ಬೆಳಗಾವಿ : ಬಸವರಾಜ ಕಟ್ಟಿಮನಿಯವರು ಮಲಾಮರಡಿ ಕ್ರಾಂತಿಯ ಕಿಡಿ : ಡಾ. ಯಲ್ಲಪ್ಪ ಹಿಮ್ಮಡಿ

Date:

ಒಂದು ಹಳ್ಳಿ ಅಥವಾ ಪಟ್ಟಣವು ತನ್ನ ಸಾಂಸ್ಕೃತಿಕ ಸಾಧನೆಯಿಂದ ಸುತ್ತಲಿನ ನಾಡಿಗೆ, ದೇಶಕ್ಕೆ ಪ್ರಖ್ಯಾತಿಯಾಗಿರುತ್ತದೆ. ಹಾಗೆಯೇ ಪ್ರಗತಿಶೀಲ ಚಳುವಳಿಯ ನಾಯಕರಾದ ಬಸವರಾಜ ಕಟ್ಟೀಮನಿಯವರು ತಮ್ಮ ಪರಿಶುದ್ಧ ಬದುಕು ಮತ್ತು ಕ್ರಾಂತಿಕಾರಿ ಬರಹಗಳಿಂದ ಪ್ರಸಿದ್ಧರಾದರಲ್ಲದೇ, ತಮ್ಮ ಹುಟ್ಟೂರಾದ ಮಲಾಮರಡಿಯಲ್ಲಿ ನೆಲೆ ನಿಂತು “ಹಳ್ಳಿ ಕೂಡ ಕ್ರಾಂತಿಯ ಕಿಡಿಯಾಗಬಹುದು” ಎಂಬುದನ್ನು ದೇಶಕ್ಕೆ ತೋರಿಸಿದ್ದಾರೆ ಎಂದು ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಯಲ್ಲಪ್ಪ ಹಿಮ್ಮಡಿ ಹೇಳಿದರು.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಲಾಮರಡಿಯಲ್ಲಿ ಗುರುವಾರ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದಿಂದ ಹಮ್ಮಿಕೊಳ್ಳಲಾದ ಬಸವರಾಜ ಕಟ್ಟೀಮನಿ ಪುಣ್ಯಸ್ಮರಣೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಾಲ್ಯದಿಂದಲೇ ಹೋರಾಟದ ಗುಣಗಳನ್ನು ಬೆಳೆಸಿಕೊಂಡ ಕಟ್ಟೀಮನಿಯವರಿಗೆ ಪ್ರಗತಿಶೀಲ ಸಾಹಿತ್ಯ ಚಳುವಳಿ ಬರವಣಿಗೆಯ ಶಕ್ತಿ ನೀಡಿತು. ತಮ್ಮ ತವರಿನಲ್ಲೇ ನೆಲೆಸಿಕೊಂಡು ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಅಸಮಾನತೆಗಳ ವಿರುದ್ಧ ಹೋರಾಡುತ್ತಲೇ ಅವರು 42 ಕಾದಂಬರಿ, 10 ಕಥಾ ಸಂಕಲನ ಸೇರಿ 66ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯಕ್ಕೆ ಸತ್ವ ಮತ್ತು ಶಕ್ತಿ ತುಂಬಿದರು,” ಎಂದು ಡಾ. ಹಿಮ್ಮಡಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಅಂಕಲಗಿ ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಎನ್. ಮಾವಿನಕಟ್ಟಿ ಹೇಳಿದರು, “ಬಡತನವನ್ನೇ ಸಾಧನವಾಗಿಸಿಕೊಂಡ ಕಟ್ಟೀಮನಿಯವರು ಸ್ವಾಭಿಮಾನದಿಂದ ಬದುಕಿ ಬರಹ ಬರೆದವರು. ಅವರ ಸಾಹಿತ್ಯವನ್ನು ಯುವ ಸಮುದಾಯದ ಕಡೆಗೆ ಕೊಂಡೊಯ್ಯುವ ಪ್ರತಿಷ್ಠಾನದ ಪ್ರಯತ್ನ ಶ್ಲಾಘನೀಯ,” ಎಂದರು.

ಸ್ಥಳೀಯ ಮುಖಂಡ ಈರಪ್ಪ ಮಾಳಗಿ ಅವರು, “ಮಲಾಮರಡಿಯ ರುದ್ರಭೂಮಿಯ ಸಮೀಪ ಕಟ್ಟೀಮನಿಯವರ ಸ್ಮಾರಕ ಹಾಗೂ ಊರಿನ ದ್ವಾರದಲ್ಲಿ ಅವರ ಹೆಸರಿನ ಕಮಾನು ನಿರ್ಮಿಸಲು ಪ್ರತಿಷ್ಠಾನ ಮುಂದಾಗಬೇಕು,” ಎಂದು ಸಲಹೆ ನೀಡಿದರು.

ಆರಂಭದಲ್ಲಿ ಸಮುದಾಯ ಭವನದಲ್ಲಿರುವ ಬಸವರಾಜ ಕಟ್ಟೀಮನಿಯವರ ಪ್ರತಿಮೆಗೆ ಧಾರವಾಡದ ಪ್ರೊ. ಬಿ.ಸಿ. ಬಿರಾದಾರ್ ಹಾಗೂ ಪ್ರತಿಷ್ಠಾನದ ಸದಸ್ಯ ಎಸ್‌.ಜಿ. ಚಿಕ್ಕನರಗುಂದ ಮಾಲಾರ್ಪಣೆ ಮಾಡಿದರು. ಕಟ್ಟೀಮನಿಯವರ ಪುತ್ರಿಯರಾದ ಶ್ರೀಮತಿ ಮಂಜುಳಾ ಬಿರಾದಾರ್ ಮತ್ತು ಶ್ರೀಮತಿ ನೀಲಾ ಮಾಳಗಿ ದೀಪ ಬೆಳಗಿದರು.

ಕಾರ್ಯಕ್ರಮದಲ್ಲಿ ಡಾ. ಕೆ.ಆರ್. ಸಿದ್ದಗಂಗಮ್ಮ, ಶ್ರೀಮತಿ ಹಮೀದಾ ಬೇಗಂ ದೇಸಾಯಿ, ಪ್ರೊ. ಪ್ರಕಾಶ್ ಕುರಪಿ, ಬಸವರಾಜ ಮಾಳಗಿ, ಗಂಗಪ್ಪ ಮಾಳಗಿ, ನಾಗರಾಜ ಮಾಳಗಿ, ಅಪ್ಪಣ್ಣ ಕುಸ್ತಿ, ಬಸವರಾಜ ನಾವಲಗಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಕವಿ ಸುರೇಶ್ ಮುದ್ದಾರ ಸ್ವಾಗತಿಸಿದರು. ಪ್ರತಿಷ್ಠಾನದ ಸದಸ್ಯ ವಿಠ್ಠಲ ದಳವಾಯಿ ವಂದಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...