ಬೆಳಗಾವಿ | ಪೇಜಾವರ ಸ್ವಾಮೀಜಿ ನಡೆ ಸಂವಿಧಾನ ವಿರೋಧಿಯಾಗಿದೆ: ಸಿದಾರ್ಥ ಸಿಂಗೆ

Date:

ತಮಗೆ ಮಾತ್ರ ಗೌರವ ದೊರಕಿಸುವ ಸಂವಿಧಾನ ಜಾರಿಗೆ ಬರಬೇಕು ಎಂದು ಪೇಜಾವರ ಸ್ವಾಮಿಗಳು ಆಶಿಸುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಸಿದಾರ್ಥ ಸಿಂಗೆ ಹೇಳಿದರು.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾಬು ಜಗಜೀವನರಾಂ ಭವನದಲ್ಲಿ ನಡೆದ 72ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮನುಸ್ಮೃತಿಯೇ ವೈದಿಕರ ಸಂವಿಧಾನವಾಗಿ ಜಾರಿಯಲ್ಲಿದ್ದ ಕಾಲದಲ್ಲಿ ಶೂದ್ರಾತಿ ಶೂದ್ರರು ಸಮಾಜದ ಮುಖ್ಯ ವಾಹಿನಿಯಿಂದ ದೂರವಾಗಿದ್ದರು. ಮತ್ತು ಪುರೋಹಿತಶಾಹಿ ವರ್ಗದ ಅಟ್ಟಹಾಸ ಮೆರೆದಿತ್ತು. ಆದರೆ ಅಂಬೇಡ್ಕರ್ ಭಾರತದ ಸಂವಿಧಾನದ ಮೂಲಕ ಈ ದೇಶದ ಕಟ್ಟಕಡೆಯ ಜನರನ್ನೂ ಮನುಷ್ಯರಂತೆ ಕಂಡು ಎಲ್ಲರಿಗೂ ವಿದ್ಯೆ, ಆಸ್ತಿ, ಅಧಿಕಾರ ಹೊಂದುವ ಅವಕಾಶವನ್ನು ನೀಡಲು ಅನುವು ಮಾಡಿಕೊಟ್ಟರು. ಅದನ್ನು ಸಹಿಸಲಾಗದ ಪೇಜಾವರ ಸ್ವಾಮೀಜಿ ತಮಗೆ ಗೌರವ ದೊರಕಿಸುವ ಸಂವಿಧಾನ ಜಾರಿಯಾಗಲಿ ಎಂದು ಹೆಳುವ ಮೂಲಕ ಮನುಸ್ಮೃತಿಯನ್ನು ಎತ್ತಿಹಿಡಿದು ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಳ ಸಮುದಾಯಕ್ಕೆ ಸೇರಿದವರು ಮಂತ್ರಿ, ಮುಖ್ಯಮಂತ್ರಿ ಅಲ್ಲದೇ ರಾಷ್ಟ್ರಪತಿಗಳೂ ಆದರು. ಇದು ಪೇಜಾವರ ಸ್ವಾಮಿಗಳಿಗೆ ಅಸಹನೀಯವಾಗಿದೆ ತಮಗೆ ಮಾತ್ರ ಸಮಾಜದಲ್ಲಿ ಸಿಗುತ್ತಿದ್ದ ಗೌರವ ಮಾನ ಸನ್ಮಾನಗಳು ಮನುಷ್ಯರಾದ ಎಲ್ಲರಿಗೂ ಸಿಗುತ್ತಿರುವದು ಅವರಿಗೆ ಸಹಿಸಲು ಆಗುತ್ತಿಲ್ಲ. ಆ ಕಾರಣದಿಂದ ಅಂಬೇಡ್ಕರ್ ರಚಿಸಿದ ಸಂವಿಧಾನ ಬದಲಾಗಬೇಕೆಂದು ಬಯಸುತ್ತಿದ್ದಾರೆ. ಎಲ್ಲರೂ ಅವರ ನಡೆಯನ್ನು‌ ಖಂಡಿಸಲೆಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಶುರಾಮ ಟೊಣಪೆ ಮಾತನಾಡಿ, ನೂತನವಾಗಿ ರಚನೆಗೊಂಡಿರುವ ಚಿಕ್ಕೋಡಿ ಜಿಲ್ಲೆಗೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಜಿಲ್ಲೆ ಎಂದು ನಾಮಕರಣ ಮಾಡಿ ಜಿಲ್ಲೆಯನ್ನು ಘೋಷಿಸಬೇಕು. ಇಲ್ಲವಾದಲ್ಲಿ ಭೀಮವಾದ ಡಿಎಸ್ಎಸ್ ವತಿಯಿಂದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳುಲಾಗುತ್ತದೆ ಎಂದು ಎಚ್ಚರಿಸಿದರು.

ಈ ವರದಿ ಓದಿದ್ದೀರಾ? ಬೆಳಗಾವಿ | ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ರೈತ, ಕಾರ್ಮಿಕರ ಎಚ್ಚರಿಕೆ ಜಾಥಾ

ಈ ಸಂದರ್ಭದಲ್ಲಿ ಚಿದಾನಂದ ತಳಕೇರಿ, ಕೆಂಪಣ್ಣ ಶಿರಹಟ್ಟಿ, ಸಂಗೀತಾ ಕಾಂಬಳೆ, ರೇಖಾ ಬಂಗಾರಿ, ಪ್ರಕಾಶ ಕಾಂಬಳೆ, ಸುಖದೇವ್ ತಳವಾರ್, ಗಣಪತಿ ಮೈಶಾಳೆ, ಮಹಾದೇವ ಕಾಂಬಳೆ, ನಿಕಿತಾ ಗಡಾದೆ, ಕಾಮಣ್ಣ ಕಾಂಬಳೆ, ಸಂತೋಷ್ ಕಾಂಬಳೆ, ರಾಕೇಶ್ ನಸಲಾಪುರ, ಸಿದ್ದಪ್ಪ ರಾಜಂಗಳೆ, ಪ್ರವೀಣ ಕಾಂಬಳೆ, ಗೀತಾ ಕಾಂಬಳೆ, ವಾಸು ದೊಡ್ಡಮನಿ, ಸಚಿನ ಕಾಂಬಳೆ ಹಾಗೂ ಸಂಘಟನಾ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...