ಬೆಳಗಾವಿ : ಗೈರಾಣ ಜಾಗದಲ್ಲಿ ಸೋಲಾರ್ ಘಟಕ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

Date:


ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಿಟದಾಳ ಗ್ರಾಮದ ಗೈರಾಣ ಜಮೀನಿನಲ್ಲಿ ಪಿಎಂ ಕುಸುಮ್ ಯೋಜನೆ ಅಡಿ ಸೋಲಾರ್ ವಿದ್ಯುತ್ ಘಟಕ ನಿರ್ಮಾಣಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬುಧವಾರ ಅವರು ಜಾಗದಲ್ಲಿ ಪ್ರತಿಭಟನೆ ನಡೆಸಿ, ಜಾನುವಾರುಗಳ ಮೇಯಲು ಹಕ್ಕಿಗೆ ಧಕ್ಕೆಯಾಗಬಾರದು ಎಂಬುದಾಗಿ ಆಗ್ರಹಿಸಿದರು.

ಮುನವಳ್ಳಿ ಹೋಬಳಿಗೆ ಸೇರಿರುವ ಕಿಟದಾಳ ಗ್ರಾಮದ ಸುತ್ತಮುತ್ತ ಬಯಲು ಗೈರಾಣ ಪ್ರದೇಶವಿದ್ದು, ಹೆಚ್ಚಿನವರು ಕೃಷಿ ಅವಲಂಬಿತರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳನ್ನು ಮೇಯಿಸುವ ಸ್ಥಳವಾಗಿ ಇದನ್ನು ಬಳಸಲಾಗುತ್ತಿತ್ತು ಎಂದು ಗ್ರಾಮಸ್ಥರು ಹೇಳಿದರು.

“ಇಲ್ಲಿ ಗುಡ್ಡಗಾಡು ಇಲ್ಲ. ಕೃಷಿ ಕುಟುಂಬಗಳ ಜಾನುವಾರುಗಳಿಗೆ ಈ ಗೈರಾಣ ಪ್ರದೇಶವೇ ಮುಖ್ಯಆಧಾರ. ಇದರಲ್ಲಿ ಸೋಲಾರ್ ಘಟಕ ನಿರ್ಮಾಣವಾದರೆ, ಹಸು-ಕೋಣಗಳು ಮೇಯಲು ಜಾಗವಿಲ್ಲದೇ ಹೋಗುತ್ತದೆ,” ಎಂದು ಗ್ರಾಮ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ 47 ಎಕರೆ ಗೈರಾಣ ಜಾಗದಲ್ಲಿ ಈಗಾಗಲೇ:

ರಾಣಿ ಚನ್ನಮ್ಮ ವಸತಿ ಶಾಲೆಗೆ – 9 ಎಕರೆ

110 ಕೆ.ವಿ ವಿದ್ಯುತ್ ಪ್ರಸರಣ ಘಟಕಕ್ಕೆ – 3 ಎಕರೆ

ಕನ್ನಡ ಪ್ರಾಥಮಿಕ ಶಾಲೆಗೆ – 5 ಎಕರೆ

ಸ್ಮಶಾನಕ್ಕೆ – 1 ಎಕರೆ
ಮೀಸಲಾಗಿದ್ದು, ಉಳಿದ ಜಾಗವನ್ನು ಜಾನುವಾರುಗಳ ಮೇಯಲು ಗೈರಾಣವನ್ನಾಗಿ ಉಳಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ಪ್ರತಿಭಟನೆಯ ವೇಳೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಪರಿಶೀಲನೆ ನಡೆಸಿ, ಗ್ರಾಮಸ್ಥರ ಮನವಿಯನ್ನು ಕೇಳಿದರು. ಅದನ್ನು ಉದ್ದಿಷ್ಟ ಇಲಾಖೆಗಳಿಗೆ ವರದಿ ಮಾಡುವುದಾಗಿ ಭರವಸೆ ನೀಡಿದರು.

ಗ್ರಾಮಸ್ಥರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ, “ಪರಿಸರ ಸಮತೋಲನ ಮತ್ತು ಗ್ರಾಮೀಣ ಜೀವನವೈವಿಧ್ಯಕ್ಕೆ ಹಾನಿ ಆಗುವ ಯಾವುದೇ ಯೋಜನೆ ಅನುಷ್ಠಾನಗೊಳ್ಳುವುದನ್ನು ಸಹಿಸಲಾರೆವು” ಎಂದು ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...