ಬೆಳಗಾವಿ | ಪ್ರಾಮಾಣಿಕತೆ ಮೆರೆದ ಅಥಣಿ ‘108 ಆ್ಯಂಬುಲೆನ್ಸ್‌’ ಸಿಬ್ಬಂದಿ

Date:

ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಹಣವನ್ನು ಅವರ ಕುಟುಂಬಕ್ಕೆ ಮರಳಿಸಿ ಅಥಣಿಯ ‘108 ಆ್ಯಂಬುಲೆನ್ಸ್‌’ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಗ್ರಾಮಸ್ಥರು ಮತ್ತು ಆಸ್ಪತ್ರೆ ಸಿಬ್ಬಂದಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಡಿಸೆಂಬರ್ 27ರಂದು ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ, ಅವರ ಕುಟುಂಬಸ್ಥರು ಯಾರೂ ಇಲ್ಲದ ಕಾರಣ, ಅವರ ಜೇಬಿನಲ್ಲಿದ್ದ 30,500 ರೂ. ಹಣವನ್ನು ಆ್ಯಂಬುಲೆನ್ಸ್‌ ಸಿಬ್ಬಂದಿ ನಿರ್ಮಲಾ ಬನಸೋಡೆ ಮತ್ತು ಚಾಲಕ ವಿಜಯಕುಮಾರ್ ಎತ್ತಿಟ್ಟಿದ್ದರು. ಅವರ ಕಟುಂಬಸ್ಥರು ಬಂದ ಬಳಿಕ ಹಣವನ್ನು ಅವರಿಗೆ ಮರಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಅನಾರೋಗ್ಯಕ್ಕೀಡಾಗಿದ್ದ ವೃದ್ಧ ಮಹಿಳೆ ಪಾರ್ವತೆವ್ವ ಪವಾರ ಎಂಬವರನ್ನು ಆ್ಯಂಬುಲೆನ್ಸ್‌ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಆಕೆ ಮೃತಪಟ್ಟಿದ್ದರು. ಆಕೆಯ ಬಳಿಯಿದ್ದ ಬಂಗಾರದ ಒಡವೆಗಳನ್ನು ಎತ್ತಿಟ್ಟಿದ್ದ ಇದೇ ಸಿಬ್ಬಂದಿಗಳು, ಒಡವೆಗಳನ್ನು ಆಕೆಯ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಪ್ರತ್ಯೆಕ ಪ್ರಕರಣಗಳಲ್ಲಿ ಹಣ ಮತ್ತು ಆಭರಣಗಳನ್ನು ಮರಳಿ ಕುಟುಂಬಕ್ಕೆ ಹಣ ನೀಡಿ ಆ್ಯಂಬುಲೆನ್ಸ್‌ ಸಿಬ್ಬಂದಿಗಳಾದ ನಿರ್ಮಲಾ ಬನಸೋಡೆ ಹಾಗೂ ಡ್ರೈವರ ವಿಜಯ ಕುಮಾರ್ ಅವರ ಪ್ರಾಮಾಣಿಕತೆಗೆ ಆಸ್ಪತ್ರೆಯ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...