ಬೆಳಗಾವಿ | ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆ

Date:

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಠಾಣೆಯ ಪೋಲಿಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತ ಆರೋಪಿಗಳಾಗಿದ್ದು, ಉಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ, ನಂದಿನಿ ಡೋರಲೇಕರಿಗಾಗಿ ಪೋಲಿಸರು ಹುಡುಕಾಟ ನಡೆಸಿದ್ದಾರೆ.

ಮಕ್ಕಳ ಮಾರಾಟ ಗ್ಯಾಂಗ್ ​ವಿದವೆ ಮಹಿಳೆಯರನ್ನು ಟಾರ್ಗೆಟ್​ ಮಾಡುತ್ತದೆ. ಮಗು ಇದ್ದು ಗಂಡನಿಲ್ಲದ ಮಹಿಳೆಯರಿಗೆ ಎರಡನೇ ಮದುವೆ ಮಾಡಿಸುತ್ತಾರೆ. ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದ ಅರ್ಚನಾ ಎಂಬುವರನ್ನು ರಾಜು ಮಗ್ದುಮ‌ ಎನ್ನುವವರ ಜೊತೆ ಎರಡನೇ ಮದುವೆ ಮಾಡಿಸಿತ್ತು. ಅರ್ಚನಾ ಅವರ ಮೊದಲ ದಾಂಪತ್ಯದ ಸಾಕ್ಷಿಯಾಗಿ ಗಂಡು ಮಗು ಜನಿಸಿತ್ತು. ಈ ಗಂಡು ಮಗು ಅರ್ಚನಾ ಅವರ ಬಳಿ ಇದೆ. ಆದರೆ, ಈ ಮಗು ಅನಾರೋಗ್ಯದಿಂದ ಬಳಲುತ್ತಿತ್ತು ಮಗುವಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಆರೋಪಿಗಳಾದ ತಾವಡೆ ದಂಪತಿ ಮಗುವನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ್​ಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ, ಸಂಗೀತಾ ಗೌಳಿ ಮನೆಯಲ್ಲಿ ನಂದಕುಮಾರ ಡೋರಲೇಕರ ದಂಪತಿಗೆ 3 ಲಕ್ಷ ರೂ.ಗೆ ಮಗು ಮಾರಾಟ ಮಾಡಿದ್ದರು. ಮಗು ಮಾರಾಟದಿಂದ ಬಂದ ಹಣವನ್ನು ಮೂವರು ಆರೋಪಿಗಳು ಹಂಚಿಕೊಂಡಿದ್ದರು. ಈ ಸಂಬಂಧ ಹುಕ್ಕೇರಿ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ವಾರದ ಹಿಂದೆ ಇದೇ ಊರಲ್ಲಿ ಸಂಗೀತಾ ಎಂಬುವರ ಮಗು ಮಾರಾಟವಾಗಿತ್ತು. ಸಂಗೀತಾ ಅವರಿಗೂ ಕೂಡ ಎರಡನೇ ಮದುವೆ ಮಾಡಿಸಿ, ಅವರ ಮೊದಲ ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಹುಕ್ಕೇರಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...