ಬೆಳಗಾವಿ | ತಾಂಡಾದ ಅಂಗನವಾಡಿ ಮಕ್ಕಳ ಸುರಕ್ಷತೆಗೆ ಕ್ರಮ ತಾ.ಪಂ. ಅಧಿಕಾರಿಗಳ ಭರವಸೆ

Date:

ಕಳೆದ ಮೂರು ವರ್ಷಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ತಾಂಡಾ ನಿವಾಸಿಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತಿದ್ದಾರೆ. 2019ರಲ್ಲಿ ಸ್ಥಾಪಿತವಾದ ನೀರು ಶುದ್ಧೀಕರಣ ಘಟಕ ಇನ್ನೂ ಕಾರ್ಯಾರಂಭವಾಗದೆ, ಗ್ರಾಮಸ್ಥರು ಸಮಸ್ಯೆಗೆ ಸಿಲುಕಿದ್ದಾರೆ. ಜೊತೆಗೆ, ಅಂಗನವಾಡಿ ಕೇಂದ್ರಕ್ಕೆ ಗೇಟ್ ಇಲ್ಲದ ಕಾರಣ ಮಕ್ಕಳ ಭದ್ರತೆ ಗಂಭೀರ ಸಮಸ್ಯೆಯಾಗಿದೆ.

1000020837

ಶುದ್ದ ನೀರಿಲ್ಲ, ಸ್ಪಂದನೆಯಿಲ್ಲ – ಅಧಿಕಾರಿಗಳ ಮೇಲೆ ಜನರ ಆಕ್ರೋಶ

“ಶುದ್ದ ನೀರು ಇಲ್ಲದೇ ಪರದಾಡುತ್ತಿದ್ದರೂ, ನಮ್ಮ ದೂರುಗಳಿಗೆ ಪ್ರತಿಕ್ರಿಯೆಯೇ ಇಲ್ಲ,” ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ಈ ಸಮಸ್ಯೆಯನ್ನು ಅನೇಕ ಬಾರಿ ತರಲಾದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000020841

ಅಂಗನವಾಡಿ ಮಕ್ಕಳ ಸುರಕ್ಷತೆ ಅಪಾಯದಲ್ಲಿ

ಸಾಲಾಪೂರ ತಾಂಡಾದ ಅಂಗನವಾಡಿ ಕೇಂದ್ರಕ್ಕೆ ಗೇಟ್ ಇಲ್ಲ. “ಆವರಣದಲ್ಲಿ ಇಂಗು ಗುಂಡಿ ಇರುವುದರಿಂದ ಹಲವು ಮಕ್ಕಳು ಬಿದ್ದು ಗಾಯಗೊಂಡಿದ್ದಾರೆ. ಈ ಬಗ್ಗೆ ಅನೇಕ ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ,” ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಸೌಲಭ್ಯಗಳ ಕೊರತೆ – ಜನಜೀವನ ಸಂಕಷ್ಟ

ಸ್ಥಳೀಯ ನಿವಾಸಿ ಪಾಂಡುರಂಗ ಲಮಾಣಿ ಈ ದಿನ ಡಾಟ್ ಕಾಮ್ ಜತೆ ಮಾತನಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಾ, “ನಮ್ಮ ತಾಂಡಾದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮೂರು ವರ್ಷಗಳಿಂದ ನಿಷ್ಕ್ರಿಯವಾಗಿದೆ. ಸಮುದಾಯ ಭವನವಿಲ್ಲ, ಅಂಗನವಾಡಿಗೆ ಗೇಟ್ ಇಲ್ಲ. ಈ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರೂ, ಯಾವುದೇ ಪ್ರಯೋಜನವಾಗಿಲ್ಲ, ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ” ಎಂದು ಹೇಳಿದರು.

ಅಧಿಕಾರಿಗಳ ಸ್ಪಂದನೆ – ಭರವಸೆ ಪಾಲನೆಯಾಗುವುದಾ?

ಈ ದಿನ ಡಾಟ್ ಕಾಮ್ ರಾಮದುರ್ಗ ತಾಲೂಕು ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ತಕ್ಷಣ ಸ್ಪಂದಿಸಿದರು. “ಅಂಗನವಾಡಿ ಕೇಂದ್ರಕ್ಕೆ ಗೇಟ್ ಅಳವಡಿಸಲು ಹಾಗೂ ಇಂಗು ಗುಂಡಿಯನ್ನು ಮುಚ್ಚುವಂತೆ ಸಂಬಂಧಿತ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಮೂರು ದಿನಗಳೊಳಗೆ ಸಮಸ್ಯೆ ಬಗೆಹರಿಸಲಾಗುವುದು,” ಎಂದು ಭರವಸೆ ನೀಡಿದ್ದಾರೆ.

ಅಧಿಕಾರಿಗಳ ಈ ಭರವಸೆ ಈಡೇರುತ್ತದೆಯಾ? ಗ್ರಾಮಸ್ಥರ ತೊಂದರೆಗಳಿಗೆ ಇತ್ಯರ್ಥ ಸಿಗುತ್ತದೆಯಾ? ಇದನ್ನು ಕಾದು ನೋಡಬೇಕಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...