ಬೆಳಗಾವಿ | ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯೆಂದು ಘೋಷಿಸಲಿ: ಭೀಮನಗೌಡ ಪರಗೊಂಡ

Date:

ಅಖಿಲ ಭಾರತ ಕಾಂಗ್ರೆಸ ಸಮಿತಿಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆಯವರನ್ನು ಇಂಡಿಯಾ ಮೈತ್ರಿ ಕೂಟದ ಎಲ್ಲ ಪಕ್ಷಗಳು ಪ್ರಧಾನಿ ಅಭ್ಯರ್ಥಿಯೆಂದು ಘೋಷಣೆ ಮಾಡಿದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಜನವಿರೋಧಿ ಬಿಜೆಪಿಯನ್ನು ಎದುರಿಸಲು ಬಹುದೊಡ್ಡ ಶಕ್ತಿ ದೊರೆತಂತಾಗುತ್ತದೆ ಎಂದು ಭೀಮನಗೌಡ ಪರಗೊಂಡ ಅಭಿಪ್ರಾಯಪಟ್ಟರು.‌

ವಕೀಲ ಹಾಗೂ ಬೆಂಗಳೂರು ಕಾನೂನು ವಿಭಾಗ ಕೆಪಿಸಿಸಿ ಕಾರ್ಯದರ್ಶಿ ಭೀಮನಗೌಡ ಪರಗೊಂಡ ಅವರು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾತನಾಡಿದ್ದು, ಪ್ರಕಟಣೆಗೆ ತಿಳಿಸಿದ್ದಾರೆ.

“ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ ನಾಯಕರು ಸೇರಿದಂತೆ ಮೈತ್ರಿಕೂಟದಲ್ಲಿರುವ ಎಲ್ಲ ನಾಯಕರು ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಳಿಗಾಲದ ಸಂಸತ್ ಅಧಿವೇಶನದ ಅವಧಿಯಲ್ಲಿ ಒಕ್ಕೂಟದಲ್ಲಿರುವ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ವಿರೋಧ ಪಕ್ಷದ 146ಕ್ಕೂ ಅಧಿಕ ಮಂದಿ ಸಂಸದರನ್ನು ಕಾರಣವಿಲ್ಲದೇ ಅಮಾನತು ಮಾಡಿರುವುದು ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವಭಾವಿ ಸಭೆ

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತಿನಲ್ಲಿ ವಿರೋಧ ಪಕ್ಷದ ಸಂಸದರನ್ನು ಬಿಜೆಪಿಯ ಆಡಳಿತದ ಸರ್ಕಾರ ಅಮಾನವೀಯವಾಗಿ ನಡೆಸಿಕೊಂಡ ಘಟನೆ ದೇಶದ ಘನತೆಗೆ ಕಪ್ಪು ಚುಕ್ಕೆಯಾಗಿದೆ. ಈ ಅಧಿವೇಶನಕ್ಕೂ ಮುನ್ನ ಹೊಗೆ ಬಾಂಬ್ ಹಾಕಿ, ದಾಂಧಲೆ ಮಾಡಿದ ಅಪರಿಚಿತರಿಗೆ ಸಂಸತ್ ಒಳಪ್ರವೇಶಿಸಲು ಪಾಸ್ ನೀಡಿದ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರನ್ನು ಅಮಾನತು ಮಾಡಿ ಬಂಧಿಸುವ ಬದಲಿಗೆ ಬಿಜೆಪಿ ನಾಯಕರು ವಿರೋಧ ಪಕ್ಷಗಳನ್ನು ಹತ್ತಿಕ್ಕಲು, ವಿರೋಧ ಪಕ್ಷದ ನಾಯಕರನ್ನು ಅಮಾನತು ಮಾಡಿದ್ದಾರೆ. ಈ ಮೂಲಕ ವಿರೋಧಿ ಧ್ವನಿ ಹತ್ತಿಕ್ಕಲು ಹೊರಟಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಈ ಬಗ್ಗೆ ರಾಷ್ಟ್ರಪತಿಯವರು ಮಧ್ಯಪ್ರವೇಶಿ ಮೌನ ಮುರಿದು ಮಾತನಾಡಬೇಕಿತ್ತು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...