ಬೆಳಗಾವಿ : ಮೌಢ್ಯತೆಯ ಪ್ರಭಾವದಿಂದ ಸಾಮೂಹಿಕ ದೇಹತ್ಯಾಗಕ್ಕೆ ಸಿದ್ಧವಾಗಿದ್ದ ಕುಟುಂಬ

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಅನಂತಪುರ ಗ್ರಾಮದ ತುಕಾರಾಮ ಇರಕರ್ ಕುಟುಂಬ ನಾಲ್ವರು ಸದಸ್ಯರು ಹರಿಯಾಣದ ವಿವಾದಿತ ಸಂತ ಬಾಬಾ ರಾಮಪಾಲ್ ಪ್ರವಚನದ ಪ್ರಭಾವಕ್ಕೆ ಒಳಗಾಗಿ ದೇಹತ್ಯಾಗಕ್ಕೆ ಮುಂದಾಗಿದ್ದ ಘಟನೆ ಮೌಢ್ಯ ಎಷ್ಟು ಭಯಾನಕ ಪರಿಣಾಮ ಉಂಟುಮಾಡಬಲ್ಲದು ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ.

ಧರ್ಮ, ಭಕ್ತಿ ಮಾನವನ ಆತ್ಮಶಕ್ತಿ ಬೆಳೆಸುವ ಶಕ್ತಿಯಾಗಬೇಕು. ಆದರೆ ಕೆಲವರು ಇದನ್ನು ದುರುಪಯೋಗ ಪಡಿಸಿಕೊಂಡು ಮೌಢ್ಯ, ಅಂಧಶ್ರದ್ಧೆ ಮತ್ತು ಪ್ರಾಣತ್ಯಾಗದ ಭ್ರಮೆಗಳನ್ನು ಬಿತ್ತುವಾಗ, ಬಲಿಯಾಗುವವರು ಸಾಮಾನ್ಯ ಕುಟುಂಬಗಳೇ. “ಬಾಬಾ ನಮ್ಮನ್ನು ಕರೆದೊಯ್ಯುತ್ತಾರೆ, ಮೋಕ್ಷ ಕೊಡಿಸುತ್ತಾರೆ” ಎಂಬ ಭ್ರಮೆಯಿಂದಲೇ ಇರಕರ್ ಕುಟುಂಬ ಸಾಮೂಹಿಕ ದೇಹತ್ಯಾಗಕ್ಕೆ ಸಿದ್ಧವಾಗಿತ್ತು.

ಘಟನೆ ಬೆಳಕಿಗೆ ಬಂದ ನಂತರ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾವಿ ಅಥಣಿ ಡಿವೈಎಸ್ಪಿ ಪ್ರಶಾಂತ ಮುನ್ನೋಳ್ಳಿ ಹಾಗೂ ಕವಲಗುಡ್ಡದ ಅಮರೇಶ್ವರ ಮಹಾರಾಜರು ತುಕಾರಾಮ ಇರಕರ್ ಕುಟುಂಬ ಭೇಟಿ ಮಾಡಿ ಬುದ್ದಿವಾದ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಬಾ ರಾಮಪಾಲ್ ಮಹಾರಾಷ್ಟ್ರ ಪೋಲಿಸರ ವಶದಲ್ಲಿದ್ದು ಮೌಡ್ಯಕ್ಕೆ ಬಲಿಯಾಗದೆ ಉತ್ತಮ ಜೀವನ ಸಾಗಿಸುವಂತೆ ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ ಇದರಿಂದ ಕುಟುಂಬ ಸಾವಿನ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ತಿಳಿದು ಬಂದಿದೆ

ಅಧಿಕಾರಿಗಳ ತ್ವರಿತ ಜಾಗೃತಿ, ಸ್ಥಳೀಯ ಧಾರ್ಮಿಕ ಮುಖಂಡರ ಬುದ್ಧಿವಾದದಿಂದ ಈ ಕುಟುಂಬ ದೇಹತ್ಯಾಗದಿಂದ ಹಿಂದೆ ಸರಿದಿರುವುದು ಸಮಾಧಾನದ ಸಂಗತಿ. ಆದರೆ ಮೌಢ್ಯವನ್ನು ತಡೆಗಟ್ಟದೆ ಇದ್ದರೆ ನಾಳೆ ಇನ್ನೂ ಅನೇಕ ಕುಟುಂಬಗಳು ಹಾನಿಗೊಳಗಾಗುವ ಭೀತಿ ಇದೆ.

ಮೌಢ್ಯ ನಿರ್ಮೂಲನೆಗೆ ಸರ್ಕಾರ, ಸಂಘಟನೆಗಳು, ಮಾಧ್ಯಮಗಳು ಹೆಚ್ಚಿನ ಹೊಣೆ ಹೊತ್ತು ಕಾರ್ಯ ನಿರ್ವಹಿಸಬೇಕು.

ಅನಂತಪುರ ಗ್ರಾಮದ ಈ ಘಟನೆ ಅಂಧಶ್ರದ್ಧೆ ಹಾಗೂ ಮೌಢ್ಯದ ಅಪಾಯವನ್ನು ಎಚ್ಚರಿಸುವ ಗಂಭೀರ ಪಾಠವಾಗಿದೆ. ತುಕಾರಾಮ ಇರಕರ್ ಕುಟುಂಬ ಅಧಿಕಾರಿಗಳ ಜಾಗೃತಿ ಮತ್ತು ಸಮಾಜಮುಖಿ ವ್ಯಕ್ತಿಗಳ ಬುದ್ಧಿವಾದದಿಂದ ದೇಹತ್ಯಾಗದ ನಿರ್ಧಾರದಿಂದ ಹಿಂದೆ ಸರಿದರೂ, ಇದೇ ಘಟನೆ ಮತ್ತೆ ಮರುಕಳಿಸದಂತೆ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗುವುದು ಅಗತ್ಯ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...