ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ; ಸಚಿವರು ಸೇರಿ ಹಲವರ ಹೆಸರು ಉಲ್ಲೇಖ

Date:

ಬೆಳಗಾವಿ ಜಿಲ್ಲೆಯ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ. ಈ ಹಿಂದೆಯೂ ಅನಾಮಧೇಯ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ, ಸೆಪ್ಟೆಂಬರ್ 20ರಂದು ಮತ್ತೊಂದು ಬೆದರಿಕೆ ಪತ್ರ ಬಂದಿದೆ. ಪತ್ರದಲ್ಲಿ ಸ್ವಾಮೀಜಿ ಮಾತ್ರವಲ್ಲದೆ, ಮೂವರು ಸಚಿವರ ಹೆಸರುಗಳು ಸೇರಿದಂತೆ ಹಲವರ ಹೆಸರನ್ನೂ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪತ್ರದಲ್ಲಿ, “ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ” ಎಂದು ಬರೆಯಲಾಗಿದೆ. ಜೊತೆಗೆ, ಸಚಿವ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಲಾಗಿದೆ.

“ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ ಅಥವಾ ಸಾವಿನ ಪತ್ರವಂತಾದರೂ ತಿಳಿ. ನಾನು ನಿನ್ನ ಜತೆ ತಮಾಷೆ‌ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ” ಎಂದು ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ. ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ‌ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯಾ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲ. ನಿನ್ನಂಥ ದುಷ್ಟ ರಾಕ್ಷಸಿ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ” ಎಂದು ಬೆದರಿಕೆ ಹಾಕಲಾಗಿದೆ.

ಹಿರಿಯ ಸಾಹಿತಿಗಳಾದ ಎಸ್.ಜಿ ಸಿದ್ದರಾಮಯ್ಯ, ಕೆ.ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಬಂಜಗೆರೆ ಜಯಪ್ರಕಾಶ್, ಪ್ರೊ.ಭಗವಾನ್, ಪ್ರೊ.ಮಹೇಶ್ ಚಂದ್ರ, ಬಿ.ಟಿ ಲಲಿತಾನಾಯಕ್, ನಟ ಚೇತನ್, ನಟ ಪ್ರಕಾಶರಾಜ್, ಭಾಸ್ಕರ್ ಪ್ರಸಾದ್, ಸಚಿವ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಸಿ. ಎಸ್ ದ್ವಾರಕಾನಾಥ್, ದೇವನೂರ ಮಹಾದೇವ, ಬಿ.ಎಲ್ ವೇಣು ಸೇರಿದಂತೆ ಹಲವರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿಲಾಗಿದ್ದು, “ನೀವು ನಿಮ್ಮ ತಂದೆ ತಾಯಿಗಳಿಗೆ ಹುಟ್ಟಿದ್ದರೆ ಕೇಳುವ ಪ್ರಶ್ನೆಗೆ ಉತ್ತರ ಕೊಡಿ” ಎಂದು ಪತ್ರದಲ್ಲಿ ಸವಾಲು ಹಾಕಲಾಗಿದೆ.

“ಮತಾಂಧ ಮುಸ್ಲಿಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಮಾಡ್ತಿರೋದು ತಪ್ಪು ಎಂದು ಹೇಳುವ ತಾಕತ್ತು ನಿಮ್ಮಲ್ಲಿದೆಯೇ? ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡ್ತಿರೋದು ತಪ್ಪು ‌ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ? ದೈರ್ಯವಿದ್ದರೆ ಹೇಳಿ ಇಲ್ಲವಾದರೆ ನಿಮ್ಮ ಕೊನೆಯ ‌ದಿನಗಳನ್ನು ಎಣಿಸಿ” ಎಂದು ಬೆದರಿಕೆ ಹಾಕಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...