ಸ್ಮಾರ್ಟ್‌ ಸಿಟಿಯಾಗುವತ್ತ ಬೆಳಗಾವಿ; ನೂತನ ಬಸ್ ನಿಲ್ದಾಣ ಉದ್ಘಾಟನೆ, 700 ಹೊಸ ಬಸ್‌ಗಳ ಸೇರ್ಪಡೆ

Date:

ಬೆಳಗಾವಿ ನಗರ ಸಾರಿಗೆ ವ್ಯವಸ್ಥೆಯ ಹೊಸ ಅಧ್ಯಾಯ ಆರಂಭವಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ 700 ಹೊಸ ಬಸ್ಸುಗಳ ಜೊತೆಗೆ ಬೆಳಗಾವಿ ನಗರ ಬಳಕೆಗೆ ಹೊಸದಾಗಿ 100 ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಗೊಳಿಸಿರುವುದಾಗಿ ಅವರು ಘೋಷಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಲಾ 50% ಅನುದಾನದೊಂದಿಗೆ ಒಟ್ಟು 49.20 ಕೋಟಿ ವೆಚ್ಚದಲ್ಲಿ ಸುಮಾರು 2 ಎಕರೆ 19 ಗುಂಟೆ ವಿಸ್ತೀರ್ಣದಲ್ಲಿ ಈ ಬಸ್‌ ನಿಲ್ದಾಣವನ್ನು ನಿರ್ಮಿಸಲಾಗಿದೆ. ಅದೇ ರೀತಿ 5 ಎಕರೆ 5 ಗುಂಟೆ ವಿಸ್ತೀರ್ಣದಲ್ಲಿ, ರೂ.24 ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್ ಘಟಕ ಸ್ಥಾಪನೆ ಮಾಡಲಾಗಿದೆ ಎಂದರು.

WhatsApp Image 2025 10 05 at 3.11.34 PM

“ಸಾರಿಗೆ ಸಂಸ್ಥೆಗಳಲ್ಲಿ ಕಳೆದ ಎರಡುವರೆ ವರ್ಷಗಳಲ್ಲಿ 10000 ಹೊಸ‌ ನೇಮಕಾತಿ‌ ಮಾಡಲಾಗಿದೆ. 215 ಕ್ಕೂ ಹೆಚ್ಚು ಪ್ರಶಸ್ತಿ‌ ಪುರಸ್ಕಾರಗಳು ದೊರೆತಿವೆ. ಶಕ್ತಿ‌ ಯೋಜನೆಯು ಯಶಸ್ವಿಯಾಗಿ ನಡೆಯುತ್ತಿದ್ದು, ಒಟ್ಟು 565.48 ಕೋಟಿ ಮಹಿಳಾ ಟಿಕೇಟ್ ವಿತರಣೆಯಾಗಿದೆ. ಇದಕ್ಕಾಗಿ ರೂ.14456 ಕೋಟಿ ವೆಚ್ಚವಾಗಿದೆ. ಶಕ್ತಿ ಯೋಜನೆಯು ಗೋಲ್ಡನ್‌ ‌ಬುಕ್‌ ಆಪ್ ವರ್ಲ್ಡ್ ರೆಕಾರ್ಡ್ಸ್ ( Golden Book of World Records) ಮತ್ತು ಇಂಟರ್ ನ್ಯಾಶನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ( International Book of World Records ) ಗಳಲ್ಲಿ ಸೇರ್ಪಡೆಯಾಗಿರುವುದು ಶಕ್ತಿ‌‌ ಯೋಜನೆಯ ಯಶಸ್ಸು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ನಗರ ಸಾರಿಗೆ ಬಸ್‌ ನಿಲ್ದಾಣದಲ್ಲಿ ಒದಗಿಸಿದ ಸೌಕರ್ಯಗಳು: ಬಸ್ ನಿಲ್ದಾಣದಲ್ಲಿ 28 ಅಂಕಣಗಳು,1365 ಸಾರಿಗೆ ಸರತಿಗಳು ನಿರ್ಗಮನ, 56 ಬಡಾವಣೆಗಳು ಒಳಗೊಂಡಂತೆ ಉಪನಗರದ 87 ಸ್ಥಳಗಳಿಗೆ ಒಟ್ಟು 143 ಸ್ಥಳಗಳಿಗೆ 21 ಕಿಮೀ ವ್ಯಾಪ್ತಿಯಲ್ಲಿ ಬಸ್ ಸೌಲಭ್ಯ, ಪ್ರತಿ ದಿನ ಸುಮಾರು 96 ಸಾವಿರ ಜನ ಪ್ರಯಾಣಿಕರು ಪ್ರಯಾಣಿಸಲಿದ್ದಾರೆ. ನೂತನ ನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ತಳಮಹಡಿ ಮತ್ತು ಐದು(5) ಮಹಡಿ, ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳು, ಕುಡಿಯುವ ನೀರು, ಶೌಚಾಲಯಗಳು, ಶಿಶುಗಳಿಗೆ ಹಾಲುಣಿಸುವ ಪ್ರತ್ಯೇಕ ಕೊಠಡಿ, ವಿಕಲಚೇತನರ ಪ್ರತ್ಯೇಕ ರಾಂಪ್ ವ್ಯವಸ್ಥೆ, ಪೊಲೀಸ್ ಚೌಕಿ, ವಿಭಾಗೀಯ ಕಚೇರಿ, , ಸಬ್-ವೇ ಸಂಪರ್ಕ, ಲಿಫ್ಟ್, ಎಸ್ಕಲೇಟರ್ ಸೌಲಭ್ಯ ಕೂಡ ಇದೆ.

ಇದನ್ನೂ ಓದಿ: ಬೆಳಗಾವಿ | ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ; ರಮೇಶ್ ಕತ್ತಿ ಪೆನಲ್ ಗೆಲುವಿಗೆ ಕಾರಣವಾದ ಅಂಶಗಳಿವು…

ಕಾರ್ಯಕ್ರಮದಲ್ಲಿ ‌ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು, ಮಾನ್ಯ ಲೋಕೋಪಯೋಗಿ ಸಚಿವರು, ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು, ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು, ಮಾನ್ಯ ಅಧ್ಯಕ್ಷರು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...