ಬೆಳಗಾವಿ | ದಲಿತ ವಿದ್ಯಾರ್ಥಿ ಪರಿಷತ್ತಿಗೆ ಅಂಬೇಡ್ಕರ್ ಮಾರ್ಗವೇ ಅಂತಿಮ ಮಾರ್ಗ : ಶ್ರೀನಾಥ ಪೂಜಾರಿ

Date:

ಸುಮಾರು ಎರಡು ದಶಕಗಳಿಂದ ನಾಡಿನ ವಿದ್ಯಾರ್ಥಿ ಯುವಜನರ ಹಕ್ಕುಗಳ ರಕ್ಷಣೆ ಜೊತೆಗೆ ಶೈಕ್ಷಣಿಕ ಅಭಿವೃದ್ಧಿಗೆ ಹೋರಾಡುತ್ತಿರುವ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಾರ್ಗವೇ ಅಂತಿಮ ಮಾರ್ಗವಾಗಿದೆ ಎಂದು ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಅವರು ಬೆಳಗಾವಿ ನಗರದಲ್ಲಿ ನಡೆದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳ ಪ್ರಚಾರ ಮತ್ತು ಪ್ರಸಾರ ಮಾಡುವ ಜೊತೆಗೆ ಅವರು ತೋರಿದ ಮಾರ್ಗದಲ್ಲಿ ನಡೆದರೆ ಮಾತ್ರ ಶೋಷಿತ ಸಮುದಾಯದ ವಿಮೋಚನೆಯನ್ನು ಹೊಂದಬಹುದು. ಇಂದು ಶೋಷಿತ ಸಮುದಾಯದ ತಕ್ಕಮಟ್ಟಿಗೆ ಅಭಿವೃದ್ಧಿ ಕಾಣುತ್ತಿದೆ ಎಂದರೆ ಅದಕ್ಕೆ ನಮ್ಮ ಮೂಲ ಮಹಾಪುರುಷರಾದ ಬುದ್ಧ, ಬಸವ, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಶಾಹು ಮಹಾರಾಜ, ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಒಳಗೊಂಡ ಹೋರಾಡಿದ ಅನೇಕ ಸಮತಾವಾದಿ ಮಹಾಪುರುಷರ ತ್ಯಾಗ ಮತ್ತು ಬಲಿದಾನದ ಇದರ ಹಿಂದಿದೆ. ನಾವು ಇಂದು ಪಡೆಯುತ್ತಿರುವ ಶಿಕ್ಷಣ ನಮ್ಮ ಮಹಾಪುರುಷರ ಹೋರಾಟದ ಫಲವಾಗಿ ಕೊಡುಗೆಯಾಗಿ ಸಿಕ್ಕಿದ್ದು, ಈ ಕಾರಣಕ್ಕೆ ನಾವು ಇಂದು ಪಡೆಯುವ ಶಿಕ್ಷಣದಿಂದ ನಮ್ಮನ್ನು ಒಳಗೊಂಡ ಇಡೀ ಶೋಷಿತ ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮಿಸಬೇಕಿದೆ ಹಾಗೂ ಹೋರಾಡಬೇಕಿದೆ ಎಂದು ಶ್ರೀನಾಥ ಪೂಜಾರಿ ಹೇಳಿದರು.

