ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ: ರೈತಪರ ನಿರ್ಣಯಕ್ಕೆ ನಾಯಕರೊಂದಿಗೆ ಚರ್ಚೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟನೆ

Date:

ಡಿಸಿಸಿ (ಜಿಲ್ಲಾ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ) ಬ್ಯಾಂಕ್‌ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಗಂಭೀರ ಚರ್ಚೆ ನಡೆಸುತ್ತಿದ್ದು, ರೈತಪರವಾಗಿ ನಿರ್ಣಯ ಕೈಗೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ನೇರ ಉತ್ತರ ನೀಡದೇ, “ರಾಜ್ಯದಲ್ಲಿ ಅಪೆಕ್ಸ್‌ ಬ್ಯಾಂಕ್ ಬಿಟ್ಟರೆ, ಡಿಸಿಸಿ ಬ್ಯಾಂಕ್ ದೊಡ್ಡದು. ಈ ಕುರಿತು ಸಚಿವ ಸತೀಶ ಜಾರಕಿಹೊಳಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮತ್ತಿತರ ನಾಯಕರೊಂದಿಗೆ ಚರ್ಚಿಸಿ, ಮುಂದಿನ ಹೆಜ್ಜೆ ಇಡಲಾಗುವುದು. ನಮ್ಮ ನಿಲುವು ಸಂಪೂರ್ಣವಾಗಿ ರೈತಪರವಾಗಿರಲಿದೆ,” ಎಂದು ಹೇಳಿದರು.

ಸುರ್ಜೇವಾಲಾ ಸಭೆ ಕುರಿತು ಸ್ಪಷ್ಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವರು ಯಾವುದೇ ಇಲಾಖೆ ಅಧಿಕಾರಿಗಳ ಸಭೆ ನಡೆಸಿಲ್ಲ. ಎಲ್ಲ ಶಾಸಕ ಮತ್ತು ಮಂತ್ರಿಗಳನ್ನು ಕರೆದು ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಚರ್ಚಿಸಿದರು. ಅನುದಾನದ ಬಳಕೆ, ಕಾಮಗಾರಿಗಳ ಉಸ್ತುವಾರಿ ಕುರಿತು ಪ್ರಶ್ನಿಸಿದರು. ಇದು ಮೂರು ತಿಂಗಳಿಗೆ ಒಂದು ಬಾರಿ ನಡೆಯುವ ರೂಟೀನ್ ಕಾರ್ಯವಷ್ಟೇ,” ಎಂದರು.

‘ಕ್ರಾಂತಿ’ ಹೇಳಿಕೆಗೆ ಪ್ರತಿಕ್ರಿಯೆ

ಸಚಿವ ರಾಜಣ್ಣ ನೀಡಿದ್ದ “ಸೆಪ್ಟೆಂಬರ್‌ನಲ್ಲಿ ರಾಜಕೀಯ ಕ್ರಾಂತಿ” ಸಂಭವಿಸುತ್ತದೆ ಎಂಬ ಹೇಳಿಕೆಯನ್ನು ಪ್ರಸ್ತಾಪಿಸಿದಾಗ, ಸಚಿವೆ ಹೇಳಿದರು, “ನಮ್ಮ ಪಕ್ಷವು ಹೈಕಮಾಂಡ್ ಹೇಳಿದಂತೆ ನಡೆಯುತ್ತದೆ. ಈ ಕುರಿತು ಮುಖ್ಯಮಂತ್ರಿ ಸಿಧ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.”

ಮಹದಾಯಿ ಕುರಿತು ಬಿಜೆಪಿ ಮೇಲೆ ವಾಗ್ದಾಳಿ

ಮಹದಾಯಿ ನದೀ ಜಲ ಯೋಜನೆ ಕುರಿತು ಮಾತನಾಡಿದ ಅವರು, “ಈ ಯೋಜನೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆದಿದೆ. ನಾವು ಕುಡಿಯುವ ನೀರಿಗಾಗಿ ಕೇಳುತ್ತಿದ್ದೇವೆ, ನೀರಾವರಿಗಾಗಿ ಅಲ್ಲ. ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಸಿಹಿ ಹಂಚಿತು. ಈಗ ಈ ಬಗ್ಗೆ ಮಾತನಾಡುತ್ತಿಲ್ಲ,” ಎಂದು ಬಿಜೆಪಿಯ ಆಚರಣೆ ಮೇಲೆ ಟೀಕೆ ಮಾಡಿದ ಸಚಿವೆ, “ಈ ಯೋಜನೆಯನ್ನು ಚುನಾವಣೆ ಅಸ್ತ್ರವಾಗಿ ಉಪಯೋಗಿಸಿದರು, ಆದರೆ ಅನುಷ್ಠಾನ ಬಗೆಗೆ ಕತ್ತಲೆಯೇ ಇದೆ” ಎಂದರು.

ಉತ್ತರ ಕರ್ನಾಟಕದ ಚಿತ್ರರಂಗಕ್ಕೆ ಹೊಸ ಆಶಾಕಿರಣ

ಸಿನಿಮಾ ಕ್ಷೇತ್ರದಲ್ಲಿ ಹೊಸ ಪ್ರಯತ್ನವನ್ನೂ ಪ್ರಸ್ತಾಪಿಸಿದ ಅವರು, “ಐರಾ ಪ್ರೊಡಕ್ಷನ್ ವರ್ಕ್ಸ್ ಅಡಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಡಾಲಿ ಧನಂಜಯ್ ನಾಯಕತ್ವದಲ್ಲಿ ಎರಡು ಚಿತ್ರಗಳನ್ನು ನಿರ್ಮಿಸುತ್ತಿದ್ದೇವೆ. ಈ ಸಿನಿಮಾಗಳಿಂದ ಉತ್ತರ ಕರ್ನಾಟಕವಷ್ಟೇ ಅಲ್ಲದೆ, ಇಡೀ ರಾಜ್ಯದ ಕಲಾವಿದರಿಗೆ ಅವಕಾಶ ಲಭ್ಯವಾಗಲಿದೆ,” ಎಂದು ಹೇಳಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...