ಬೆಳಗಾವಿ | ವಾಯವ್ಯ ಕರ್ನಾಟಕ ಬದಲು ಕಿತ್ತೂರು ಕರ್ನಾಟಕ ಸಾರಿಗೆ ಎಂದು ನಾಮಕರಣಕ್ಕೆ ಚಿಂತನೆ: ಸತೀಶ್ ಜಾರಕಿಹೊಳಿ

Date:

200ನೇ ರಾಣಿ ಚನ್ನಮ್ಮನ ಕಿತ್ತೂರ ವಿಜಯೋತ್ಸವದ ಹಿನ್ನೆಲೆಯಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಬದಲಾಗಿ ಕಿತ್ತೂರ ಕರ್ನಾಟಕ ಸಾರಿಗೆ ಎಂದು ನಾಮಕರಣ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

2024 ರ ಕಿತ್ತೂರ ಚನ್ನಮ್ಮ ಉತ್ಸವದ ಪೂರ್ವಭಾವಿ ಸಿದ್ದತಾ ಸಭೆಯು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಮಾತನಾಡಿದ ಸಚಿವರು, ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವಕ್ಕೆ 200 ವರ್ಷಗಳು ತುಂಬಿರುವ ಹಿನ್ನಲೆ ಕಿತ್ತೂರು ಉತ್ಸವ ವಿಜೃಂಭಣೆಯಿಂದ ಆಚರಿಸಬೇಕಿದೆ. ಇದೇ ವೇಳೆ ವಾಯ ಕರ್ನಾಟಕ ಸಾರಿಗೆ ಬದಲಾಗಿ ಕಿತ್ತೂರ ಕರ್ನಾಟಕ ಸಾರಿಗೆ ಎಂದು ನಾಮಕರಣ ಮಾಡಲು ಚಿಂತಿಸಲಾಗುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿತ್ತೂರ ಹಾಗೂ ಸ್ವಾತಂತ್ರ್ಯ ಯೋಧರ ಕುರಿತು ಪ್ರಬಂಧ, ರಸಪ್ರಶ್ನೆ ಸ್ಪರ್ಧೆಗಳನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುವುದರ ಜೊತೆಗೆ ಕಾರ್ಯಕ್ರಮದ ಉದ್ಘಾಟನೆಗೆ ಸೂಕ್ತ ಗಣ್ಯರನ್ನು ಗುರುತಿಸಿ ಜೊತೆಗೆ ಉತ್ಸವದ ಸಂದರ್ಭದಲ್ಲಿ ಕಿತ್ತೂರಿನ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಉತ್ಸವದ ಅಂಗವಾಗಿ ಆಯೋಜಿಸುವ ಕ್ರೀಡಾ ಕೂಟಗಳಲ್ಲಿ ಗ್ರಾಮೀಣ ಭಾಗದ ಕ್ರೀಡೆಗಳಿಗೆ ಹೆಚ್ಚಿನ ಗಮನ ನೀಡಬೇಕು. ಹಾಗೂ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಮತ್ತು ನಗದು ಬಹುಮಾನ ನೀಡಬೇಕು.

ಮೂರು ದಿನಗಳ ಕಾಲ ಜರುಗಲಿರುವ ಚನ್ನಮ್ಮನ ಉತ್ಸವದ ಕಾರ್ಯಕ್ರಮದ ಪ್ರಯುಕ್ತ ಮಾಧ್ಯಮ ಗೋಷ್ಠಿ ಸೇರಿದಂತೆ ಇತರೆ ಗೋಷ್ಠಿಗಳ ಆಯೋಜಿಸಬೇಕು, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಲ್ಲಿ ಸ್ಥಳೀಯ ಕಲಾವಿದರುಗಳಿಗೆ ಪ್ರಾಶಸ್ತ್ಯ ನೀಡಬೇಕು. ಕಲಾವಿದರ ಆಯ್ಕೆಗೆ ಸಮಿತಿ ರಚಿಸಿ ಸಮಿತಿಯಿಂದ ಆಯ್ಕೆಯಾದಂತಹ ಕಲಾವಿದರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ನಿಮಿತ್ತ ಸೆಪ್ಟೆಂಬರ್ 15 ರಂದು ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ಆಯೋಜಿಸಿದ್ದು, ಬೀದರದಿಂದ ಚಾಮರಾಜನಗರದವರೆಗೆ ಒಂದು ಗಂಟೆಯಲ್ಲಿಯೇ ಮಾನವ ಸರಪಳಿ ನಿರ್ಮಿಸಿ, ಸಂವಿಧಾನದ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್, ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ, ಬೆಳಗಾವಿ ಉತ್ತರ ವಿಧಾನಸಭಾ ಶಾಸಕ ಆಸೀಫ್ (ರಾಜು) ಸೇಠ, ನಗರ ಪೊಲೀಸ್‌ ಆಯುಕ್ತರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...