ಬೆಳಗಾವಿ | ರೈಲಿನಲ್ಲಿ 8 ಮಂದಿ ಪ್ರಯಾಣಿಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

Date:

ಬೆಳಗಾವಿಯ ಮೂಲಕ ಹಾದುಹೋಗುತ್ತಿದ್ದ ವಾಸ್ಕೋ-ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲಿನ ಸಾಮಾನ್ಯ(ಜನರಲ್) ಬೋಗಿಯಲ್ಲಿ ಎಂಟು ಪ್ರಯಾಣಿಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ಎಂಟು ಮಂದಿ ಪ್ರಯಾಣಿಕರು ಗೋವಾದಿಂದ ದೆಹಲಿ ಬಳಿಯ ತಮ್ಮ ಊರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಅವರನ್ನು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಅವರನ್ನು ಕೆಎಲ್ಇಎಸ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಆಸ್ಪತ್ರೆಯ ಸಿಬ್ಬಂದಿ ತಿಳಿಸಿರುವ ಪ್ರಕಾರ ಎಂಟು ಮಂದಿ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅವರಲ್ಲಿ ಆರು ಮಂದಿ ಇನ್ನೂ ಅರೆಪ್ರಜ್ಞಾವಸ್ಥೆಯಲ್ಲಿದ್ದಾರೆ. ಕಳ್ಳತನಕ್ಕಾಗಿ ಅಪರಿಚಿತರು ಅವರಿಗೆ ವಿಷ ಬೆರೆಸಿದ ಆಹಾರವನ್ನು ನೀಡಿರುವ ಸಾಧ್ಯತೆಯಿದೆ. ಆದರೂ ಅವರ ಬೆಲೆಬಾಳುವ ವಸ್ತುಗಳು ಸುರಕ್ಷಿತವಾಗಿವೆ” ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರೆಲ್ಲರೂ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಕೂಲಿ ಕಾರ್ಮಿಕರಾಗಿದ್ದು, ಗೋವಾದಲ್ಲಿ ಕೂಲಿ ಮಾಡಿ, ಬಳಿಕ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದು, ಗೋವಾದ ವಾಸ್ಕೋದಿಂದ ರೈಲಿನಲ್ಲಿ ಹೊರಟಿದ್ದಾರೆ. ರೈಲಿನಲ್ಲಿ ಅಪರಿಚಿತ ಸಹ ಪ್ರಯಾಣಿಕರು ಅವರಿಗೆ ವಿಷಹಾರ ಚಾಕೊಲೇಟ್ ಮತ್ತು ತಿಂಡಿಗಳನ್ನು ತಿನ್ನಲು ನೀಡಿದ್ದರೆಂದು ತಿಳಿದುಬಂದಿದೆ.

“ತಿಂಡಿ ಸೇವಿಸಿದ ಬಳಿಕ ಅವರೆಲ್ಲರೂ ಮಲಗಿದ್ದು, ಸಹ ಪ್ರಯಾಣಿಕರು ಅವರನ್ನು ಪದೇ ಪದೆ ಎಬ್ಬಿಸಲು ಪ್ರಯತ್ನಿಸಿದರೂ ಎಚ್ಚರಗೊಳ್ಳಲಿಲ್ಲ. ಏನೋ ತಪ್ಪಾಗಿದೆ ಎಂದು ಶಂಕಿಸಿದ ಸಹ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ರಾತ್ರಿ 8.30ಕ್ಕೆ ಬೆಳಗಾವಿ ನಿಲ್ದಾಣವನ್ನು ತಲುಪಿದಾಗ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕರನ್ನು ಆಂಬುಲೆನ್ಸ್ ಮೂಲಕ ಬಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದು, ಅವರ ಸ್ಥಿತಿ ಗಂಭೀರವಾಗಿರಬಹುದು ಎಂದು ತಿಳಿದು ಎಂಟು ಮಂದಿಯನ್ನೂ ಕೆಎಲ್ಇಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು” ಎಂದು ರೈಲ್ವೆ ಪೊಲೀಸ್ ಇನ್ಸ್‌ಪೆಕ್ಟರ್‌ ವೆಂಕಟೇಶ್ ತಿಳಿಸಿದ್ದಾರೆ.

“ಬೋಗಿಯು ಪ್ರಯಾಣಿಕರಿಂದ ತುಂಬಿತ್ತು. ಎಂಟು ಜನರೊಂದಿಗೆ ಒಂದೇ ಬೋಗಿಯಲ್ಲಿ ಪ್ರಯಾಣಿಸಿದ ಸಹ ಪ್ರಯಾಣಿಕರಲ್ಲಿ ಅವರಿಗೆ ಚಾಕೊಲೇಟ್ ಮತ್ತು ತಿಂಡಿಗಳನ್ನು ಯಾರು ನೀಡಿದರು ಎಂಬುದನ್ನು ಗಮನಿಸಲಾಗಲಿಲ್ಲ. ನಾವು ವಾಸ್ಕೋದಲ್ಲಿನ ನಮ್ಮ ಸಹವರ್ತಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ಅಲ್ಲಿ ಸ್ಥಾಪಿಸಲಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೋರುತ್ತಿದೆ ಸರ್ಕಾರಿ ಶಾಲಾ ಮಾಳಿಗೆ; ಆತಂಕದಲ್ಲಿ ಮಕ್ಕಳು

“ಸಂತ್ರಸ್ತರು ಚೇತರಿಸಿಕೊಂಡ ನಂತರ ಘಟನೆಯ ವಿವರಗಳನ್ನು ಸಂಗ್ರಹಿಸಲಾಗುವುದು. ಅವರಿಂದ ಮಾಹಿತಿ ಪಡೆಯಲು ನಾವು ಪೊಲೀಸರ ಅನುಮತಿಗಾಗಿ ಕಾಯುತ್ತಿದ್ದೇವೆ” ಎಂದು ಅವರು ಹೇಳಿದರು.

“ಎಂಟು ಮಂದಿ ಸಂತ್ರಸ್ತರ ಸ್ಥಿತಿ ಗಂಭೀರವಾಗಿದೆ. ಕಲುಷಿತ ಆಹಾರ ಸೇವನೆಯಿಂದ ಪ್ರಜ್ಞೆ ತಪ್ಪಿದ್ದಿದ್ದರೆ ವಾಂತಿ ಮತ್ತು ಭೇದಿ ಕಾಣಿಸಿಕೊಳ್ಳುತ್ತಿತ್ತು. ಆದರೆ ವಿಷಪೂರಿತ ಆಹಾರ ಸೇವಿಸಿರುವುದರಿಂದ ಅವರು ಬಹಳ ಸಮಯದವರೆಗೆ ಪ್ರಜ್ಞಾಹೀನರಾಗಿದ್ದರು” ಎಂದು ಬಿಮ್ಸ್ ನಿರ್ದೇಶಕ ಡಾ.ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...