ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ ಶೆಟ್ಟರ್ ಅವರನ್ನು ಸಂಸತ್ತಿನ ಹಕ್ಕು ಬಾಧ್ಯತೆ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಅವಧಿಗೆ 15 ಸದಸ್ಯರನ್ನು ಒಳಗೊಂಡ ಸಮಿತಿಯನ್ನು ನೇಮಕ ಮಾಡಿದ್ದಾರೆ. ಸಂಸತ್ತಿನ ಸ್ವಾತಂತ್ರ್ಯ, ಅಧಿಕಾರ ಹಾಗೂ ಘನತೆಯನ್ನು ಕಾಪಾಡುವುದು ಮತ್ತು ಸದಸ್ಯರ ಹಕ್ಕುಗಳನ್ನು ರಕ್ಷಿಸುವುದು ಈ ಸಮಿತಿಯ ಪ್ರಮುಖ ಉದ್ದೇಶವಾಗಿದೆ.
ಸಂಸದ ಶೆಟ್ಟರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.