ಈ ವೇಳೆ ಬೆಳಗಾವಿ ಜಿಲ್ಲಾ ಸಂಚಾಲಕ ಆರ್ದಶ ಗಸ್ತಿ ಮಾತನಾಡುತ್ತ, ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಇವತ್ತು ಎಲ್ಲ ವರ್ಗದ ವಿದ್ಯಾರ್ಥಿ ಯುವಜನರ ಶೈಕ್ಷಣಿಕ ಹಕ್ಕುಗಳ ಕಾಪಾಡಲು ಮತ್ತು ಪಡೆಯಲು ಹೋರಾಡುತ್ತಿದೆ. ಇಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿ ಯುವಜನರ ನಾಯಕತ್ವ ಕಾಣಬಹುದು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿಯೂ ವಿದ್ಯಾರ್ಥಿ ಯುವಜನರ ಹಕ್ಕುಗಳಿಗಾಗಿ ಹೋರಾಡಬೇಕಿದೆ. ಈಗಾಗಲೇ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಅನುಭವಿಸುತ್ತಿದ್ದಾರೆ, ಅವರಿಗೆ ಅವರ ಶೈಕ್ಷಣಿಕ ಹಕ್ಕುಗಳನ್ನು ದೊರಕಿಸಿಕೊಂಡಲು ಒಂದಾಗಿ ಹೋರಾಡೋಣ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಭೆಯಲ್ಲಿ ನೂತನವಾಗಿ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಜಿಲ್ಲಾ ಉಪಾಧ್ಯಕ್ಷರಾಗಿ ಸುದೀಪ್ ಐಹೊಳೆ, ಮಹಾಂತೇಶ್ ಸನದಿ, ಶಾಮ್ ಗಾಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಮಾಂಗ ಮತ್ತು ಅಥಣಿ ತಾಲ್ಲೂಕು ಅಧ್ಯಕ್ಷರಾಗಿ ಅಕ್ಷಯ್ ಮ್ಯಾಗೇರಿ, ಉಪಾಧ್ಯಕ್ಷರಾಗಿ ರಾಹುಲ್ ಕಾಂಬಳೆ, ಬೆಳಗಾವಿ ತಾಲ್ಲೂಕು ಅಧ್ಯಕ್ಷರಾಗಿ ಶಿವು ಕಾಂಬಳೆ, ಉಪಾಧ್ಯಕ್ಷರಾಗಿ ಅರುಣ್ ಹರಿಜನ, ಚಿಕ್ಕೊಡಿ ತಾಲ್ಲೂಕ ಅಧ್ಯಕ್ಷರಾಗಿ ಅಕ್ಷಯ್ ಕಾಂಬಳೆ, ಉಪಾಧ್ಯಕ್ಷರಾಗಿ ರಂಜಿತ್ ಕಾಂಬಳೆ, ಕಾಗವಾಡ ತಾಲ್ಲೂಕು ಅಧ್ಯಕ್ಷರಾಗಿ ವಿನೋದ್ ಕಾಂಬಳೆ, ಉಪಾಧ್ಯಕ್ಷರಾಗಿ ಪವನ ಬಡಿಗೇರ್, ಹುಕ್ಕೇರಿ ತಾಲ್ಲೂಕು ಅಧ್ಯಕ್ಷರಾಗಿ ಅಮಿತ ಪೂಜಾರಿ, ಉಪಾಧ್ಯಕ್ಷರಾಗಿ ತುಷಾರ ಪೂಜಾರಿ, ನಿಪ್ಪಾಣಿ ತಾಲ್ಲೂಕು ಅಧ್ಯಕ್ಷರಾಗಿ ರಾಹುಲ್ ಜೈಕರ್, ಉಪಾಧ್ಯಕ್ಷರಾಗಿ ಶಿವಮ್ ಕಾಂಬಳೆ, ರಾಯಬಾಗ ತಾಲ್ಲೂಕು ಅಧ್ಯಕ್ಷರಾಗಿ ಓಂಕಾರ್ ವಡೆಯರ, ಉಪಾಧ್ಯಕ್ಷರಾಗಿ ಪ್ರವೀಣ ಗೆಣ್ಣೆನವರ. ಮೂಡಲಗಿ ತಾಲ್ಲೂಕ ಅಧ್ಯಕ್ಷರಾಗಿ ಪರಶುರಾಮ್ ಭಜಂತ್ರಿ ಉಪಾಧ್ಯಕ್ಷರಾಗಿ ಲಖನ ಕಿಚಡಿ. ಬೈಲಹೊಂಗಲ ತಾಲ್ಲೂಕ ಅಧ್ಯಕ್ಷರಾಗಿ ಸುರೇಶ ಲೆಂಕನಟ್ಟಿ ಉಪಾಧ್ಯಕ್ಷರಾಗಿ ವಿಜಯ ಕೊಟ್ಟೆಗೇರ ಅವರನ್ನು ಆಯ್ಕೆ ಮಾಡಲಾಯಿತು. ಕೊನೆಯಲ್ಲಿ ಆಯ್ಕೆಗೊಂಡ ಎಲ್ಲ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...