2026ರ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದ ವಿದ್ಯಾರ್ಥಿ ಸನತ್ ಕುಮಾರ ರಾಜಶೇಖರ್ ಶಲವಡಿ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಜಮಖಂಡಿಯ ತುಂಗಳ ಸಂಸ್ಥೆಯ ವಿಜ್ಞಾನ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸನತ್ ಕುಮಾರ ಅವರು ಈ ಬಾರಿ ನಡೆದ ಜೆಇಇ ಮುಖ್ಯ ಪರೀಕ್ಷೆಯಲ್ಲಿ 99.5 PERCENTILE ಸಾಧನೆ ಮಾಡಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಸೋಲಿನ ಸೇಡು ತೀರಿಸಿಕೊಳ್ಳಲು 2028ರ ಚುನಾವಣೆಗೆ ಪೂರ್ವ ತಯಾರಿ ಆರಂಭಿಸಿದರೇ ಬಾಲಚಂದ್ರ ಜಾರಕಿಹೊಳಿ?
ವಿದ್ಯಾರ್ಥಿಯ ಈ ಸಾಧನೆಗೆ ಪಾಲಕರು, ಶಿಕ್ಷಕರು ಹಾಗೂ ಸ್ನೇಹಿತರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಸನತ್ ಕುಮಾರ ಅವರ ಸಾಧನೆಗೆ ಎಲ್ಲ ವಲಯಗಳಿಂದ ಪ್ರಶಂಸೆ ವ್ಯಕ್ತವಾಗಿದೆ.





