ಮಾಡಿ ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕೋಲಾರ | ಆತಂಕ ಸೃಷ್ಟಿಸಿದ್ದ ಸೆನ್ಸಾರ್ ಸೂಟ್‌ಕೇಸ್; ಲಘು ಸ್ಫೋಟದ ಮೂಲಕ ನಾಶ

ಬೆಳಗಾವಿ ಜಿಲ್ಲಾ ಸಗಟು ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘವು ವ್ಯಾಪಾರಸ್ಥರು ಆರ್ಥಿಕವಾಗಿ, ಮಾನಸಿಕವಾಗಿ ಕುಗ್ಗಿದ್ದಾರೆ. ನಮ್ಮನ್ನು ನಂಬಿದ ಕುಟುಂಬಗಳು, ಕೂಲಿ ಕಾರ್ಮಿಕರು, ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದೇವೆ. ಅನಧಿಕೃತವಾಗಿರುವ ಜೈ ಕಿಸಾನ್ ಖಾಸಗಿ ಮಾರುಕಟ್ಟೆಯನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಜೀವ ಡೊಂಗರಗಾಂವಿ, ರಮೇಶ ರಾಮಗೊಂಡನ್ನವರ, ಶಂಕರ್ ಡವಳಿ, ಮಲ್ಲಿಕಾರ್ಜುನ ಡೊಗರಗಾಂವಿ, ಶೇಖರ ಅಕ್ಕನ್ನವರ ಹಾಗೂ ಸಗಟು ತರಕಾರಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...