ಬೆಳಗಾವಿ | ಮಹಿಳೆಯ ವಿವಸ್ತ್ರ-ಹಲ್ಲೆ ಪ್ರಕರಣ: ಮಾಹಿತಿ ನೀಡಿದ್ದವರನ್ನು ಸನ್ಮಾನಿಸಿದ ಪೊಲೀಸರು

Date:

ದೇಶಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಮಹಿಳೆಯ ಬೆತ್ತಲೆ ಪ್ರಕರಣ ನಡೆಯುತ್ತಿದ್ದ ವೇಳೆ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ.

ಇಂದು(ಡಿ.30) ಬೆಳಗ್ಗೆ ನಗರದ ಪೊಲೀಸ್ ಮೈದಾನದಲ್ಲಿ ಪೊಲೀಸರ ಪರೇಡ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಘಟನೆಯ ತಡೆಯಲು ಯತ್ನಿಸಿದ್ದ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶೀಲ್ದಾರ, ವಸೀಮ್ ಮಕಾನದಾರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳ್ಳಿಕಾರ ಅವರಿಗೆ ಸನ್ಮಾನಿಸಲಾಯಿತು.

ಸನ್ಮಾನದ ವೇಳೆ ನ್ಯಾಯಾಲಯವು ನೀಡಿದ್ದ ಪ್ರಶಂಸನೀಯ ಪತ್ರವನ್ನು ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರು ಜಹಾಂಗೀರ್ ಎಂಬುವವರಿಗೆ ನೀಡಿ ಗೌರವಿಸಿದರು. ಮೂವರಿಗೆ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನವನ್ನು ಕೂಡ ವಿತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿ, ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದ ಕಾಕತಿ ಠಾಣೆಯ ಪಿಎಸ್ಐ ಮಂಜುನಾಥ್ ಹುಲಕುಂದ ಸೇರಿ ಆರು ಜನ ಸಿಬ್ಬಂದಿಗೆ ಇದೇ ವೇಳೆ ಸನ್ಮಾನಿಸಲಾಯಿತು.

ಪೊಲೀಸ್ 12

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ, “ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಘಟನೆ ತಡೆದವರಿಗೆ ಸನ್ಮಾನ ಮಾಡಿದ್ದೇವೆ. ವಂಟಮೂರಿ ಗ್ರಾಮದ ಮೂವರು ಸಾರ್ವಜನಿಕರಿಗೆ ಸನ್ಮಾನ ಮಾಡಿದ್ದೇವೆ. ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರ ಕೂಡ ನೀಡಿ ಗೌರವಿಸಿದ್ದೇವೆ. ಕಾಕತಿ ಠಾಣೆ ಪಿಎಸ್ಐ ಸೇರಿ ಆರು ಜನರಿಗೆ ಸನ್ಮಾನ ಮಾಡಿದ್ದೇವೆ. ಪಿಎಸ್ಐಗೆ ಐದು ಸಾವಿರ ನಗದು, ಉಳಿದು ಐದು ಜನ ಸಿಬ್ಬಂದಿಗೆ ನಾಲ್ಕು ಸಾವಿರ ಬಹುಮಾನ ನೀಡಿದ್ದೇವೆ” ಎಂದು  ಹೇಳಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

“ಮಾಹಿತಿ ನೀಡಿದ್ದ ಮೂರು ಜನ ಸಾರ್ವಜನಿಕರಿಗೆ ಏನೂ ಆಗದಂತೆ ರಕ್ಷಣೆ ನೀಡುತ್ತೇವೆ‌. ಅಪರಾಧ ಘಟನೆ ನಡೆದಾಗ ಭಯ ಪಡದೇ ಪೊಲೀಸರಿಗೆ ಮಾಹಿತಿ ನೀಡಿ” ಎಂದು ಕಮಿಷನರ್ ಇದೇ ವೇಳೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಏನಿದು ಪ್ರಕರಣ?

ಕಳೆದ ಡಿಸೆಂಬರ್ 11ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಪ್ರಿಯತಮೆ ಜೊತೆ ಪ್ರಿಯತಮ ಓಡಿ ಹೋಗಿದ್ದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯ ವರ್ತನೆ ತೋರಿದ್ದರು. ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿತ್ತು. ಬಳಿಕ ಘಟನೆಗೆ ಸಂಬಂಧಪಟ್ಟಂತೆ 7 ಜನರನ್ನು ಪೊಲೀಸರು ಬಂಧಿಸಿದ್ದರು.

ಈವರೆಗೆ ಒಟ್ಟು ನಾಲ್ವರು ಮಹಿಳೆ, ಓರ್ವ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ದೇಶಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣವನ್ನು ಸದ್ಯ ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದ್ದು, ತನಿಖೆ ನಡೆಸಲಾಗುತ್ತಿದೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗಲೇ ಈ ಘಟನೆ ನಡೆದಿದ್ದರಿಂದ, ರಾಜ್ಯವೇ ತಲೆತಗ್ಗಿಸುವಂತಾಗಿತ್ತು. ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...