ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಲೇಖನಗಳ ಸಂಕಲನವಾಗಿ ರಚಿಸಲಾದ ‘ವಕ್ಫ್: ಅಪಪ್ರಚಾರ ಮತ್ತು ವಾಸ್ತವ’ ಪುಸ್ತಕವನ್ನು ಇಂದು ಬಿಡುಗಡೆಗೊಳಿಸಲಾಯಿತು.
ಈ ಪುಸ್ತಕವನ್ನು ವಸತಿ, ಅಲ್ಪಸಂಖ್ಯಾತರ ಹಾಗೂ ವಕ್ಫ್ ಸಚಿವರಾದ ಜಮೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್ ಮತ್ತು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಆಸಿಫ್ ಸೇಠ್ ಅವರು ಬಿಡುಗಡೆಗೊಳಿಸಿದರು.
ವಕ್ಫ್ ವಿಷಯಕ್ಕೆ ಸಂಬಂಧಿಸಿ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ತಪ್ಪು ಕಲ್ಪನೆಗಳನ್ನು ದೂರಗೊಳಿಸುವ ಉದ್ದೇಶದಿಂದ ಈ ಪುಸ್ತಕವನ್ನು ರಚಿಸಲಾಗಿದೆ. ಇಂತಹ ಜಾಗೃತಿಪೂರ್ಣ ಹಾಗೂ ಸಂಶೋಧನಾತ್ಮಕ ಪ್ರಯತ್ನಗಳು ಅತ್ಯಂತ ಸ್ವಾಗತಾರ್ಹವಾಗಿದ್ದು, ಸಮಾಜದಲ್ಲಿ ಸರಿಯಾದ ಅರಿವು ಮೂಡಿಸಲು ಸಹಕಾರಿಯಾಗುತ್ತವೆ ಎಂದು ಸಚಿವ ಜಮೀರ್ ಅಹ್ಮದ್ ಅಭಿಪ್ರಾಯಪಟ್ಟರು.
ಸೋಲಿಡಾರಿಟಿ ಯೂತ್ ಮೂವ್ಮೆಂಟ್ನಂತಹ ಸಂಘಟನೆಗಳು ಈ ರೀತಿಯ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳುವುದರಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಸ್ಥಾಪನೆಗೊಳ್ಳಲು ಸಹಕಾರಿಯಾಗುತ್ತದೆ ಎಂದು ನಸೀರ್ ಅಹ್ಮದ್ ತಿಳಿಸಿದರು.
ಇದನ್ನು ಓದಿದ್ದೀರಾ? ʼಈ ದಿನ ಸರಣಿʼ ಭಾಗ-1 | ಮಂಡ್ಯದ ಕಾಳಿಕಾಂಬ ಕೊಳಗೇರಿಯ ಕೋರ್ಟ್ ತೀರ್ಪು ಮೀರಿದ ಬಲಾಢ್ಯರು: ನ್ಯಾ. ಎಂ. ನಾಗಪ್ರಸನ್ನ ಕಳವಳ
ಈ ವೇಳೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್ ಅವರು ಉಪಸ್ಥಿತರಿದ್ದರು.





