ಅಕ್ಟೋಬರ 19ರಂದು ನಡೆಯಲಿರುವ ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನಿಂದ ರಾಜೇಂದ್ರ ಪಾಟೀಲ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಿಸಿದರು.
ಮಂಗಳವಾರ ನಗರದಲ್ಲಿನ ಖಾಸಗಿ ಹೋಟೆಲ್ನಲ್ಲಿ ನಡೆದ ಹುಕ್ಕೇರಿ ತಾಲೂಕಿನ 41 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ (ಪಿಕೆಪಿಎಸ್) ಮತದಾರರ ಸಭೆಯಲ್ಲಿ ಮಾತನಾಡಿದ ಅವರು,
“ನಮ್ಮ ಪ್ಯಾನೆಲ್ನ ಅಭ್ಯರ್ಥಿ ರಾಜೇಂದ್ರ ಪಾಟೀಲ ಅವರ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಜಿಲ್ಲೆಯ ಬಹುತೇಕ ಪಿಕೆಪಿಎಸ್ಗಳು ನಮ್ಮ ಬೆಂಬಲಕ್ಕೆ ನಿಂತಿವೆ. ಈ ಬಾರಿಗೆ ನಾವು ಕನಿಷ್ಠ 12 ಸ್ಥಾನಗಳಲ್ಲಿ ಜಯ ಸಾಧಿಸಿ, ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯುವುದು ಶತಸಿದ್ಧ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಹುಕ್ಕೇರಿ ತಾಲೂಕಿನ ಸಹಕಾರಿ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.





