ಬೆಳಗಾವಿ | ಚರಿತ್ರೆ ಇಲ್ಲದವರ, ಚರಿತ್ರೆ ಕಟ್ಟಿಕೊಡುವಂತೆ ಕವಿತೆ ಇರಬೇಕು: ಯುವ ಕವಿ ದೇವರಾಜ್ ಹುಣಸಿಕಟ್ಟಿ

Date:

“ಕವಿತೆ ಚರಿತ್ರೆ ಇಲ್ಲದವರ ಚರಿತ್ರೆಯನ್ನು ಕಟ್ಟಿಕೊಡುವ, ಭರವಸೆ ತುಂಬುವ,  ಕೆಲಸವನ್ನು ಅನಾದಿ ಕಾಲದಿಂದಲೂ ಕವಿತೆ ಮಾಡುತ್ತಿದ್ದು, ಆ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಕಾಲದ ಸಂಕಟಕ್ಕೆ, ನೋವುಗಳಿಗೆ ಸ್ಪಂದಿಸದಿದ್ದರೆ,  ಪರಕೀಯರಾಗಿ ಉಳಿದುಕೊಳ್ಳುವ ಅಪಾಯ ನಮಗೆ ಇರುತ್ತದೆ. ಹಾಗಾಗಿ ಪರಕೀಯತೆಯನ್ನು ನಾವು ಯಾವತ್ತಿಗೂ ತಲುಪಬಾರದು. ನಮ್ಮೊಳಗೆ ಜೀವಂತಿಕೆ  ಸಂಕಟಕ್ಕೆ, ನೋವಿಗೆ ಸದಾ ತುಡಿತ ಇರಬೇಕು” ಎಂದು ಕವಿಗೋಷ್ಠಿ ಅಧ್ಯಕ್ಷತೆಯನ್ನು ಉದ್ದೇಶಿಸಿ ಯುವ ಕವಿ ದೇವರಾಜ್ ಹುಣಸಿಕಟ್ಟಿ ಹೇಳಿದರು.

ಬೆಳಗಾವಿ ಪಟ್ಟಣದ ಕನ್ನಡ ಭವನದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಕನ್ನಡ ಭವನ ಸಹಯೋಗದಲ್ಲಿ ಯುವ ಕವಿಗೋಷ್ಠಿಯಲ್ಲಿ ಮಾತನಾಡಿದರು.

“ಮನುಜ ಕುಲ, ಮನುಜ ಜಾತಿ ತಾನೊಂದೆ ವಲಂ’ ಎಂದ ಪಂಪನ ಗ್ರಹಿಕೆ ಈ ನೆಲದ ಸಾಹಿತ್ಯದ ಗ್ರಹಿಕೆ ಅಷ್ಟೇ ಅಲ್ಲ, ಜೀವನ ಗ್ರಹಿಕೆ. ಅದಕ್ಕೆ ಈಡಾದಾಗಲೆಲ್ಲ ಕವಿ ಮಾತನಾಡಬೇಕಾಗುತ್ತದೆ. ಅನಾದಿ ಕಾಲದಿಂದಲ್ಲೂ ಆಯಾ ಕಾಲ ಘಟ್ಟದಲ್ಲಿ  ವಚನಕಾರರು, ಸಾಹಿತಿಗಳು, ಲೇಖಕರು ಪ್ರಗತಿಪರ ಚಿಂತಕರು ಮಾಡಿಕೊಂಡು ಬಂದಿರುವರು. ಮುಂದುವರೆದು ಆ ಮಹತ್ತರ ಜವಾಬ್ದಾರಿಯನ್ನು ಈ ಕಲಾಘಟ್ಟದ, ನನ್ನ ಕಾಲದ ಕವಿಗಳು ಕೂಡಾ ಅತ್ಯಂತ ಎಚ್ಚರದಿಂದ ಮಾಡುತ್ತಿರುವುದಕ್ಕೆ ಈ ಕವಿಗೋಷ್ಠಿ ಸಾಕ್ಷಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸುರತ್ಕಲ್‌ ಎನ್‌ಐಟಿಕೆಯಲ್ಲಿ ಕೃಷ್ಣಾ ನದಿ ಜಲಾನಯನ ನಿರ್ವಹಣಾ ಅಧ್ಯಯನಗಳ ಕುರಿತು ಕಾರ್ಯಾಗಾರ

“ಇಲ್ಲಿಯ ಕವಿಗಳ ಕವಿತೆಗಳಲ್ಲಿ ವ್ಯವಸ್ಥೆಯಲ್ಲಿರುವ ಹುಳುಕಿಗೆ ಕನ್ನಡಿ ಹಿಡಿಯುವಂತಿವೆ. ಭಾಷೆ ಬಳಕೆಯ ಸೊಗಡು ಮತ್ತು ಕಟ್ಟುವಿಕೆಯ ಭಿನ್ನತೆಯಿಂದ ಎರಡು ಕವಿತೆಗಳು ನನ್ನ ಗಮನ ಸೆಳೆದಿವೆ.  ಸುಮಿತ್ ಮೇತ್ರಿ ಅವರ ‘ಹಲಸಂಗಿ’ ಮತ್ತು ಶಿವರಾಜ ಕಾಂಬಳೆ ಅವರ ಇನ್ನೂ ಆರದ ಬೆವರ ನೆತ್ತವು’ ಕವಿತೆಗಳು ಭಾಷೆಯ ಬಳಕೆಯಲ್ಲಿ ಅತ್ಯಂತ ಸಮರ್ಥ ಹಾಗೂ ಭಿನ್ನವಾಗಿವೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕವಿಗೋಷ್ಠಿಯಲ್ಲಿ ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ವಿಜಯಪುರ, ಧಾರವಾಡದ ಯುವ ಕವಿಗಳು ಕವಿತೆಗಳನ್ನು ವಾಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...