ಬೆಳಗಾವಿ : ಗುರ್ಲಾಪೂರ ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ಬೆಂಬಲ : ವಿಜಯೇಂದ್ರ ಭೇಟಿ

Date:

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್‌ನಲ್ಲಿ ನಡೆಯುತ್ತಿರುವ ಕಬ್ಬು ರೈತರ ಧರಣಿ ಪ್ರತಿಭಟನೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬುಧವಾರ ಭೇಟಿ ನೀಡಿ ಬೆಂಬಲ ಘೋಷಿಸಿದರು.

ರೈತರು ಹಲವು ದಿನಗಳಿಂದ ಪ್ರತಿ ಟನ್‌ ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಮಾತನಾಡಿ, “ಗುರ್ಲಾಪೂರದಲ್ಲಿ ರೈತರು ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿರಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಸ್ಪಂದಿಸದಿರುವುದು ವಿಷಾದನೀಯ. ವಿರೋಧ ಪಕ್ಷವಾಗಿ ನಾವು ರೈತರ ಪರ ನಿಲ್ಲುತ್ತೇವೆ. ಪಕ್ಷದ ಎಲ್ಲಾ ಮುಖಂಡರ ಜೊತೆ ಚರ್ಚೆ ಮಾಡಿ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲು ಬಂದಿದ್ದೇನೆ,” ಎಂದು ಹೇಳಿದರು.

ಅವರು ಮುಂದುವರೆದು, “ಅತಿವೃಷ್ಟಿಯಿಂದ ಕಲ್ಯಾಣ ಕರ್ನಾಟಕ ಭಾಗದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಉಸ್ತುವಾರಿ ಸಚಿವರಾಗಲಿ, ಕಂದಾಯ ಸಚಿವರಾಗಲಿ, ಕೃಷಿ ಸಚಿವರಾಗಲಿ ಯಾರೂ ಆ ಭಾಗಕ್ಕೆ ಭೇಟಿ ನೀಡಿಲ್ಲ. ರೈತರು ವರ್ಷಕ್ಕೆ ಸುಮಾರು ಆರು ಮಿಲಿಯನ್ ಟನ್‌ ಕಬ್ಬು ಕಾರ್ಖಾನೆಗಳಿಗೆ ಒದಗಿಸುತ್ತಾರೆ. ಅದರಿಂದ ಸರ್ಕಾರಕ್ಕೆ 50ರಿಂದ 60 ಸಾವಿರ ಕೋಟಿ ಆದಾಯ ಬರುತ್ತದೆ. ಆದರೆ ಇದೇ ರೈತರು ಸಂಕಷ್ಟದಲ್ಲಿರುವಾಗ ಅವರ ಪರಿಸ್ಥಿತಿ ಕೇಳಲು ಸರ್ಕಾರ ಮುಂದೆ ಬರದಿರುವುದು ನಾಚಿಕೆಗೆ ಕಾರಣ,” ಎಂದು ಟೀಕಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...