ಬೆಳಗಾವಿ | ಸ್ಮಶಾನದಿಂದ ಚುನಾವಣಾ ಪ್ರಚಾರ ಆರಂಭಿಸುತ್ತೇವೆ: ಸತೀಶ್ ಜಾರಕಿಹೊಳಿ

Date:

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಸ್ಮಶಾನದಿಂದ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

2018ರಲ್ಲಿ, ಜ್ಯೋತಿಷ್ಯದಲ್ಲಿ ಅಶುಭವೆಂದು ಹೇಳಲಾಗಿರುವ ರಾಹುಕಾಲದ ಸಮಯದಲ್ಲಿ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಿದ್ದರು. ಆ ಚುನಾವಣೆಯಲ್ಲಿ ಅವರು ಗೆದ್ದಿದ್ದರು. ಕಡಿಮೆ ಅಂತದದಲ್ಲಿ ಗೆದ್ದಿದ್ದಕ್ಕೂ ಇದೇ ಕಾರಣವೆಂದು ಕೆಲವರು ಹೇಳಿದ್ದರು. ಆದರೆ, ‘ಜ್ಯೋತಿಷ್ಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕ್ಷೇತ್ರದಲ್ಲಿ ಹೆಚ್ಚು ಪ್ರಚಾರ ಮಾಡದಿರುವುದೇ ಕಡಿಮೆ ಅಂತರದ ಗೆಲುವುಗೆ ಕಾರಣ’ ಎಂದು ಮೌಢ್ಯದ ಮಾತುಗಳನ್ನು ಜಾರಕಿಹೊಳಿ ತಳ್ಳಿಹಾಕಿದ್ದರು.

“ಚುನಾವಣೆ ಘೋಷಣೆಯಾದ ನಂತರ ನಾನು ಕ್ಷೇತ್ರಕ್ಕೆ ನಾನು ಭೇಟಿ ನೀಡಿರಲಿಲ್ಲ. ಎಲ್ಲವನ್ನೂ ನನ್ನ ಬೆಂಬಲಿಗರಿಗೆ ಬಿಟ್ಟಿದ್ದೆ. ಪ್ರಚಾರ ಮಾಡದೇ ಗೆಲ್ಲಬಹುದೇ ಎಂಬ ಪ್ರಯೋಗ ಇದಾಗಿತ್ತು” ಎಂದು ಜಾರಕಿಹೊಳಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈ ಬಾರಿ ಅವರು ಅಂತಹ ಪ್ರಯೋಗಕ್ಕೆ ಮುಂದಾಗಿಲ್ಲ. ಹೀಗಾಗಿ, ಅವರೇ ಖದ್ದು ಪ್ರಚಾರಕ್ಕೆ ಇಳಿಯಲಿದ್ದು, ಸ್ಮಶಾನದಲ್ಲಿ ಚುನಾವಣಾ ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಆರಂಭಿಸಲಿದ್ದಾರೆ.

“ಇದು ಸಂಪ್ರದಾಯಕ್ಕೆ ವಿರುದ್ಧವಲ್ಲ. ಕಳೆದ 30 ವರ್ಷಗಳಿಂದ ನಾವು ನಡೆಸುತ್ತಿರುವ ಮೂಢನಂಬಿಕೆ ವಿರೋಧಿ ಅಭಿಯಾನಗಳು ಮುಂದುವರಿಯಲಿವೆ. ಬುದ್ಧ, ಬಸವ, ಅಂಬೇಡ್ಕರ್ ತೋರಿದ ಹಾದಿಯಲ್ಲಿ ಸಾಗುತ್ತಿದ್ದೇವೆ” ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

“ತಾವು ಪ್ರಚಾರದಲ್ಲಿ ಭಾಗಿಯಾಗದಿದ್ದರೆ ಅಥವಾ ಪ್ರಚಾರ ಮಾಡದಿದ್ದರೆ, ಪ್ರತಿಸ್ಪರ್ಧಿಗಳು ತಮ್ಮ ಅನುಪಸ್ಥಿತಿಯನ್ನು ‘ಸುಳ್ಳು ಪ್ರಚಾರ’ ಮಾಡಲು ಬಳಸಿಕೊಳ್ಳಬಹುದು. ನನ್ನ ಎದುರಾಳಿಗಳಿಗೆ ಅವಕಾಶ ನೀಡಲು ನಾನು ಬಯಸುವುದಿಲ್ಲ. ನಮ್ಮ ಘೋಷವಾಕ್ಯವು ‘ಹೆಚ್ಚು ಮತಗಳ ಅಂತರದಿಂದ ನಮ್ಮನ್ನು ಗೆಲ್ಲಿಸಿ’ ಎಂದಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...