ಬೆಳಗಾವಿ | ಬಸವ ಸಂಸ್ಕೃತಿ ಅಭಿಯಾನ’ಕ್ಕೆ ಸೆಪ್ಟೆಂಬರ್ 1ರಿಂದ ರಾಜ್ಯದಾದ್ಯಂತ ಚಾಲನೆ

Date:

ಬೆಳಗಾವಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ನಡೆದ ಪದ್ಮಾವತಿ ಅಂಗಡಿ ಅವರ 64ನೇ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಲಾಗಿದ್ದ ‘ಮಹಿಳಾ ರತ್ನ’ ಹಾಗೂ ‘ಆದರ್ಶ ದಂಪತಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಸಾನ್ನಿಧ್ಯ ವಹಿಸಿ ಮಾತನಾಡಿದ ಗದುಗಿನ ತೋಂಟದಾರ್ಯ ಸಂಸ್ಥಾನಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಕರ್ನಾಟಕದ ಸಾಂಸ್ಕೃತಿಕ ಗುರುಬಲ ಬಸವಣ್ಣನವರ ತತ್ವಾಧಾರಿತ ಜೀವನ ಮೌಲ್ಯಗಳನ್ನು ನಾಡಿನ ಜನತೆಗೆ ಪ್ರಚಾರ ಮಾಡುವ ಉದ್ದೇಶದಿಂದ ಈ ವರ್ಷದ ಸೆಪ್ಟೆಂಬರ್ 1ರಿಂದ ರಾಜ್ಯದಾದ್ಯಂತ ‘ಬಸವ ಸಂಸ್ಕೃತಿ ಅಭಿಯಾನ’ ಹಮ್ಮಿಕೊಳ್ಳಲಾಗಿದೆಎಂದು ತಿಳಿಸಿದರು .

ಸ್ವಾಮೀಜಿ ಆಶೀರ್ವಚನ ನೀಡಿ, “ದಾಂಪತ್ಯ ಜೀವನ ಕೇವಲ ಗಂಡು-ಹೆಣ್ಣು ಒಟ್ಟಿಗೆ ಇರುವ ಸಂಬಂಧವಲ್ಲ. ಪರಸ್ಪರ ಸಹಕಾರ, ಬದ್ಧತೆ ಮತ್ತು ಶ್ರದ್ಧೆಯೊಂದಿಗೆ ಕೂಡಿದ ಜೀವನವಿದು. ಜೀವನದಲ್ಲಿ ಕಷ್ಟಗಳು ಬಂದಾಗ ದಂಪತಿಗಳು ಧೈರ್ಯ ಕಳೆದುಕೊಳ್ಳದೆ, ಸಮಾಲೋಚನೆಯ ಮೂಲಕ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಹಾಗಾದಾಗಲೇ ಸುಖ, ಶಾಂತಿ ಮತ್ತು ನೆಮ್ಮದಿಯಿಂದ ಕೂಡಿದ ಕುಟುಂಬ ಜೀವನ ಸಾಧ್ಯ,” ಎಂದು ಸಲಹೆ ನೀಡಿದರು.

ಬಸವ ಸಂಸ್ಕೃತಿ ಅಭಿಯಾನ ಯಶಸ್ವಿಗೊಳಿಸಲು ಜನಸಾಮಾನ್ಯರು, ಯುವಪೀಳಿಗೆ ಮತ್ತು ಸಮಾಜದ ಎಲ್ಲ ವರ್ಗಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...