ಬೆಳಗಾವಿಯ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಸುಕಿನಜಾವ ಮತ್ತೊಂದು ಕೃಷ್ಣಮೃಗ ಸತ್ತು ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಮೃಗಾಲಯದಲ್ಲಿ ಸಾವುಗಳ ಸರಣಿ ಮುಂದುವರಿಯುತ್ತಿದ್ದು, ಸಾವಿನ ಸಂಖ್ಯೆ ಈಗ 31ಕ್ಕೆ ತಲುಪಿದೆ.
ಸಾವುಗಳ ಹೆಚ್ಚಳದಿಂದ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ಜಿಲ್ಲೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. “ಸೋಂಕು ಇತರ ಪ್ರಾಣಿಗಳಿಗೆ ಹರಡದಂತೆ ತಕ್ಷಣ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು,” ಎಂದು ಅವರು ಸೂಚಿಸಿದರು.
ಈ ನಡುವೆ, ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಲು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎನ್. ರಂಗಸ್ವಾಮಿ ಮೃಗಾಲಯಕ್ಕೆ ಆಗಮಿಸಿದ್ದಾರೆ. ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಮೃಗಗಳ ಸಾವಿನ ಕಾರಣ ಮತ್ತು ಕೈಗೊಂಡಿರುವ ನಿಯಂತ್ರಣ ಕ್ರಮಗಳ ಕುರಿತು ವರದಿ ಕೇಳಿದ್ದಾರೆ.





