ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್​ನಲ್ಲೇ ಸಾರಿಗೆ ನೌಕರ ಆತ್ಮಹತ್ಯೆ

Date:

ಕೆಎಸ್‌ಆರ್‌ಟಿಸಿಯಲ್ಲ ಮೆಕ್ಯಾನಿಕ್‌ ನೌಕರನಾಗಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ಸಾರಿಗೆ ಬಸ್‌ನಲ್ಲಿಯೇ ನೇಟು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಎನ್‌ಡಬ್ಲ್ಯೂಆರ್‌ಟಿಸಿ ಡಿಪೋ-1ರಲ್ಲಿ ನಡೆದಿದೆ.

ಮೃತನನ್ನು ಬಸ್​​ ಮೆಕ್ಯಾನಿಕ್ ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಅವರು ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದಾರೆ. ಮೇಲಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೇಶವ ಅವರು ಕೆಲ ದಿನಗಳಿಂದ ಬೆನ್ನು ನೋವಿಗೆ ತುತ್ತಾಗಿದ್ದರು. ಕೆಲವು ದಿನಗಳವರೆಗೆ ತಮ್ಮ ಕೆಲಸವನ್ನು ಬದಲಿಸದಂತೆ ಡಿಪೋ ಮ್ಯಾನೇಜರ್​​ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್​​​ ಬಾಂದೇಕರ್​ ಅವರಿಗೆ ಮನವಿ ಮಾಡಿದ್ದರು. ಆದರೂ, ಅವರನ್ನು ಅಧಿಕಾರಿಗಳು ಪಂಚರ್ ಹಾಕುವ ವಿಭಾಗಕ್ಕೆ ಬದಲಾಯಿಸಿ, ನಿಯೋಜಿಸಿದ್ದರು. ಇದರಿಂದ ನೊಂದ ಕೇಶವ ಅವರು ಕೆಲಸದ ಸ್ಥಳದಲ್ಲಿಯೇ ಬಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತನ ಕುಟುಂಬಸ್ಥರು ಕೇಶವ ಅವರ ಮೃತದೇಹವನ್ನು ಡಿಪೋ-1ರ ಎದುರು ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಮೃತ ಕೇಶವ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಮೃತದೇಹವನ್ನು ಕೊಂಡೊಯ್ಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...